Flood In Madhya Pradesh: ಭಾರೀ ಮಳೆಯಿಂದಾಗಿ ಮಧ್ಯಪ್ರದೇಶದಲ್ಲಿ ಪ್ರವಾಹದಂತಹ ಪರಿಸ್ಥಿತಿ ಉದ್ಭವಿಸಿದೆ. ಗ್ವಾಲಿಯರ್-ಚಂಬಲ್ ವಿಭಾಗದ ಶಿವಪುರಿ, ಡಾಟಿಯಾ, ಶಿಯೊಪುರ್, ಭಿಂಡ್, ಗ್ವಾಲಿಯರ್ ಜಿಲ್ಲೆಗಳು ಪ್ರವಾಹ ಮತ್ತು ಮಳೆಯಿಂದಾಗಿ ಹಾನಿಗೊಳಗಾಗಿವೆ. ಅದೇ ಸಮಯದಲ್ಲಿ, ರೇವಾ ಜಿಲ್ಲೆಯ 1171 ಹಳ್ಳಿಗಳು ಪ್ರವಾಹದಿಂದ ಹಾನಿಗೊಳಗಾಗಿವೆ. ಅಲ್ಲದೆ, ಪ್ರವಾಹದ ನೀರು 200 ಹಳ್ಳಿಗಳನ್ನು ತಲುಪಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯದ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದರು.


Shivraj Singh Chouhan) ಹೇಳಿದ್ದಾರೆ.


COMMERCIAL BREAK
SCROLL TO CONTINUE READING

4. ಶಿವಪುರಿ ಮತ್ತು ಶಿಯೋಪುರ್ ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ "ಅಭೂತಪೂರ್ವ" 800 ಮಿಮೀ ಮಳೆಯಾಗಿದೆ ಎಂದು ಮಧ್ಯಪ್ರದೇಶ ಸಿಎಂ ಚೌಹಾಣ್ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.


ಇದನ್ನೂ ಓದಿ- Train Ticket Insurance Benefits: ರೈಲ್ವೆ ಟಿಕೆಟ್ ಬುಕಿಂಗ್ ವೇಳೆ ವಿಮೆ ಮಾಡಿಸುವುದರಿಂದ ಸಿಗುತ್ತೆ ಈ ಎಲ್ಲಾ ಪ್ರಯೋಜನ


5. ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ರಾಜೇಶ್ ರಾಜೋರ ಪ್ರಕಾರ, ಭಾರತೀಯ ಸೇನೆಯು ಶಿವಪುರಿ, ಶಿಯೋಪುರ್, ಗ್ವಾಲಿಯರ್ ಮತ್ತು ಡಾಟಿಯಾ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಾಚರಣೆಗಳಿಗೆ ಸಹಾಯ ಮಾಡುತ್ತಿದೆ. ಪ್ರವಾಹದಿಂದ ಹಾನಿಗೊಳಗಾದ ಪ್ರತಿಯೊಂದು ಜಿಲ್ಲೆಗಳಿಗೆ ಸಶಸ್ತ್ರ ಪಡೆಗಳ ಒಂದು ತುಕಡಿ ಅನ್ನು ಸಜ್ಜುಗೊಳಿಸಲಾಗಿದೆ.


6. ಪ್ರತಿಕೂಲ ಹವಾಮಾನದ ಹೊರತಾಗಿಯೂ, ಭಾರತೀಯ ವಾಯುಪಡೆಯು (ಐಎಎಫ್) ಪ್ರವಾಹ ಪೀಡಿತ ಪ್ರದೇಶಗಳಿಂದ ಸಿಕ್ಕಿಬಿದ್ದ ಜನರನ್ನು ರಕ್ಷಿಸಲು ಮಂಗಳವಾರ ನಾಲ್ಕು ರೀತಿಯ ಕಾರ್ಯಾಚರಣೆಗಳನ್ನು ನಡೆಸಿತು.


7. ಎನ್‌ಡಿಆರ್‌ಎಫ್ (NDRF) ನ ಏಳು ತಂಡಗಳನ್ನು ಶಿವಪುರಿ ಜಿಲ್ಲೆಯಲ್ಲಿ ಪರಿಹಾರ ಕಾರ್ಯಾಚರಣೆಗಾಗಿ ನಿಯೋಜಿಸಲಾಗಿದೆ. ಶಿಯೋಪುರ್ ಮತ್ತು ಡಾಟಿಯಾ ಜಿಲ್ಲೆಗಳಲ್ಲಿ, ಎಸ್‌ಡಿಆರ್‌ಎಫ್ ಕ್ರಮವಾಗಿ ಐದು ಮತ್ತು ಎರಡು ತಂಡಗಳನ್ನು ನಿಯೋಜಿಸಿದೆ.


8. ಸಶಸ್ತ್ರ ಪಡೆಗಳ ತಕ್ಷಣದ ಪ್ರತಿಕ್ರಿಯೆಗೆ ತನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಿದ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಈ ವಿಷಯದ ಕುರಿತು ಮಾತನಾಡಿದ್ದು ಪ್ರವಾಹ ಪರಿಸ್ಥಿತಿ ಮತ್ತು ರಕ್ಷಣಾ ಕಾರ್ಯದ ಬಗ್ಗೆಯೂ ಅವರಿಗೆ ಮಾಹಿತಿ ನೀಡಿರುವುದಾಗಿ ತಿಳಿಸಿದರು. ಅಲ್ಲದೆ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ರಾಜ್ಯ ಸರ್ಕಾರ ಸಕಲ ರೀತಿಯಲ್ಲಿಯೂ ಸಿದ್ಧವಾಗಿದೆ ಎಂದು ಭರವಸೆ ನೀಡಿದರು.


ಇದನ್ನೂ ಓದಿ- Good News! ಈ ವಾಹನಗಳ RCಗಾಗಿ ಶುಲ್ಕ ಪಾವತಿಸಬೇಕಾಗಿಲ್ಲ, ಇದರಿಂದ ನಿಮಗೇನು ಲಾಭ?


9. ಪಾದಾರ್ಖೇಡ್ ಮತ್ತು ಮೋಹನ ನಡುವೆ ದುರಸ್ತಿ ಕಾರ್ಯ ನಡೆಯುತ್ತಿದ್ದು, ಈ ಕಾರಣದಿಂದಾಗಿ ಶಿವಪುರಿ-ಗ್ವಾಲಿಯರ್ ವಿಭಾಗದ ಮೂಲಕ ಹಾದುಹೋಗುವ ಹಲವಾರು ರೈಲುಗಳನ್ನು ಮೂಲ ನಿಲ್ದಾಣಗಳಲ್ಲಿ ತಿರುಗಿಸಲಾಗುತ್ತದೆ ಅಥವಾ ನಿಲ್ಲಿಸಲಾಗುತ್ತದೆ ಎಂದು ರೈಲ್ವೇ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದತಿಯಾ ಪಟ್ಟಣದ ಸಮೀಪದ ರತನ್ಗ ದೇವಾಲಯದ ಬಳಿಯ ಸಿಂಧ್ ನದಿಯ ಮೇಲಿನ ಸೇತುವೆಯ ಬಹುಭಾಗವು ಭಾರೀ ಮಳೆಯಿಂದಾಗಿ ಕೊಚ್ಚಿ ಹೋಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


10. ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮಂಗಳವಾರ ರಾಜ್ಯ ರಾಜಧಾನಿ ಭೋಪಾಲ್‌ನ ಸೆಕ್ರೆಟರಿಯೇಟ್‌ನಲ್ಲಿ ತುರ್ತು ಕಾರ್ಯಾಚರಣೆಯ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆಗಳನ್ನು ಮೇಲ್ವಿಚಾರಣೆ ಮಾಡಿದರು ಮತ್ತು ಗ್ವಾಲಿಯರ್ ಮತ್ತು ಚಂಬಲ್ ವಿಭಾಗಗಳ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿದರು. ಶೀಘ್ರದಲ್ಲೇ ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸುವುದಾಗಿ ಸಿಎಂ ಹೇಳಿದರು. ನಾನು ಪ್ರವಾಹ ಪೀಡಿತ ಜಿಲ್ಲೆಗಳ ಸಂಗ್ರಾಹಕರು ಮತ್ತು ಇತರ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ ಮತ್ತು ಪ್ರವಾಹ ಪೀಡಿದ ಪ್ರದೇಶಗಳಿಂದ ಜನರನ್ನು ರಕ್ಷಿಸಲು ಪರಿಹಾರ ಶಿಬಿರಗಳನ್ನು ಆರಂಭಿಸಲಾಗಿದೆ ಎಂದು ಅವರು ಹೇಳಿದರು. ಮಳೆಯಿಂದ ಹಾನಿಗೊಳಗಾದ ಶಿವಪುರಿ, ಶಿಯೋಪುರ್, ಭಿಂದ್ ಮತ್ತು ಡಾಟಿಯಾ ಜಿಲ್ಲೆಗಳನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ