ಕೊರೋನಾ ಪೀಡಿತರ ಸಂಖ್ಯೆ, 24,506ಕ್ಕೆ, ಮೃತಪಟ್ಟವರ ಸಂಖ್ಯೆ 776ಕ್ಕೆ ಏರಿಕೆ
ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈಗ ಮೇ 3ರ ಬಳಿಕ ಲಾಕ್ಡೌನ್ ಅನ್ನು ತೆರವುಗೊಳೊಸಬೇಕೋ ಅಥವಾ ಮುಂದುವರೆಸಬೇಕೋ ಎಂಬ ಗೊಂದಲ ಕೇಂದ್ರ ಸರ್ಕಾರವನ್ನು ಕಾಡುತ್ತಿದೆ.
ನವದೆಹಲಿ: ಲಾಕ್ಡೌನ್ ನಂಥ ಪರಿಣಾಮಕಾರಿ ಕ್ರಮ ಕೈಗೊಂಡ ಬಳಿಕವೂ, ಪರೀಕ್ಷೆಗಳನ್ನು ತೀವ್ರಗೊಳಿಸುತ್ತಿರುವ ನಡುವೆಯೂ ದೇಶದಲ್ಲಿ ಕೊರೋನಾ ಕೋವಿಡ್-19 (Covid-19) ಪೀಡಿತರ ಸಂಖ್ಯೆ 24,506ಕ್ಕೆ ಏರಿಕೆಯಾಗಿದೆ. ಅಲ್ಲದೆ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 775ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿಗಳ ಪ್ರಕಾರ ದೇಶದಲ್ಲಿ ಮೊದಲ ಬಾರಿಗೆ ಲಾಕ್ಡೌನ್ (Lockdown)ಘೋಷಣೆ ಮಾಡುವ ಮುನ್ನ ಏಪ್ರಿಲ್ 19ರಂದು ಇಡೀ ದೇಶದಲ್ಲಿ ಇದ್ದ ಕೊರೋನಾ ಪೀಡಿತರ ಸಂಖ್ಯೆ ಕೇವಲ 166. ಆದರೀಗ ಆ ಸಂಖ್ಯೆ 24,506ಕ್ಕೆ ಏರಿಕೆಯಾಗಿದೆ. ಕೊರೋನಾದಿಂದ ಗುಣಮುಖರಾದವರು 5,062 ಜನ ಮಾತ್ರ.
ಕರೋನಾವೈರಸ್ (Coronavirus) ನಿಯಂತ್ರಿಸಲು ಮೊದಲಿವೆ ಮಾರ್ಚ್ 25ರಿಂದ ಏಪ್ರಿಲ್ 14ರವರೆಗೆ ಲಾಕ್ಡೌನ್ ಜಾರಿಗೊಳಿಸಲಾಗಿತ್ತು. ಆದರೂ ಕೊರೋನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಏಪ್ರಿಲ್ 15ರಿಂದ ಮೇ 3ರವರೆಗೆ ಎರಡನೇ ಹಂತದ ಲಾಕ್ಡೌನ್ ಜಾರಿಗೊಳಿಸಲಾಗಿತ್ತು. ಈ ನಡುವೆ ದೇಶದ ಆರ್ಥಿಕತೆ ಮತ್ತು ಉತ್ಪಾದನೆಗೆ ಧಕ್ಕೆ ಆಗಬಾರದೆಂದು ಮತ್ತು ದೇಶದ ಜನ ಜೀವನ ಅಸ್ತವ್ಯಸ್ತ ಆಗುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 20ರಿಂದ ಲಾಕ್ಡೌನ್ ನಿಯಮಗಳನ್ನು ಸಡಿಲಗೊಳಿಸಲಾಗಿತ್ತು. ಒಟ್ಟು ಈವರೆಗೆ 4 ಬಾರಿ ಲಾಕ್ಡೌನ್ ನಿಯಮಗಳನ್ನು ಸಡಿಲಿಸಲಾಗಿದೆ.
ಕಾರ್ಮಿಕರಿಗೆ ಗುಡ್ ನ್ಯೂಸ್: ಕೈಗಾರಿಕೆ ಪ್ರಾರಂಭಕ್ಕೆ ಲಾಕ್ಡೌನ್ನಿಂದ ವಿನಾಯಿತಿ
ಈಗ ಮೇ 3ರ ಬಳಿಕ ಲಾಕ್ಡೌನ್ ಅನ್ನು ತೆರವುಗೊಳೊಸಬೇಕೋ ಅಥವಾ ಮುಂದುವರೆಸಬೇಕೋ ಎಂಬ ಗೊಂದಲ ಕೇಂದ್ರ ಸರ್ಕಾರವನ್ನು ಕಾಡುತ್ತಿದೆ. ಲಾಕ್ಡೌನ್ ತೆರೆವುಗೊಳಿಸಿದರೆ ಕೊರೋನಾ ಸೋಂಕು ಹರಡುವಿಕೆ ತೀವ್ರಗೊಳ್ಳಬಹುದು, ಲಾಕ್ಡೌನ್ ಮುಂದುವರೆಸಿದರೆ ದೇಶದ ಆರ್ಥಿಕತೆ ಕುಸಿಯಲಿವೆ ಎಂಬ ಆತಂಕ ಇದೆ. ಈ ಹಿನ್ನೆಲೆಯಲ್ಲಿ ಯಾವ ತೀರ್ಮಾನ ಕೈಗೊಳ್ಳಬೇಕೆಂದು ಕೇಂದ್ರ ಸರ್ಕಾರ ಗೊಂದಲಕ್ಕೆ ಸಿಲುಕಿದೆ.
COVID-19 ಲಾಕ್ಡೌನ್ ನಿಯಮ ಸಡಿಲಿಸಿದ ಕೆಂದ್ರ ಗೃಹ ಸಚಿವಾಲಯ, ತೆರೆಯಲಿದೆ ಈ ಅಂಗಡಿಗಳು
ಏಪ್ರಿಲ್ 27ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಚರ್ಚೆ ನಡೆಸಲಿದ್ದಾರೆ. ಸಭೆಯ ಬಳಿಕ ಮೇ 3ರ ಬಳಿಕವೂ ಲಾಕ್ಡೌನ್ ಮುಂದುವರೆಸಬೇಕೊ ಬೇಡವೋ ಎಂಬ ಬಗ್ಗೆ ಕೇಂದ್ರ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.