ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಶುಕ್ರವಾರ ತಮ್ಮ ಗುಪ್ಕರ್ ನಿವಾಸದಿಂದ ಬಿಡುಗಡೆಯಾಗಿದ್ದಾರೆ.


COMMERCIAL BREAK
SCROLL TO CONTINUE READING

ಕೇಂದ್ರ ಸರ್ಕಾರವು 370 ನೇ ವಿಧಿಯನ್ನು ರದ್ದುಪಡಿಸಿದ ಹಿನ್ನೆಲೆಯಲ್ಲಿ ಅವರನ್ನು ಬಂಧನಕ್ಕೆ ಒಳಪಡಿಸಿದ ಏಳು ತಿಂಗಳ ನಂತರ ಅವರು ಬಿಡುಗಡೆ ಮಾಡಲಾಯಿತು.ಇದಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು "ನಾನು ಸ್ವತಂತ್ರ, ನಾನು ಸ್ವತಂತ್ರ" ಎಂದು ಅವರು ತಮ್ಮ ಮನೆಯ ಹೊರಗೆ ನೆರೆದಿದ್ದ ಮಾಧ್ಯಮಗಳನ್ನು ಉದ್ದೇಶಿಸಿ ಹೇಳಿದರು.


ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರವು ತನ್ನ ವಿಶೇಷ ಸ್ಥಾನಮಾನದಿಂದ ತೆಗೆದುಹಾಕಿ ಮತ್ತು ಅದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ಅಬ್ದುಲ್ಲಾ ಅವರನ್ನುನ್ನು ಕಳೆದ ಆಗಸ್ಟ್ ತಿಂಗಳಲ್ಲಿ ಬಂಧಿಸಲಾಗಿತ್ತು.'ನನ್ನ ಸ್ವಾತಂತ್ರ್ಯದ ಪರವಾಗಿ ನಿಂತ ರಾಜ್ಯ ಮತ್ತು ದೇಶದ ಜನರಿಗೆ ನಾನು ಆಭಾರಿಯಾಗಿದ್ದೇನೆ. ನನ್ನ ಸ್ವಾತಂತ್ರ್ಯಕ್ಕಾಗಿ ಪ್ರಾರ್ಥಿಸಿದ ಎಲ್ಲರಿಗೂ ಮತ್ತು ಪ್ರತಿಯೊಬ್ಬ ವ್ಯಕ್ತಿಗೂ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ 'ಎಂದು 82 ವರ್ಷದ ಅಬ್ದುಲ್ಲಾ ಹೇಳಿದರು.



ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಮತ್ತು ಒಮರ್ ಅಬ್ದುಲ್ಲಾ ಸೇರಿದಂತೆ ಇತರ ಎಲ್ಲಾ ಬಂಧಿತ ನಾಯಕರು ವಿವಿಧ ಕಟ್ಟಡಗಳಲ್ಲಿ ಬಿಡುಗಡೆಯಾದಾಗ ಮಾತ್ರ ಈ ಸ್ವಾತಂತ್ರ್ಯವು ಪೂರ್ಣಗೊಳ್ಳುತ್ತದೆ'ಎಂದು ಅವರು ಹೇಳಿದರು. ಎಲ್ಲರನ್ನು ಬಿಡುಗಡೆ ಮಾಡಲು ಭಾರತ ಸರ್ಕಾರ ಶೀಘ್ರದಲ್ಲೇ ಕ್ರಮ ತೆಗೆದುಕೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ' ಎಲ್ಲಾ ನಾಯಕರು ಬಿಡುಗಡೆಯಾಗುವವರೆಗೂ ಯಾವುದೇ ರಾಜಕೀಯ ಹೇಳಿಕೆ ನೀಡುವುದಿಲ್'ಲ ಎಂದು ಅಬ್ದುಲ್ಲಾ ಹೇಳಿದ್ದಾರೆ.


ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕೇಂದ್ರವು ರದ್ದುಪಡಿಸಿದ ದಿನವಾದ ಕಳೆದ ವರ್ಷ ಆಗಸ್ಟ್ 5 ರಿಂದ ಅಬ್ದುಲ್ಲಾ ಬಂಧನದಲ್ಲಿದ್ದರು. ಸೆಪ್ಟೆಂಬರ್ 15 ರಂದು ಎಂಡಿಎಂಕೆ ನಾಯಕ ವೈಕೊ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆಗೆ ಒಳಪಡಿಸುವ ಕೆಲವೇ ಗಂಟೆಗಳ ಮೊದಲು ಅಬ್ದುಲ್ಲಾ ಅವರನ್ನು ಅಕ್ರಮವಾಗಿ ಬಂಧಿಸಲಾಗಿದೆ ಎಂದು ಹೇಳಿದ್ದರು.