ಗಲಭೆ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚಿದ ದೆಹಲಿ ಸರ್ಕಾರ

ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ದೆಹಲಿ ಸರ್ಕಾರ 10 ಲಕ್ಷ ರೂ. ಪರಿಹಾರ ಘೋಷಿಸಿದೆ.

Last Updated : Feb 29, 2020, 01:57 PM IST
ಗಲಭೆ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚಿದ ದೆಹಲಿ ಸರ್ಕಾರ title=

ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರವಾಗಿ ದೆಹಲಿ ಸರ್ಕಾರ 10 ಲಕ್ಷ ರೂ. ಹಾಗೂ ಮೃತ ಅಪ್ರಾಪ್ತ ವಯಸ್ಕ ಕುಟುಂಬಕ್ಕೆ 5-5 ಲಕ್ಷ ರೂ. ಅಲ್ಲದೆ ಮೃತ ವ್ಯಕ್ತಿಯ ಕುಟುಂಬಕ್ಕೆ ತಕ್ಷಣ ಒಂದು ಲಕ್ಷ ರೂಪಾಯಿಗಳ ಸಹಾಯ ನೀಡಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗುರುವಾರ ತಿಳಿಸಿದ್ದು, ದಾಖಲೆಗಳಿಂದ ದೃಡೀಕರಿಸಿದ ನಂತರ 9 ಲಕ್ಷ ರೂಪಾಯಿಗಳನ್ನು ನೀಡಲಾಗುವುದು ಎಂದು ವಿವರಿಸಿದ್ದಾರೆ.

"ಹಿಂಸಾಚಾರಕ್ಕೆ ಒಳಗಾದವರಿಗೆ 5 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ. ಮತ್ತು ಮಧ್ಯಮ ಗಾಯಗೊಂಡವರಿಗೆ 2 ಲಕ್ಷ ರೂ. ಮತ್ತು ಅನಾಥ ಮಕ್ಕಳಿಗೆ 3 ಲಕ್ಷ ರೂ." ಪರಿಹಾರ ನೀಡಲಾಗುವುದು ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 10 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸುವುದಾಗಿ ತಿಳಿಸಿದ ಸಿಎಂ ಕೇಜ್ರಿವಾಲ್, ಇದಕ್ಕಾಗಿ, ಅವರು 'ಏಂಜಲ್ ಪ್ಲ್ಯಾನ್'ನ ವ್ಯಾಪ್ತಿಯನ್ನು ಹೆಚ್ಚಿಸುವುದಾಗಿ ಘೋಷಿಸಿದರು. ಇದರಿಂದಾಗಿ ಹಿಂಸಾಚಾರದಿಂದ ಬಳಲುತ್ತಿರುವ ಯಾವುದೇ ವ್ಯಕ್ತಿಗೆ ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದು.

ಹಿಂಸಾಚಾರದ ಸಮಯದಲ್ಲಿ ಆಸ್ತಿಪಾಸ್ತಿ ನಷ್ಟ ಅನುಭವಿಸಿದವರಿಗೆ ಸರ್ಕಾರದ ಸಹಾಯದ ಕುರಿತು ಮಾತನಾಡಿದ ಅವರು, ಇದು ರಿಕ್ಷಾ ಮತ್ತು ಇ-ರಿಕ್ಷಾಗಳಿಗೆ ಪರಿಹಾರವನ್ನೂ ಒಳಗೊಂಡಿದೆ. ಶೀಘ್ರದಲ್ಲೇ ಈ ಕುರಿತು ಅಪ್ಲಿಕೇಶನ್ ಅನ್ನು ಪ್ರಾರಂಭಿಸಲಾಗುವುದು, ಅದರ ಸಹಾಯದಿಂದ ಪೀಡಿತರಿಗೆ ಪರಿಹಾರದ ಹಕ್ಕುಗಳನ್ನು ಸಲ್ಲಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ.

Trending News