ಕೊಲ್ಕತ್ತಾ: ಲೋಕಸಭಾ ಚುನಾವಣಾ ರ್ಯಾಲಿಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕಲ್ಕತ್ತಾ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಹಾಗೂ ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ ಅವರನ್ನು 24 ಗಂಟೆಗಳ ಕಾಲ ಪ್ರಚಾರ ಮಾಡದಂತೆ ಚುನಾವಣಾ ಆಯೋಗ ಮಂಗಳವಾರ ನಿಷೇಧಿಸಿದೆ. 


COMMERCIAL BREAK
SCROLL TO CONTINUE READING

ಈಗ ಮಂಗಳವಾರ ಸಂಜೆ 5 ಗಂಟೆಯಿಂದ ಬುಧವಾರ ಸಂಜೆ 5 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಚುನಾವಣಾ ಆಯೋಗ ಹೇಳಿದೆ.


ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಎಸ್‌ಐಟಿ ಮನವಿ


ಅಭಿಜಿತ್ ಗಂಗೋಪಾಧ್ಯಾಯ ಅವರ ಹೇಳಿಕೆಗಳು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತವೆ ಎಂದು ಚುನಾವಣಾ ಸಮಿತಿ ಅಭಿಪ್ರಾಯಪಟ್ಟಿದೆ.ಮೇ 15 ರಂದು ಹಲ್ದಿಯಾದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವಾಗ ಬ್ಯಾನರ್ಜಿ ವಿರುದ್ಧ ಗಂಗೋಪಾಧ್ಯಾಯ ಮಾಡಿದ ಹೇಳಿಕೆಗಳಿಗಾಗಿ ತೃಣಮೂಲ ಕಾಂಗ್ರೆಸ್ ನೀಡಿದ ದೂರಿನ ಮೇರೆಗೆ ಚುನಾವಣಾ ಆಯೋಗವು ಕ್ರಮ ಕೈಗೊಂಡಿದೆ.


ಇದನ್ನೂ ಓದಿ: ಮುಂದಿನ ಏಳು ದಿನಗಳ ಕಾಲ ರಾಜ್ಯದೆಲ್ಲೆಡೆ ಭಾರಿ ಮಳೆ- ಹವಾಮಾನ ಇಲಾಖೆ ಮೂನ್ಸೂಚನೆ


ಬಿಜೆಪಿಯ ತಮ್ಲುಕ್ ಲೋಕಸಭಾ ಅಭ್ಯರ್ಥಿ ಗಂಗೋಪಾಧ್ಯಾಯ ಅವರು ಬ್ಯಾನರ್ಜಿ ವಿರುದ್ಧದ ನೀಡಿರುವ ಹೇಳಿಕೆಗಾಗಿ ಚುನಾವಣಾ ಆಯೋಗವು ನೀಡಿದ ಶೋಕಾಸ್ ನೋಟಿಸ್‌ಗೆ ಉತ್ತರವನ್ನು ಕಳುಹಿಸಿದ ಒಂದು ದಿನದ ನಂತರ ಚುನಾವಣಾ ಸಮಿತಿಯ ನಿರ್ಧಾರವೂ ಬಂದಿದೆ. ಟೀಕೆಗಳು ಅಸಮರ್ಪಕ, ನ್ಯಾಯಸಮ್ಮತವಲ್ಲದ ಮತ್ತು ಘನತೆರಹಿತ ಎಂದು ಕಂಡುಬಂದಿವೆ ಹಾಗಾಗಿ ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಚುನಾವಣಾ ಸಮಿತಿ ಹೇಳಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.