Shiv Sena MLA open letter to Uddhav Thackeray : ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಳ್ಳುತ್ತಿರುವ ಮಧ್ಯೆ, ಶಿವಸೇನೆ ಶಾಸಕರೊಬ್ಬರ ಪತ್ರ ವೈರಲ್ ಆಗುತ್ತಿದೆ, ಇದು ಶಿವಸೇನೆಯ ಉಳಿದ ಶಾಸಕರ ಭಾವನೆಗಳ ಸಂಕೇತ ಎಂದು ಬಣ್ಣಿಸಲಾಗುತ್ತಿದೆ. ವಾಸ್ತವವಾಗಿ, ಉದ್ಧವ್ ಠಾಕ್ರೆ ವಿರುದ್ಧ ಕೋಪಗೊಂಡ ಶಾಸಕರೊಬ್ಬರು ಸಿಎಂ ಠಾಕ್ರೆಗೆ ಬಹಿರಂಗ ಪತ್ರ ಬರೆದಿದ್ದಾರೆ, ಶಿವಸೇನೆಯ ಹಿರಿಯ ನಾಯಕ ಏಕನಾಥ್ ಶಿಂಧೆ ಈ ಪಾತ್ರವನ್ನು ಹಂಚಿಕೊಳ್ಳುವ ಮೂಲಕ ಉದ್ಧವ್ ಠಾಕ್ರೆಗೆ ಬಹಿರಂಗವಾಗಿ ಸವಾಲು ಹಾಕಿದ್ದಾರೆ.


COMMERCIAL BREAK
SCROLL TO CONTINUE READING

ಪತ್ರದಲ್ಲಿದೆ ಶಾಸಕರ ಭಾವನೆ ಎಂದ ಶಿಂಧೆ!


ಉದ್ಧವ್ ಠಾಕ್ರೆ ಹೆಸರಿನಲ್ಲಿ ನೀಡಿರುವ ಪತ್ರದಲ್ಲಿ ಬಂಡಾಯ ಶಾಸಕರ ಭಾವನೆಗಳನ್ನು ಉಲ್ಲೇಖಿಸಿ ಅಸಮಾಧಾನಕ್ಕೆ ಕೆಲವು ಕಾರಣಗಳನ್ನು ತಿಳಿಸಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಪಕ್ಷದ ಕೆಲ ಶಾಸಕರನ್ನು ಹೊರತುಪಡಿಸಿ ಉಳಿದವರಿಗೆ ಅಪಮಾನ ಮಾಡಲಾಗುತ್ತಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ. ಕ್ಷೇತ್ರದ ಅಭಿವೃದ್ಧಿಗೆ ಬಂದಿರುವ ಶಾಸಕರ ನಿಧಿಯ ಬಗ್ಗೆಯೂ ಈ ಶಾಸಕರು ತೊಂದರೆ ಅನುಭವಿಸಬೇಕಾಯಿತು ಎಂದು ಹೇಳಿದರು.


 ಇದನ್ನೂ ಓದಿ : Weather Update: ಮುಂದಿನ 3 ದಿನ ಈ ಭಾಗಗಳಲ್ಲಿ ಭಾರೀ ಮಳೆ ಎಚ್ಚರಿಕೆ


ಆದಿತ್ಯ ಅಯೋಧ್ಯೆಗೆ ಹೋದರೆ ನಾವೇಕೆ ಬಿಡಲಿಲ್ಲ?


ಉದ್ಧವ್ ಠಾಕ್ರೆ ಹೆಸರಿನಲ್ಲಿ ಬರೆದಿರುವ ಈ ಬಹಿರಂಗ ಪತ್ರದಲ್ಲಿ ಆದಿತ್ಯ ಠಾಕ್ರೆ ಅಯೋಧ್ಯೆಗೆ ಹೋಗುತ್ತಿದ್ದಾಗ ಉಳಿದ ಶಾಸಕರನ್ನು ಅಯೋಧ್ಯೆಗೆ ಹೋಗದಂತೆ ಏಕೆ ತಡೆದರು ಎಂದು ವಿವರಿಸಿದ್ದಾರೆ. ಈ ಮೂಲಕ ಈ ಪತ್ರದಲ್ಲಿ ಹಲವು ವಿಚಾರಗಳು ಪ್ರಸ್ತಾಪವಾಗಿದ್ದು, ಈ ವೇಳೆ ಉದ್ಭವಿಸಿರುವ ಬಿಕ್ಕಟ್ಟಿಗೆ ಕಾರಣ ಎನ್ನಲಾಗಿದೆ.


 ಇದನ್ನೂ ಓದಿ : CM Uddhav Thackeray Resign : ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಾನು ಸಿದ್ಧ ಉದ್ಧವ್ ಠಾಕ್ರೆ!


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.