ನವದೆಹಲಿ: 71 ಗಣರಾಜ್ಯೋತ್ಸವದಂದು ಕಾಂಗ್ರೆಸ್ ಪಕ್ಷವು ಪ್ರಧಾನಿ ಮೋದಿಯವರೆಗೆ ಭಾರತ ಸಂವಿಧಾನದ ಪ್ರತಿಯನ್ನು ಕಳಿಸಿದೆ.


COMMERCIAL BREAK
SCROLL TO CONTINUE READING

ಈ ಕುರಿತಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್ 'ಆತ್ಮೀಯ ಪ್ರಧಾನ ಮಂತ್ರಿ, ಸಂವಿಧಾನವು ಶೀಘ್ರದಲ್ಲೇ ನಿಮ್ಮನ್ನು ತಲುಪುತ್ತಿದೆ. ನೀವು ದೇಶವನ್ನು ವಿಭಜಿಸಲು ಸಮಯ ಸಿಕ್ಕಾಗ, ದಯವಿಟ್ಟು ಅದನ್ನು ಓದಿ. ಅಭಿನಂದನೆಗಳು, ಕಾಂಗ್ರೆಸ್" ಎಂದು ಪಕ್ಷವು ಅಮೆಜಾನ್ ರಶೀದಿಯ ಸ್ನ್ಯಾಪ್‌ಶಾಟ್ ಜೊತೆಗೆ ಟ್ವೀಟ್ ಮಾಡಿದೆ.



ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಹಾತ್ಮ ಗಾಂಧಿಯವರ ಸ್ಮರಣಾರ್ಥ ರಾಜ್‌ಘಾಟ್‌ನಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನಾ ಸಭೆಯಲ್ಲಿ ಮುನ್ನುಡಿ ಓದುತ್ತಿರುವ ವೀಡಿಯೊಗಳನ್ನು ಕಾಂಗ್ರೆಸ್ ಟ್ವೀಟ್ ಮಾಡಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಸಂವಿಧಾನವನ್ನು ಉಲ್ಲಂಘಿಸುತ್ತದೆ ಎಂದು ತಿಳಿಸುವ ನಿಟ್ಟಿನಲ್ಲಿ  ಕಾಂಗ್ರೆಸ್ ಪಕ್ಷವು ಸಂವಿಧಾನದ ಹಲವು ವಿಧಿಗಳನ್ನು ಉಲ್ಲೇಖಿಸಿ ಟ್ವೀಟ್ ಮಾಡಿದೆ.



ಪಶ್ಚಿಮ ಬಂಗಾಳದಲ್ಲಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಂವಿಧಾನವನ್ನು ರಕ್ಷಿಸಲು ಮತ್ತು ಅದರ ತತ್ವಗಳನ್ನು ಎತ್ತಿಹಿಡಿಯುವ ಪ್ರತಿಜ್ಞೆಯನ್ನು ತೆಗೆದುಕೊಳ್ಳಬೇಕೆಂದು ಜನರನ್ನು ಒತ್ತಾಯಿಸಿದರು. "ಗಣರಾಜ್ಯೋತ್ಸವದಲ್ಲಿ ನಮ್ಮ  ಸಂವಿಧಾನವನ್ನು ರಕ್ಷಿಸಲು ಮತ್ತು ತತ್ವಗಳನ್ನು ಎತ್ತಿಹಿಡಿಯುವುದಾಗಿ ಪ್ರತಿಜ್ಞೆ ಮಾಡೋಣ ಸಾರ್ವಭೌಮ, ಸಮಾಜವಾದಿ, ಜಾತ್ಯತೀತ, ಪ್ರಜಾಪ್ರಭುತ್ವ, ಗಣರಾಜ್ಯ, ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ, ಮುನ್ನುಡಿಯಲ್ಲಿ ಪ್ರತಿಪಾದಿಸಲಾಗಿದೆ "ಎಂದು ಟ್ವೀಟ್ ಮಾಡಿದ್ದಾರೆ.



ಅಖಿಲ ಭಾರತ ಮಜ್ಲಿಸ್-ಎ-ಇಟ್ಟೇಹದುಲ್ ಮುಸ್ಲಿಮೀನ್‌ನ ಮುಖ್ಯಸ್ಥ ಅಸದುದ್ದೀನ್ ಒವೈಸಿ ತ್ರಿವರ್ಣವನ್ನು ಹಾರಿಸಿ ಹೈದರಾಬಾದ್‌ನಲ್ಲಿ ಸಂವಿಧಾನದ ಮುನ್ನುಡಿಯನ್ನು ಓದಿದರು. ಕೇರಳದಲ್ಲಿ, ಆಡಳಿತಾರೂಢ ಸಿಪಿಐ (ಎಂ) ನೇತೃತ್ವದ ಎಡಪಕ್ಷಗಳು ಸಿಎಎ ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಉತ್ತರದಿಂದ ರಾಜ್ಯದ ದಕ್ಷಿಣ ಭಾಗಕ್ಕೆ 620 ಕಿ.ಮೀ ಮಾನವ ಸರಪಳಿಯನ್ನು ರಚಿಸಿತು.