Delhi Chalo march postponed for 2 days : ದೆಹಲಿ ಚಲೋ ಮೆರವಣಿಗೆಯನ್ನು 2ದಿನ ಮುಂದೂಡಿರುವುದಾಗಿ ರೈತ ನಾಯಕ ಸರ್ವನ್ ಸಿಂಗ್ ಪಂಧೇರ್ ಮಾಹಿತಿ ನೀಡಿದ್ದಾರೆ. ಪ್ರತಿಭಟನೆಯಲ್ಲಿ ನಿರತನಾಗಿದ್ದ ಓರ್ವ ರೈತ ಮೃತ ಪಟ್ಟಿರುವುದು ಇದಕ್ಕೆ ಕಾರಣವಾಗಿದೆ ಎಂದಿದ್ದಾರೆ. 


COMMERCIAL BREAK
SCROLL TO CONTINUE READING

ನವದೆಹಲಿಯಲ್ಲಿ ದೆಹಲಿ ಚಲೋ ಮೆರವಣಿಗೆಯನ್ನು 2ದಿನ ಮುಂದೂಡಿರುವುದಾಗಿ ರೈತ ನಾಯಕ ಸರ್ವನ್ ಸಿಂಗ್ ಪಂಧೇರ್ ಮಾಹಿತಿ ನೀಡಿದ್ದು,  ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿ ನಿರ್ಧರಿಸಿದೆ. 


ಖನೌರಿ ಗಡಿ ಪ್ರದೇಶದಲ್ಲಿ ಪ್ರತಿಭಟನಾ ನಿರತ ರೈತ ಸಾವನ್ನಪ್ಪಿರುವ ಘಟನೆ ಹಾಗೂ ಇನ್ನಿತರ ಪರಿಸ್ಥಿತಿಗಳ ಬಗ್ಗೆ ರೈತರು ಚರ್ಚೆ ನಡೆಸಲಿದ್ದಾರೆ. ನಮ್ಮ ಮುಂದಿನ ನಡೆಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ, ಆ ನಂತರವಷ್ಟೇ ಮುಂದಿನ ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.


 "ಈ ಮೆರವಣಿಗೆಯು ವಿಫಲವಾಗುವುದಿಲ್ಲ ಎಂಬುದನ್ನು ಸರ್ಕಾರ ಗಮನಿಸಬೇಕು. ಇದು ಮೆರವಣಿಗೆಯಲ್ಲಿ ಜನರನ್ನು ಭೇದಿಸಲು ಪ್ರಯತ್ನಿಸುತ್ತಿದೆ ಮತ್ತು ಗಲಭೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಶುಕ್ರವಾರ ಸಂಜೆಯೊಳಗೆ ನಿರ್ಧಾರ ಪ್ರಕಟಿಸಲಾಗುವುದು ಎಂದು ಪಂಧೇರ್ ಹೇಳಿದ್ದಾರೆ.


ಇದನ್ನು ಓದಿ  :ಯುವಕರ ನಿದ್ದೆ ಕದಿಯುತ್ತಿದೆ ಯಶಿಕಾ ಹಾಟ್‌ ಅವತಾರ..! ಫೋಟೋಸ್‌ ಇಲ್ಲಿವೆ


ರೈತನ ಹತ್ಯೆ ಮತ್ತು ಇತರರಿಗೆ ಗಾಯಗಳಾಗಿರುವುದನ್ನು ಖಂಡಿಸಿದ ಕಾರ್ಮಿಕ ಸಂಘಟನೆಗಳು,  ನಮ್ಮ ಯುವಕರನ್ನು ಪ್ರಚೋದಿಸಲು ಪ್ರಯತ್ನಿಸಿದ 4-5 ಸರ್ಕಾರಿ ನೌಕರರನ್ನು ನಾವು ಹಿಡಿದಿದ್ದೇವೆ" ಮತ್ತು ಫೆಬ್ರವರಿ 23 ರಂದು ದೇಶದಾದ್ಯಂತ ಕರಾಳ ದಿನವನ್ನಾಗಿ ಆಚರಿಸುವುದಾಗಿ ಹೇಳಿವೆ.


ಶಂಭು ಮತ್ತು ಖಾನೌರಿ ಗಡಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಹರಿಯಾಣ ಪೊಲೀಸರು ರಬ್ಬರ್ ಬುಲೆಟ್ ಮತ್ತು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ ನಂತರ 21 ವರ್ಷದ ರೈತ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ. ಆದರೆ ಹರ್ಯಾಣ ಪೊಲೀಸರು ಸಾವಿನ ಹೊಣೆಯನ್ನು ನಿರಾಕರಿಸಿದ್ದಾರೆ.


ಇದನ್ನು ಓದಿ : ಅಪ್ಪಿಕೊಳ್ಳುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತೆ..? ಇಲ್ಲಿದೆ ನೋಡಿ ವಿವರ


ಶಂಭು ಮತ್ತು ಖಾನೌರಿ ಎರಡೂ ಗಡಿಗಳಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದರೂ ನಿಯಂತ್ರಣದಲ್ಲಿದೆ. ಮೃತ ರೈತನನ್ನು ಬಟಿಂಡಾ ಜಿಲ್ಲೆಯ ಬಲೋಕೆ ಗ್ರಾಮದ ಶುಭ್ ಕರಣ್ ಸಿಂಗ್ ಎಂದು ಗುರುತಿಸಲಾಗಿದ್ದು, ತೀವ್ರ ಗಾಯಗೊಂಡ ಆತ ಪಟಿಯಾಲಾದ ರಾಜೀಂದ್ರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆತನ ಕಿವಿಯ ಮೇಲಿಂದ ತಲೆಗೆ ರಬ್ಬರ್ ಗುಂಡು ತಗುಲಿದೆ ಎನ್ನಲಾಗಿದೆ. ಗಾಯಗೊಂಡ 10 ರೈತರು ಆಸ್ಪತ್ರೆಗೆ ಧಾವಿಸಲಾಗಿದ್ದರೆ, ಇತರರು ಶಂಭುವಿನಲ್ಲಿ ತಾತ್ಕಾಲಿಕ ವೈದ್ಯಕೀಯ ಶಿಬಿರದಲ್ಲಿ ಪ್ರಥಮ ಚಿಕಿತ್ಸೆ ಪಡೆದಿದ್ದಾರೆ.


ರೈತರೊಂದಿಗೆ ಐದನೇ ಸುತ್ತಿನ ಮಾತುಕತೆ ನಡೆಸಲು ಸಿದ್ಧ ಎಂದು ಕೇಂದ್ರ ಸರ್ಕಾರ ಹೇಳಿದೆ. "ನಾಲ್ಕನೇ ಸುತ್ತಿನ ನಂತರ ಎಲ್ಲಾ ವಿಷಯಗಳ ಬಗ್ಗೆ ಐದನೇ ಸುತ್ತಿನ ಮಾತುಕತೆಗೆ ಸರ್ಕಾರ ಸಿದ್ಧವಾಗಿದೆ. ಮಾತುಕತೆಯ ಮೂಲಕ ಮಾತ್ರ ಸಮಸ್ಯೆಯನ್ನು ಪರಿಹರಿಸಬಹುದು ಮತ್ತು ಶಾಂತಿಯನ್ನು ಕಾಪಾಡಿಕೊಳ್ಳುವುದು ಮುಖ್ಯವಾಗಿದೆ" ಎಂದು ಕೇಂದ್ರ ಕೃಷಿ ಸಚಿವ ಅರ್ಜುನ್ ಮುಂಡಾ ಟ್ವೀಟ್ ಮಾಡಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ .