ದೆಹಲಿ ಉದ್ಯಮಿ ಮನೆಯಿಂದ ಎರಡು ಕೋಟಿ ನಗದು ಚಿನ್ನಾಭರಣ ದೋಚಿದ ದರೋಡೆಕೋರರು

ದೆಹಲಿಯ ಪಶ್ಚಿಮ ವಿಹಾರ್ ಪ್ರದೇಶದಲ್ಲಿ ಉದ್ಯಮಿಯೊಬ್ಬರ ಮನೆಯಿಂದ ಐದು ಜನರು 2 ಕೋಟಿ ರೂಪಾಯಿ ನಗದು ಮತ್ತು ಚಿನ್ನಾಭರಣಗಳನ್ನು ದೋಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Written by - Zee Kannada News Desk | Last Updated : Nov 6, 2021, 01:47 AM IST
  • ದೆಹಲಿಯ ಪಶ್ಚಿಮ ವಿಹಾರ್ ಪ್ರದೇಶದಲ್ಲಿ ಉದ್ಯಮಿಯೊಬ್ಬರ ಮನೆಯಿಂದ ಐದು ಜನರು 2 ಕೋಟಿ ರೂಪಾಯಿ ನಗದು ಮತ್ತು ಚಿನ್ನಾಭರಣಗಳನ್ನು ದೋಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದೆಹಲಿ ಉದ್ಯಮಿ ಮನೆಯಿಂದ ಎರಡು ಕೋಟಿ ನಗದು ಚಿನ್ನಾಭರಣ ದೋಚಿದ ದರೋಡೆಕೋರರು title=
ಸಾಂದರ್ಭಿಕ ಚಿತ್ರ

ನವದೆಹಲಿ: ದೆಹಲಿಯ ಪಶ್ಚಿಮ ವಿಹಾರ್ ಪ್ರದೇಶದಲ್ಲಿ ಉದ್ಯಮಿಯೊಬ್ಬರ ಮನೆಯಿಂದ ಐದು ಜನರು 2 ಕೋಟಿ ರೂಪಾಯಿ ನಗದು ಮತ್ತು ಚಿನ್ನಾಭರಣಗಳನ್ನು ದೋಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮಂಗಳವಾರ ಸಂಜೆ 6 ಗಂಟೆಗೆ ದೂರುದಾರ ಹರ್ಮೀತ್ ಅರೋರಾ ಅವರು ದರೋಡೆ ಬಗ್ಗೆ ಪಿಸಿಆರ್ ಕರೆ ಮಾಡಿದ್ದರು.

ಇದನ್ನೂ ಓದಿ: Puneeth Rajkumar : ಪುನೀತ್ ರಾಜ್‍ಕುಮಾರ್ ನಿಧನ: ರಾಜ್ಯದಲ್ಲಿ ನೇತ್ರದಾನಿಗಳ ಸಂಖ್ಯೆ ಹೆಚ್ಚಳ!

ಪೊಲೀಸರ ಪ್ರಕಾರ, ದರೋಡೆಯಲ್ಲಿ ಇಬ್ಬರು ದಾಸಿಯರು ಸೇರಿದಂತೆ ಐದು ಜನರು ಭಾಗಿಯಾಗಿದ್ದರು, ಅವರು ಇತರ ಮೂವರು ಪುರುಷ ಸ್ನೇಹಿತರ ಸಹಾಯದಿಂದ ಸಂಪೂರ್ಣ ದರೋಡೆ ಯೋಜನೆಗೆ ಸಂಚು ರೂಪಿಸಿದ್ದರು.ಆರೋಪಿಗಳು ಹರ್ಮೀತ್ ಅರೋರಾ ಅವರನ್ನು ಬೆದರಿಸಿ ಮನೆಗೆ ದರೋಡೆ ಮಾಡಿದ್ದಾರೆ ಮತ್ತು ಆಕೆಯ ಮಗನನ್ನು ಮನೆಯಲ್ಲಿ ಕಟ್ಟಿಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಪುನೀತ್ ರಾಜ್​ಕುಮಾರ್ ಸಾವಿನ ಬಗ್ಗೆ ಅನುಮಾನ: ತನಿಖೆಗೆ ಆಗ್ರಹಿಸಿ ದೂರು ನೀಡಿದ ಅಭಿಮಾನಿ

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 392, ಸೆಕ್ಷನ್ 397, ಸೆಕ್ಷನ್ 34 ರ ಅಡಿಯಲ್ಲಿ ಪೊಲೀಸ್ ಠಾಣೆ ಪಶ್ಚಿಮ ವಿಹಾರ್ ಪೂರ್ವದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿಗಳ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಈ ಕುರಿತು ತನಿಖೆ ನಡೆಯುತ್ತಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

Trending News