Ashish Sakharkar: 4 ಬಾರಿ ಮಿಸ್ಟರ್ ಇಂಡಿಯಾ ಬಾಡಿ ಬಿಲ್ಡಿಂಗ್ ಚಾಂಪಿಯನ್ ಆಶಿಶ್ ಸಖರ್ಕರ್ ವಿಧಿವಶ

Mr. India Ashish Sakharkar passes away: ಆಶಿಶ್ ನಿಧನಕ್ಕೆ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಶಿವಸೇನಾ ನಾಯಕ ಆದಿತ್ಯ ಠಾಕ್ರೆ ಸಹ ಸಖರ್ಕರ್ ನಿಧನಕ್ಕೆ ದುಃಖ ವ್ಯಕ್ತಪಡಿಸಿದ್ದು, ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

Written by - Puttaraj K Alur | Last Updated : Jul 22, 2023, 07:14 PM IST
  • 4 ಬಾರಿ ಮಿಸ್ಟರ್ ಇಂಡಿಯಾ ದೇಹದಾರ್ಢ್ಯ ಪ್ರಶಸ್ತಿ ಗೆದ್ದಿದ್ದ ಬಾಡಿ ಬಿಲ್ಡರ್ ಆಶಿಶ್ ಸಖರ್ಕರ್ ನಿಧನ
  • ಬಹುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 43 ವರ್ಷ ವಯಸ್ಸಾಗಿತ್ತು
  • ಆಶಿಶ್ ನಿಧನಕ್ಕೆ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಟ್ವೀಟ್ ಮೂಲಕ ಸಂತಾಪ
Ashish Sakharkar: 4 ಬಾರಿ ಮಿಸ್ಟರ್ ಇಂಡಿಯಾ ಬಾಡಿ ಬಿಲ್ಡಿಂಗ್ ಚಾಂಪಿಯನ್ ಆಶಿಶ್ ಸಖರ್ಕರ್ ವಿಧಿವಶ title=
ಬಾಡಿ ಬಿಲ್ಡರ್ ಆಶಿಶ್ ಸಖರ್ಕರ್ ನಿಧನ

ನವದೆಹಲಿ: 4 ಬಾರಿಯ ಮಿಸ್ಟರ್ ಇಂಡಿಯಾ ದೇಹದಾರ್ಢ್ಯ ಪ್ರಶಸ್ತಿ ಗೆದ್ದಿದ್ದ ಬಾಡಿ ಬಿಲ್ಡರ್ ಆಶಿಶ್ ಸಖರ್ಕರ್ ನಿಧನರಾಗಿದ್ದಾರೆ. ಬಹುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 43 ವರ್ಷ ವಯಸ್ಸಾಗಿತ್ತು.

ಅನಾರೋಗ್ಯದ ಕಾರಣ ಕಳೆದೊಂದು ವಾರದಿಂದ ಮುಂಬೈನ ಆಸ್ಪತ್ರೆಯಲ್ಲಿ ಆಶಿಶ್ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಆಶಿಶ್ ಪತ್ನಿ ಹಾಗೂ ಒಬ್ಬ ಪುತ್ರನನ್ನು ಅಗಲಿದ್ದಾರೆ.

ಇದನ್ನೂ ಓದಿ: ಪರಸ್ಪರ ಒಪ್ಪಿಗೆಯಿಂದ ಶಾರೀರಿಕ ಸಂಬಂಧ, ನಂತರ ರೇಪ್ ಕೇಸ್ ದಾಖಲು, ಹೈಕೋರ್ಟ್ ಹೇಳಿದ್ದೇನು?

ಈ ಬಗ್ಗೆ ಮಾಹಿತಿ ನೀಡಿರುವ ಇಂಡಿಯನ್ ಬಾಡಿ ಬಿಲ್ಡರ್ಸ್ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಹಿರಾಲ್ ಶೇತ್, ಪರೇಲ್‌ನ ನಿವಾಸಿ ಆಶಿಶ್ ಸಖರ್ಕರ್ ಅವರು ಕೆಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಒಂದು ವಾರದ ಹಿಂದೆ ದಕ್ಷಿಣ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರು. 80-ಕೆಜಿ ವಿಭಾಗದಲ್ಲಿ ಸಖರ್ಕರ್ ಅನೇಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಮಹಾರಾಷ್ಟ್ರ ಸರ್ಕಾರದ ಶಿವ ಛತ್ರಪತಿ ಪ್ರಶಸ್ತಿಗೆ ಭಾಜನರಾಗಿದ್ದರು’ ಎಂದು ಹೇಳಿದ್ದಾರೆ.  

ಮಿಸ್ಟರ್ ಇಂಡಿಯಾ ಮಾತ್ರವಲ್ಲದೆ ಆಶಿಶ್, ಮಿ. ಯೂನಿವರ್ಸ್‌ನ ಬೆಳ್ಳಿ ಮತ್ತು ಕಂಚಿನ ಪದಕ ವಿಜೇತರಾಗಿದ್ದರು. ಆಶಿಶ್ ನಿಧನಕ್ಕೆ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಶಿವಸೇನಾ ನಾಯಕ ಆದಿತ್ಯ ಠಾಕ್ರೆ ಸಹ ಸಖರ್ಕರ್ ನಿಧನಕ್ಕೆ ದುಃಖ ವ್ಯಕ್ತಪಡಿಸಿದ್ದು, ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಇದಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ಅಪಾರ ಅಭಿಮಾನಿಗಳು ಸಹ ಆಶಿಶ್ ನಿಧನಕ್ಕೆ ಸಂತಾಪ ಸೂಚಿಸಿ ದುಃಖ ವ್ಯಕ್ತಪಡಿಸಿದ್ದಾರೆ. ಕೆಲವರು ಮಹಾರಾಷ್ಟ್ರದ ದೇಹದಾರ್ಢ್ಯ ಕ್ರೀಡೆಯ ಯುಗದ ಅಂತ್ಯ’ವೆಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬುಡಕಟ್ಟು ಮಹಿಳೆಯರನ್ನು ಬೆತ್ತಲೆಗೊಳಿಸಿ ಹಲ್ಲೆ..! ದೀದಿ ನಾಡಲ್ಲಿ ಅಮಾನವೀಯ ಘಟನೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News