ರಾಮಮಂದಿರ ಉದ್ಘಾಟನೆಗೆ ಆಮಂತ್ರಿಸಲ್ಪಟ್ಟ ವಿಐಪಿಗಳು ಯಾರ್ಯಾರು ಗೊತ್ತಾ?

Ram Mandir: ಜನವರಿ 22 ರಂದು ರಾಮಮಂದಿರ ಶಂಕುಸ್ಥಾಪನೆ ಸಮಾರಂಭವನ್ನು ನಿಗದಿಪಡಿಸಲಾಗಿದೆ. ಈಗಾಗಲೇ ಈ ಸಮಾರಂಭದಲ್ಲಿ ಪಾಲ್ಗೋಳ್ಳಲಿರುವವರಿಗಾಗಿ ಆಮಂತ್ರಣ ಪತ್ರಗಳು ಕೂಡ ರೆಡಿಯಾಗಿವೆ.

Written by - Zee Kannada News Desk | Last Updated : Jan 6, 2024, 04:30 PM IST
  • ಜನವರಿ 22 ರಂದು ರಾಮಮಂದಿರ ಶಂಕುಸ್ಥಾಪನೆ ಸಮಾರಂಭವನ್ನು ನಿಗದಿಪಡಿಸಲಾಗಿದೆ.
  • ಮಹಾಮಸ್ತಕಾಭಿಷೇಕ ಸಮಾರಂಭಕ್ಕೆ ಆಮಂತ್ರಣ ಪತ್ರವನ್ನು ಸ್ವೀಕರಿಸಿದ ಮೊದಲ ವ್ಯಕ್ತಿಗಳಲ್ಲಿ ಶ್ರೀ ಬಚ್ಚನ್ ಒಬ್ಬರಾಗಿದ್ದಾರೆ.
  • ದಕ್ಷಿಣದ ಸೂಪರ್‌ಸ್ಟಾರ್ ಆದ ರಜನಿಕಾಂತ್ರನ್ನೂ ಕೂಡ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸಲಾಗಿದೆ.
ರಾಮಮಂದಿರ ಉದ್ಘಾಟನೆಗೆ ಆಮಂತ್ರಿಸಲ್ಪಟ್ಟ ವಿಐಪಿಗಳು ಯಾರ್ಯಾರು ಗೊತ್ತಾ? title=

Ayodhya Invitations: ರಾಮ ಮಂದಿರದ ಶಂಕುಸ್ಥಾಪನೆಗೆ ಸಿದ್ಧಗೊಂಡಿರುವ ಆಮಂತ್ರಣ ಪತ್ರಿಕೆಗಳು ರಾಮ ಮಂದಿರದಂತೆಯೇ ಭವ್ಯವಾಗಿವೆ. ಸುಂದರವಾದ ಆಮಂತ್ರಣ ಪತ್ರಿಕೆಗಳನ್ನು ಈಗಾಗಲೇ ಹಲವಾರು ಸೆಲೆಬ್ರಿಟಿಗಳು ಮತ್ತು ರಾಜಕಾರಣಿಗಳು ಸ್ವೀಕರಿಸಿದ್ದಾರೆ. ಅದರಲ್ಲಿ ಕೆಲ ಟಾಪ್‌  ಸೆಲೆಬ್ರಿಟಿಗಳು ಯಾರು ಎಂದು ನೋಡೋಣ ಬನ್ನಿ.

ಅಮಿತಾಬ್ ಬಚ್ಚನ್
ಆಮಂತ್ರಣ ಪಟ್ಟಿಯಲ್ಲಿರುವ ಮತ್ತೊಬ್ಬ ಸೆಲೆಬ್ರಿಟಿ ಮೆಗಾಸ್ಟಾರ್ ಅಮಿತಾಬ್ ಬಚ್ಚನ್.  ಮಹಾಮಸ್ತಕಾಭಿಷೇಕ ಸಮಾರಂಭಕ್ಕೆ ಆಮಂತ್ರಣ ಪತ್ರವನ್ನು ಸ್ವೀಕರಿಸಿದ ಮೊದಲ ವ್ಯಕ್ತಿಗಳಲ್ಲಿ ಶ್ರೀ ಬಚ್ಚನ್ ಕೂಡ ಒಬ್ಬರಾಗಿದ್ದಾರೆ.

ಕಂಗನಾ ರಣಾವತ್
ಕಂಗನಾ ರಣಾವತ್‌ರನ್ನು ಜನವರಿ 22 ರಂದು ರಾಮಮಂದಿರದ ಶಂಕುಸ್ಥಾಪನೆಗೆ ಆಹ್ವಾನಿಸಲಾಗಿದೆ. ಅವರು ಸಾಮಾಜಿಕ ಮಾಧ್ಯಮದಲ್ಲಿ ಆಹ್ವಾನವನ್ನು ಹಂಚಿಕೊಂಡಿದ್ದು.  ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ಭಗವಾನ್‌ ಶ್ರೀರಾಮ ʼಮಾಂಸಾಹಾರಿʼ, ಅವನು ಬೇಟೆಯಾಡಿ ಮಾಂಸ ತಿನ್ನುತ್ತಿದ್ದ

ಪ್ರಭಾಸ್
ಆದಿಪುರುಷ ಚಿತ್ರದಲ್ಲಿ ಭಗವಾನ್ ರಾಮನ ಪಾತ್ರವನ್ನು ನಿರ್ವಹಿಸಿದ ಪ್ರಭಾಸ್ ಸಹ ಆಹ್ವಾನಿತರ ಪಟ್ಟಿಯಲ್ಲಿ ಸೇರಿದ್ದಾರೆ ಎಂದು ವರದಿಗಳು ತಿಳಿಸಿವೆ.

ದೀಪಿಕಾ ಚಿಖಾಲಿಯಾ ಟೋಪಿವಾಲಾ
90ರ ದಶಕದ 'ರಾಮಾಯಣ' ಟಿವಿ ಧಾರಾವಾಹಿಯಲ್ಲಿ ಮಾತೆ ಸೀತೆಯ ಸುಂದರ ಪಾತ್ರವನ್ನು ನಿರ್ವಹಿಸಿದ ನಟಿ ದೀಪಿಕಾ ಚಿಖಾಲಿಯಾ ಟೋಪಿವಾಲಾ ಅವರನ್ನೂ ಸಹ ಸಮಾರಂಭಕ್ಕೆ ಆಹ್ವಾನಿಸಲಾಗಿದೆ.

ಸಚಿನ್ ತೆಂಡೂಲ್ಕರ್
ಕ್ರಿಕೆಟ್‌ ಜಗತ್ತಿನ ದೇವರು ಎಂದು ಕರೆಯಲ್ಪಡುವ ಸಚಿನ್ ತೆಂಡೂಲ್ಕರ್ ಕೂಡ ರಾಮಮಂದಿರ ಶಂಕುಸ್ಥಾಪನೆ ಸಮಾರಂಭದ ಆಹ್ವಾನಿತರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: ರಾಮಮಂದಿರ ಲೋಕಾರ್ಪಣೆ ದಿನ ಅಯೋಧ್ಯೆಯಲ್ಲಿ ಬಿಗಿ ಭದ್ರತೆ: ಎಲ್ಲಿಲ್ಲೆ ಹೇಗಿರಲಿದೆ ಗೊತ್ತಾ ಸೆಕ್ಯೂರಿಟಿ?

ರಜನಿಕಾಂತ್
ದಕ್ಷಿಣದ ಸೂಪರ್‌ಸ್ಟಾರ್ ಆದ ರಜನಿಕಾಂತ್ ಅವರನ್ನೂ ಕೂಡ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸಲಾಗಿದೆ. 

ಮುಖೇಶ್ ಅಂಬಾನಿ
ಉದ್ಯಮಿ ಮುಕೇಶ್ ಅಂಬಾನಿಯವರನ್ನೂ ರಾಮಮಂದಿರ ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಗೌತಮ್ ಅದಾನಿ, ರತನ್ ಟಾಟಾ ಮತ್ತು ಅನಿಲ್ ಅಂಬಾನಿ ಕೂಡ ಪಟ್ಟಿಯಲ್ಲಿದ್ದಾರೆ ಎಂದು ವರದಿಯಾಗಿದೆ.

ವಿರಾಟ್ ಕೊಹ್ಲಿ
ಅಯೋಧ್ಯೆ
ಯಲ್ಲಿ ನಡೆಯುವ ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿಗೂ ಆಹ್ವಾನ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News