ಚೆನ್ನೈ: ಮಾಜಿ ಮುಖ್ಯಮಂತ್ರಿ ಮತ್ತು ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಅವರ ಆರೋಗ್ಯ ಸ್ಥಿತಿಯಲ್ಲಿ ಏರುಪೇರಾದ ಕಾರಣ ಚೆನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 


COMMERCIAL BREAK
SCROLL TO CONTINUE READING

ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಕರುಣಾನಿಧಿ ಅವರಿಗೆ ಅಳವಡಿಸಿದ್ದ ಶ್ವಾಸನಾಳ ಬದಲಾವಣೆಗಾಗಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಶ್ವಾಶನಾಳ ಅಳವಡಿಕೆ ಕೆಲಸ ಮುಗಿದ ನಂತರ ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎಂದು ಕಾವೇರಿ ಆಸ್ಪತ್ರೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.


95 ವರ್ಷದ ಕರುಣಾನಿಧಿ ಅವರು ಕಳೆದ ವರ್ಷ ಆಗಸ್ಟ್ ನಲ್ಲಿ ಎಂಡೋಸ್ಕೋಪಿಗೆ ಒಳಗಾಗಿದ್ದರು.