Delhi Excise Scam Update: ಮನಿಷ್ ಸಿಸೋಡಿಯಾಗೆ ಸೇರಿದ ಕೋಟ್ಯಾಂತರ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇಡಿ

Delhi Excise Scam Update: ದೆಹಲಿಯ ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಿಸಿಯಂತೆ ಇಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ.  ಇಡಿ ಅವರ ಕೋಟ್ಯಂತರ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಈ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರಲ್ಲದೆ, ವಿಜಯ್ ನಾಯರ್, ಸಮೀರ್ ಮಹೇಂದ್ರು, ಅಮಿತ್ ಅರೋರಾ ಮತ್ತು ಅರುಣ್ ಪಿಳ್ಳೈ ಸೇರಿದಂತೆ ಇತರರ ಹೆಸರುಗಳು ಶಾಮಿಲಾಗಿವೆ.  

Written by - Nitin Tabib | Last Updated : Jul 7, 2023, 08:41 PM IST
  • ಪ್ರಸ್ತುತ ದೆಹಲಿಯಲ್ಲಿ ರದ್ದಾಗಿರುವ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ
  • ಉದ್ಯಮಿ ದಿನೇಶ್ ಅರೋರಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ರಾತ್ರಿ ಬಂಧಿಸಿದೆ. ಮೂಲಗಳು ನೀಡಿರುವ ಮಾಹಿತಿಯನ್ನು ನಂಬುವುದಾದರೆ,
  • ಸಿಬಿಐ ಕೂಡ ಈ ಪ್ರಕರಣದ ತನಿಖೆ ನಡೆಸುತ್ತಿದೆ ಮತ್ತು ಸಿಬಿಐ ಪ್ರಕರಣದಲ್ಲಿ ಅರೋರಾ ಅವರನ್ನು ಅನುಮೋದಕರನ್ನಾಗಿ ಮಾಡಲಾಗಿದೆ.
Delhi Excise Scam Update: ಮನಿಷ್ ಸಿಸೋಡಿಯಾಗೆ ಸೇರಿದ ಕೋಟ್ಯಾಂತರ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇಡಿ title=

Delhi Excise Scam Update: ರಾಜಧಾನಿ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಇಡಿ ಮಹತ್ವದ ಕ್ರಮ ಕೈಗೊಂಡಿದೆ. ಅಬಕಾರಿ ನೀತಿ ಹಗರಣದಲ್ಲಿ ಮನೀಷ್ ಸಿಸೋಡಿಯಾ ಮತ್ತು ಇತರ ಆರೋಪಿಗಳ ಆಸ್ತಿಯನ್ನು ಇಡಿ ಇಂದು ಮುಟ್ಟುಗೋಲು ಹಾಕಿಕೊಂಡಿದೆ ಎಂದು ವರದಿಯಾಗಿದೆ. ಈ ಪ್ರಕರಣದಲ್ಲಿ ಹೊರಡಿಸಲಾದ ಎರಡನೇ ಆದೇಶ ಇದಾಗಿದೆ. ಈ ಪ್ರಕರಣದಲ್ಲಿ  ಸ್ಥಿರ/ಚರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಮೊದಲ ಆದೇಶ ಹೊರಡಿಸಲಾಗಿದೆ. ವಿಜಯ್ ನಾಯರ್, ಸಮೀರ್ ಮಹೇಂದ್ರು, ಅಮಿತ್ ಅರೋರಾ, ಅರುಣ್ ಪಿಳ್ಳೈ ಮತ್ತು ಇತರರ 76.54 ಕೋಟಿ ರೂ. ಆಸ್ತಿ ಕೂಡ ಇದರಲ್ಲಿ ಶಾಮೀಲಾಗಿದೆ. ಅಬಕಾರಿ ಹಗರಣದಲ್ಲಿ ಇಡಿ ಇದುವರೆಗೆ 12 ಜನರನ್ನು ಬಂಧನಕ್ಕೆ ಒಳಪಡಿಸಲಾಗಿದೆ .

ದಿನೇಶ್ ಅರೋರಾ ಅವರನ್ನೂ ಬಂಧಿಸಲಾಗಿದೆ
ಪ್ರಸ್ತುತ ದೆಹಲಿಯಲ್ಲಿ ರದ್ದಾಗಿರುವ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಉದ್ಯಮಿ ದಿನೇಶ್ ಅರೋರಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ರಾತ್ರಿ ಬಂಧಿಸಿದೆ. ಮೂಲಗಳು ನೀಡಿರುವ ಮಾಹಿತಿಯನ್ನು ನಂಬುವುದಾದರೆ, ಸಿಬಿಐ ಕೂಡ ಈ ಪ್ರಕರಣದ ತನಿಖೆ ನಡೆಸುತ್ತಿದೆ ಮತ್ತು ಸಿಬಿಐ ಪ್ರಕರಣದಲ್ಲಿ ಅರೋರಾ ಅವರನ್ನು ಅನುಮೋದಕರನ್ನಾಗಿ ಮಾಡಲಾಗಿದೆ. ಸುದೀರ್ಘ ವಿಚಾರಣೆಯ ನಂತರ, ಅರೋರಾ ಅವರನ್ನು ಮನಿ ಲಾಂಡರಿಂಗ್ ತಡೆ ಕಾಯ್ದೆಯ (PMLA) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಲಾಗಿದೆ.

ಇದನ್ನೂ ಓದಿ-Balasore Train Mishap Update: ರೇಲ್ವೆ ವಿಭಾಗದ ಮೂವರು ಸಿಬ್ಬಂದಿಗಳನ್ನು ಬಂಧಿಸಿದ ಸಿಬಿಐ

ಇಡೀ ವಿಷಯ ಏನು?
ಇಡಿ ಮತ್ತು ಸಿಬಿಐ 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯು ಕೆಲವು ಮದ್ಯದ ವ್ಯಾಪಾರಿಗಳಿಗೆ ಲಂಚ ನೀಡಿದ ಆರೋಪದ ಮೇಲೆ ಒಲವು ತೋರಿದೆ ಎಂದು ಆರೋಪಿಸಿದೆ, ಆದರೆ ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷವು ಯಾವಾಗಲೂ ಈ ಆರೋಪಗಳನ್ನು ನಿರಾಕರಿಸಿದೆ. ದಿನೇಶ್ ಅರೋರಾ ರೂಪದಲ್ಲಿ ಇಡಿ ನಡೆಸಿದ 13 ನೇ ಬಂಧನ ಇದಾಗಿದೆ.  ದಿನೇಶ್ ಅರೋರಾ ಮೂಲಕ ಪ್ರಕರಣದ ಮತ್ತೊಬ್ಬ ಆರೋಪಿ ಉದ್ಯಮಿ ಅಮಿತ್ ಅರೋರಾ ಅವರಿಂದ ಲಂಚ ಪಡೆದ ಆರೋಪ ಮನೀಷ್ ಸಿಸೋಡಿಯಾ ಅವರ ಮೇಲಿದೆ.

ಇದನ್ನೂ ಓದಿ-Income Tax Update: ಮೃತ ವ್ಯಕ್ತಿಗಳ ಐಟಿಆರ್ ಕೂಡ ದಾಖಲಿಸಬಹುದು, ಇಲ್ಲಿದೆ ವಿಧಾನ

ಇಡಿ ಈಗಾಗಲೇ ದಿನೇಶ್ ಅರೋರಾ ಅವರನ್ನು ವಿಚಾರಣೆಗೆ ಒಳಪಡಿಸಿದೆ. ಮೂಲಗಳ ಪ್ರಕಾರ, ಈ ಬಾರಿ ಅವರು ಪ್ರಶ್ನೆಗಳಿಗೆ ತಪ್ಪಿಸಿಕೊಳ್ಳುವ ಉತ್ತರಗಳನ್ನು ನೀಡಿದ್ದಾರೆ ಎನ್ನಲಾಗಿದೆ ಮತ್ತು ಅವರು  ತಮ್ಮನ್ನು ಬಂಧಿಸಿದ ನಂತರ ಏಜೆನ್ಸಿ ಅವರಿಗೆ ಸರಿಯಾಗಿ  ಸಹಕರಿಸಲಿಲ್ಲ ಎನ್ನಲಾಗಿದೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News