ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ  ಸಿ.ಜಿ.ಒ ಕಾಂಪ್ಲೆಕ್ಸ್ನ ಪಂಡಿತ್ ದೀನ್ದಯಾಲ್ ಅಂತ್ಯೋದಯ ಭವನದ ಐದನೇ ಮಹಡಿಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. 25ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿದ್ದು ರಕ್ಷಣಾ ಕಾರ್ಯದಲ್ಲಿ ತೊಡಗಿವೆ.


COMMERCIAL BREAK
SCROLL TO CONTINUE READING


11 ಅಂತಸ್ತಿನ ಪಂಡಿತ್ ದೀನ್ದಯಾಲ್ ಅಂತ್ಯೋದಯ ಭವನವನ್ನು ಮೊದಲು ಪರ್ಯಾವರನ್ ಭವನ್ ಎಂದು ಕರೆಯಲಾಗುತ್ತಿತ್ತು. ಈ ಕಟ್ಟಡವು ಸಾಮಾಜಿಕ ನ್ಯಾಯ ಸಬಲೀಕರಣ ಮತ್ತು ಅಂಗವೈಕಲ್ಯ ಮತ್ತು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಯ ಸಚಿವಾಲಯ ಸೇರಿದಂತೆ ಹಲವಾರು ಸಚಿವಾಲಯಗಳನ್ನು ಹೊಂದಿದೆ.



ಪ್ರಾಥಮಿಕ ವರದಿಗಳ ಪ್ರಕಾರ, ಸಾಮಾಜಿಕ ನ್ಯಾಯ ಸಚಿವಾಲಯ ಇಲಾಖೆಯ ಕಚೇರಿಯಲ್ಲಿ ಮೊದಲಿಗೆ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಶೀಘ್ರದಲ್ಲೇ ಎಲ್ಲೆಡೆ ಆವರಿಸಿದೆ. ಎತ್ತರದ ಕ್ರೇನ್ಗಳು ಅಗ್ನಿಶಾಮಕ ಕಾರ್ಯಾಚರಣೆಗಳಿಗೆ ಸಹಾಯ ಮಾಡುತ್ತಿವೆ.


ಈವರೆಗೂ ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ.