ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಹ್ಯಾಂಡ್ವಾರಾದ ಬಂದರ್ಪೈ ಪ್ರದೇಶದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರ ನಡುವೆ ಎನ್‌ಕೌಂಟರ್ನಲ್ಲಿ ಭದ್ರತಾ ಪಡೆಗಳು ಉಗ್ರರನ್ನು ಹತ್ತಿಕ್ಕುವಲ್ಲಿ ಯಶಸ್ವಿಯಾಗಿದ್ದಾರೆ. 


COMMERCIAL BREAK
SCROLL TO CONTINUE READING

ಬುಧವಾರ ರಾತ್ರಿ 9:32 ರ ಸುಮಾರಿಗೆ ಎನ್ಕೌಂಟರ್ ಪ್ರಾರಂಭವಾಯಿತು. ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಶೋಧ ಕಾರ್ಯ ಪ್ರಾರಂಭಿಸಿದ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಬಳಿಕ ಎರಡೂ ಬದಿಯಿಂದಲೂ ಗುಂಡಿನ ದಾಳಿ ಮುಂದುವರೆಸಿದ್ದು, ಕೆಲ ಭಯೋತ್ಪಾದಕರನ್ನು ಸದೆಬಡಿಯಲಾಗಿದೆ. ಪ್ರದೇಶದಲ್ಲಿ ಇನ್ನೂ ಕೆಲ ಉಗ್ರರು ಅಡಗಿರುವ ಸಂಶಯ ವ್ಯಕ್ತವಾಗಿದ್ದು ಶೋಧ ಕಾರ್ಯಾಚರಣೆ ಮುಂದುವರೆದಿದೆ.


ಮುನ್ನೆಚ್ಚರಿಕಾ ಕ್ರಮವಾಗಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.