ಶರಣಾಗಲು ಹೆಚ್ಚಿನ ಸಮಯಾವಕಾಶ ಕೋರಿದ್ದ ಸಜ್ಜನ್​ ಕುಮಾರ್​ ಅರ್ಜಿ ವಜಾ

ಸಜ್ಜನ್​ ಕುಮಾರ್​ ಶರಣಾಗಲು ಹೆಚ್ಚು ಸಮಯಾವಕಾಶ ಕೋರಿ ಗುರುವಾರ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. 

Last Updated : Dec 21, 2018, 02:51 PM IST
ಶರಣಾಗಲು ಹೆಚ್ಚಿನ ಸಮಯಾವಕಾಶ ಕೋರಿದ್ದ ಸಜ್ಜನ್​ ಕುಮಾರ್​ ಅರ್ಜಿ ವಜಾ title=

ನವದೆಹಲಿ: 1984ರ ಸಿಖ್​ ವಿರೋಧಿ ಗಲಭೆಯ ಅಪರಾಧಿ ಸಜ್ಜನ್​ ಕುಮಾರ್​ ಶರಣಾಗಲು ಹೆಚ್ಚಿನ ಸಮಯಾವಕಾಶ ಕೋರಿ ಗುರುವಾರ ಹೈಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿಯನ್ನು ಇಂದು ಕೋರ್ಟ್​ ತಿರಸ್ಕರಿಸಿದೆ.

1984ರ ಸಿಖ್​ ವಿರೋಧಿ ದಂಗೆಗೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸಜ್ಜನ್ ಕುಮಾರ ಡಿ. 31ರೊಳಗೆ ಶರಣಾಗುವಂತೆ ನ್ಯಾಯಾಲಯ ಸೂಚಿಸಿತ್ತು. 

1984ರ ಅಕ್ಟೋಬರ್​ 31ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ಬಳಿಕ ದೆಹಲಿ ಕಂಟೋನ್ ಮೆಂಟ್​ ಏರಿಯಾದಲ್ಲಿ ಗಲಭೆ ನಡೆದಿತ್ತು. ಈ ವೇಳೆ ಐವರನ್ನು ಕೊಲೆ ಮಾಡಲಾಗಿತ್ತು. 
 

Trending News