)
Constitution Day: ಸಂವಿಧಾನ ದಿನದಂದು ಪ್ರಥಮ ಬಾರಿಗೆ ವೋಟ್ ಮಾಡಿದ ಯುವ ಮತದಾರರಿಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ತಿಳಿಸಿದ್ದಾರೆ. ನವೆಂಬರ್ ೨೬ರ ಸಂವಿಧಾನ ದಿನಾಚರಣೆಯ ಪ್ರಯುಕ್ತ ದೇಶದ ಜನರನ್ನುದ್ದೇಶಿಸಿ ಮಾತನಾಡಿದ ಅವರು, ʼದೇಶದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನಾತ್ಮಕ ಹಕ್ಕುಗಳನ್ನ ಗೌರವಿಸಬೇಕು. ನಾಗರಿಕರು ತಮ್ಮ ಸಾಂವಿಧಾನಿಕ ಕರ್ತವ್ಯಗಳನ್ನ ಪೂರೈಸುವುದರಿಂದ ಬಲಿಷ್ಠ ಪ್ರಜಾಪ್ರಭುತ್ವಕ್ಕೆ ಅಡಿಪಾಯವಾಗುತ್ತದೆʼ ಎಂದು ತಿಳಿಸಿದರು.
ಮತದಾನದ ಹಕ್ಕನ್ನ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನ ಬಲಪಡಿಸುವ ಜವಾಬ್ದಾರಿಯನ್ನ ಪ್ರಧಾನಿ ಮೋದಿ ಒತ್ತಿ ಹೇಳಿದರು. 18 ವರ್ಷ ತುಂಬಿದ ಮೊದಲ ಬಾರಿಗೆ ಮತದಾನ ಮಾಡಿದ ಯುವ ಮತದಾರರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವ ಮೂಲಕ ದೇಶದ ಎಲ್ಲಾ ಶಾಲಾ ಮತ್ತು ಕಾಲೇಜುಗಳಲ್ಲಿ ಸಂವಿಧಾನ ದಿನವನ್ನು ಆಚರಿಸಬೇಕೆಂದು ಸೂಚಿಸಿದರು.
ಕರ್ತವ್ಯಗಳ ನಿರ್ವಹಣೆಯಿಂದ ಹಕ್ಕುಗಳ ರಕ್ಷಣೆಯಾಗುತ್ತವೆ ಎಂಬ ಮಹಾತ್ಮ ಗಾಂಧಿಯವರ ನಂಬಿಕೆಯನ್ನ ನೆನಪಿಸಿಕೊಂಡ ಪ್ರಧಾನಿ ಮೋದಿಯವರು, ಕರ್ತವ್ಯಗಳನ್ನ ಜವಾಬ್ದಾರಿಯುತ ನಾಗರಿಕರಾಗಿ ನಿರ್ವಹಿಸುವುದು ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗೆ ಅಡಿಪಾಯವಾಗುತ್ತದೆ ಎಂದರು.
ಇಂದು ತೆಗೆದುಕೊಳ್ಳಲಾದ ನೀತಿಗಳು ಮತ್ತು ನಿರ್ಧಾರಗಳು ಮುಂದಿನ ಪೀಳಿಗೆಯ ಜೀವನವನ್ನ ರೂಪಿಸುತ್ತವೆ. ಭಾರತವು ವಿಕ್ಷಿತ ಭಾರತದ ದೃಷ್ಟಿಕೋನದತ್ತ ಸಾಗುತ್ತಿರುವಾಗ ನಾಗರಿಕರು ತಮ್ಮ ಕರ್ತವ್ಯಗಳನ್ನ ತಮ್ಮ ಮನಸ್ಸಿನಲ್ಲಿ ಪ್ರಮುಖವಾಗಿ ಇರಿಸಬೇಕೆಂದು ಇದೇ ವೇಳೆ ಪ್ರಧಾನಿ ಮೋದಿ ತಿಳಿಸಿದರು.
ಇದನ್ನೂ ಓದಿ: ಬೆಂಬಲಿಗರು ದೆಹಲಿ ಭೇಟಿ ವಿಚಾರಕ್ಕೆ ಡಿಕೆ ಪ್ರತಿಕ್ರಿಯೆ
ಈ ಬಗ್ಗೆ ಟ್ವೀಟ್ ಕೂಡ ಮಾಡಿರುವ ಪ್ರಧಾನಿ ಮೋದಿಯವರು, "ನಮ್ಮ ಸಂವಿಧಾನವು ಮಾನವ ಘನತೆ, ಸಮಾನತೆ ಮತ್ತು ಸ್ವಾತಂತ್ರ್ಯಕ್ಕೆ ಅತ್ಯಂತ ಪ್ರಾಮುಖ್ಯತೆಯನ್ನ ನೀಡುತ್ತದೆ. ಇದು ನಮಗೆ ಹಕ್ಕುಗಳೊಂದಿಗೆ ಅಧಿಕಾರ ನೀಡುವುದರ ಜೊತೆಗೆ, ನಾಗರಿಕರಾಗಿ ನಮ್ಮ ಕರ್ತವ್ಯಗಳನ್ನೂ ನೆನಪಿಸುತ್ತದೆ, ಅದನ್ನ ನಾವು ಯಾವಾಗಲೂ ಪೂರೈಸಲು ಪ್ರಯತ್ನಿಸಬೇಕು. ಈ ಕರ್ತವ್ಯಗಳು ಬಲವಾದ ಪ್ರಜಾಪ್ರಭುತ್ವದ ಅಡಿಪಾಯವಾಗಿದೆ" ಎಂದು ಹೇಳಿದ್ದಾರೆ.
ಇದೇ ವೇಳೆ ಸಂವಿಧಾನ ನಿರ್ಮಾತೃಗಳಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ, "ವಿಕ್ಷಿತ ಭಾರತವನ್ನು ನಿರ್ಮಿಸುವ ನಮ್ಮ ಪ್ರಯತ್ನದಲ್ಲಿ ಅವರ ದೂರದೃಷ್ಟಿಯು ನಮ್ಮನ್ನ ಪ್ರೇರೇಪಿಸುತ್ತಲೇ ಇದೆ" ಎಂದು ಹೇಳಿದ್ದಾರೆ.