ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಸಿದ್ಧತೆಗಳ ನಡುವೆಯೇ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮಧ್ಯಪ್ರದೇಶದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಪ್ರಣಾಳಿಕೆಯನ್ನು ಬಿಜೆಪಿಯ ‘ಸಂಕಲ್ಪ ಪತ್ರ’ ಎಂದು ಬಣ್ಣಿಸಿದ್ದಾರೆ.  ಅವರು ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು ಕೋರಿದ್ದಾರೆ. ಇತ್ತೀಚೆಗೆ, ಪ್ರಧಾನಿ ಮೋದಿ ಅವರು ದೇಶದ 15 ಕೋಟಿ ಕುಟುಂಬಗಳ 80 ಕೋಟಿ ಫಲಾನುಭವಿಗಳಿಗೆ ಐದು ವರ್ಷಗಳವರೆಗೆ ಉಚಿತ ಆಹಾರ ಯೋಜನೆಯನ್ನು ವಿಸ್ತರಿಸುವುದಾಗಿ ಘೋಷಿಸಿದ್ದರು. ಇದೀಗ ಮಧ್ಯಪ್ರದೇಶದ ಬಿಜೆಪಿ ಅಧ್ಯಕ್ಷರು ಪಡಿತರ ಚೀಟಿದಾರರಿಗೆ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ.(Political News In Kannada)


COMMERCIAL BREAK
SCROLL TO CONTINUE READING

ಅಲ್ಲದೆ 450 ರೂ.ಗೆ ಗೃಹೋಪಯೋಗಿ ಸಿಲಿಂಡರ್ ನೀಡುವ ಭರವಸೆ
ಬಿಜೆಪಿಯ ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಫಲಾನುಭವಿಗಳಿಗೆ ಹೆಚ್ಚಿನ ಲಾಭ ಸಿಗಲಿದೆ. ಈಗಾಗಲೇ ಗೋಧಿ, ಅಕ್ಕಿ, ಬೇಳೆಕಾಳು ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ ಅವರು, ಇದೀಗ ಅದರೊಂದಿಗೆ ಸಾಸಿವೆ ಎಣ್ಣೆ, ಸಕ್ಕರೆಯನ್ನೂ ನೀಡಲಾಗುವುದು ಎಂದಿದ್ದಾರೆ. ಈ ಸವಲತ್ತು ಅರ್ಹ ಫಲಾನುಭವಿಗಳಿಗೆ ನೀಡಲು ಬಿಜೆಪಿ ವತಿಯಿಂದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಇದೇ ವೇಳೆ ವೇಳೆ 450 ರೂ.ಗೆ ಗೃಹೋಪಯೋಗಿ ಸಿಲಿಂಡರ್ ನೀಡುವುದಾಗಿ ಭರವಸೆ ನೀಡಿದ್ದಾರೆ.


ಇದನ್ನೂ ಓದಿ-ಮಹಿಳೆಯರಿಗೊಂದು ಗುಡ್ ನ್ಯೂಸ್, ಇನ್ಮುಂದೆ ವಾಸಕ್ಕೆ ಶಾಶ್ವತ ಮನೆಯ ಜೊತೆಗೆ ಸರ್ಕಾರ ಧನಸಹಾಯ ಕೂಡ ನೀಡಲಿದೆ!


ಪ್ರಣಾಳಿಕೆ ಪ್ರಕಾರ ಲಾಡ್ಲಿ ಬಹನ್ ಯೋಜನೆಯ ಲಾಭದ ಜೊತೆಗೆ ಒಂದು ಲಕ್ಷ ಮಹಿಳೆಯರಿಗೆ ಶಾಶ್ವತ ಮನೆ ಸೌಲಭ್ಯವನ್ನು ಒದಗಿಸಲಾಗುವುದು ಎಂದು ಹೇಳಿದ್ದಾರೆ. ಲಾಡ್ಲಿ ಲಕ್ಷ್ಮಿ ಮತ್ತು ಬಹನ್ ಯೋಜನೆ ಮೂಲಕ ಮಹಿಳೆಯರು ಮತ್ತು ಹೆಣ್ಣುಮಕ್ಕಳನ್ನು ಸಬಲೀಕರಣಗೊಳಿಸಲಾಗುತ್ತಿದೆ. ಆದಿವಾಸಿಗಳ ಕಲ್ಯಾಣಕ್ಕೆ 3 ಸಾವಿರ ಕೋಟಿ ರೂ. ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿ ಇದುವರೆಗೂ ಹೇಳಿದ್ದನ್ನು ಈಡೇರಿಸಿದೆ. ವೈದ್ಯಕೀಯ ಶಿಕ್ಷಣವನ್ನು ಒದಗಿಸಿದ ಮೊದಲ ರಾಜ್ಯ ಮಧ್ಯಪ್ರದೇಶವಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.


ಇದನ್ನೂ ಓದಿ-ದೇಶಾದ್ಯಂತ 12ನೇ ತರಗತಿವರೆಗಿನ ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆಗೆ ಮುಂದಾದ ಕೇಂದ್ರ ಸರ್ಕಾರ!


ಕಳೆದ ವಾರ ಛತ್ತೀಸ್‌ಗಢದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ ದೇಶದ 80 ಕೋಟಿ ಜನರಿಗೆ ದೊಡ್ಡ ಘೋಷಣೆ ಮಾಡಿದ್ದರು. ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ) ಅನ್ನು ಮುಂದಿನ ಐದು ವರ್ಷಗಳವರೆಗೆ ವಿಸ್ತರಿಸುತ್ತಿದೆ ಎಂದು ಅವರು ಹೇಳಿದ್ದರು. ಡಿಸೆಂಬರ್ 31, 2023 ರವರೆಗೆ ಯೋಜನೆಯನ್ನು ಮುಂದುವರಿಸಲು ಡಿಸೆಂಬರ್ 2022 ರಲ್ಲಿ ಕ್ಯಾಬಿನೆಟ್ ನಿರ್ಧರಿಸಿತ್ತು. ಇದೀಗ ಈ ಯೋಜನೆಯನ್ನು 31 ಡಿಸೆಂಬರ್ 2028 ರವರೆಗೆ ವಿಸ್ತರಿಸುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ.


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ