ದೆಹಲಿಯಲ್ಲಿ ಸತತ 3ನೇ ದಿನ ಅಗ್ನಿ ಅವಘಡ; ಹೊತ್ತಿ ಉರಿದ ನಾರಾಯಣ ಕಾರ್ಖಾನೆ

ಈ ಕಾರ್ಖಾನೆಯಲ್ಲಿ ಉಡುಗೊರೆ ವಸ್ತುಗಳನ್ನು ತಯಾರಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. 

Last Updated : Feb 14, 2019, 08:56 AM IST
ದೆಹಲಿಯಲ್ಲಿ ಸತತ 3ನೇ ದಿನ ಅಗ್ನಿ ಅವಘಡ; ಹೊತ್ತಿ ಉರಿದ ನಾರಾಯಣ ಕಾರ್ಖಾನೆ title=
Pic Courtesy: ANI

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸತತ ಮೂರನೇ ದಿನವೂ ಅಗ್ನಿ ಅವಘಡ ಮುಂದುವರೆದಿದೆ. ಗುರುವಾರ ಬೆಳ್ಳಂಬೆಳಗ್ಗೆ ನಾರಾಯಣ ಕಾರ್ಖಾನೆಯಲಿ ಅಗ್ನಿ ದುರಂತ ಸಂಭವಿಸಿದ್ದು, ಬೆಂಕಿಯನ್ನು ನಿಯಂತ್ರಿಸಲು 20 ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿವೆ.

ಕಾರ್ಖಾನೆಯಲ್ಲಿ ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ದಳದ ಹರಸಾಹಸ. (Pic: ANI)

ಈ ಕಾರ್ಖಾನೆಯಲ್ಲಿ ಉಡುಗೊರೆ ವಸ್ತುಗಳನ್ನು ತಯಾರಿಸಲಾಗುತ್ತದೆ ಎಂದು ಹೇಳಲಾಗುತ್ತಿದ್ದು, ಈ ಕಾರಣದಿಂದಾಗಿಯೇ ಬೆಂಕಿಯ ಕೆನ್ನಾಲಿಗೆ ವೇಗವಾಗಿ ಹರಡುತ್ತಿದೆ ಎನ್ನಲಾಗಿದೆ. ಈ ದುರಂತದಲ್ಲಿ ಈವರೆಗೂ ಯಾವುದೇ ಸಾವು-ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.

ಮಂಗಳವಾರ ದೆಹಲಿಯ ಕರೋಲ್ ಬಾಗ್ ನಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ಅಗ್ನಿದುರಂತ ಸಂಭವಿಸಿ 17 ಮಂದಿ ಮೃತಪಟ್ಟಿದ್ದರು. ಬುಧವಾರ ದೆಹಲಿಯ ಪಶ್ಚಿಮ್‌ಪುರಿ ಕೊಳೆಗೇರಿಯಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ 200ಕ್ಕೂ ಹೆಚ್ಚು ಗುಡಿಸಲುಗಳು ಭಸ್ಮವಾಗಿದ್ದವು. 

Trending News