ನವದೆಹಲಿ: ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ (Pranab Mukherjee) ಅವರಿಗೂ ಕರೋನಾವೈರಸ್ ಸೋಂಕು ದೃಢಪಟ್ಟಿದೆ. ತಾವೇ ಸ್ವತಃ ಟ್ವೀಟ್ ಮಾಡಿ  ಅವರೇ ಈ ಮಾಹಿತಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.


ಮುಖ್ಯಮಂತ್ರಿ ಯಡಿಯೂರಪ್ಪಗೆ COVID-19 ನೆಗೆಟಿವ್, ನಾಳೆ ಡಿಸ್ಚಾರ್ಜ್


COMMERCIAL BREAK
SCROLL TO CONTINUE READING

ದೇಶದಲ್ಲಿ ಕರೋನಾ ಸೋಂಕಿಗೆ ಒಳಗಾದವರ ಸಂಖ್ಯೆ 22 ಲಕ್ಷ ದಾಟಿದೆ. ಅನೇಕ ಉನ್ನತ ನಾಯಕರು ಕರೋನಾದ ಹಿಡಿತಕ್ಕೆ ಸಿಲುಕಿದ್ದಾರೆ. ಇದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಸಚಿವ ಅರ್ಜುನ್ ಮೇಘವಾಲ್ ಕೂಡ ಪ್ರಮುಖರು. ಅಷ್ಟೇ ಅಲ್ಲ ಮಧ್ಯಪ್ರದೇಶ ಸಿಎಂ ಶಿವರಾಜ್ ಚೌಹಾಣ್, ಕರ್ನಾಟಕ ಸಿಎಂ ಬಿ.ಎಸ್.ಯಡಿಯೂರಪ್ಪ, ಕರ್ನಾಟಕದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕರೋನಾದಿಂದಾಗಿ ಆಸ್ಪತ್ರೆಯಲ್ಲಿದ್ದಾರೆ.