Lok Sabha Election 2024, Rahul Gandhi: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಹುಲ್ ಗಾಂಧಿ ಚುನಾವಣೆಗೆ ಸ್ಪರ್ಧಿಸುವ ಎರಡು ದೃಶ್ಯಗಳು ರೂಪುಗೊಳ್ಳಲಾರಂಭಿಸಿವೆ. ಮಿತ್ರಪಕ್ಷ ಸಿಪಿಐ ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧವಾಗಿದ್ದರೆ, ಮತ್ತೊಮ್ಮೆ ಅಮೇಥಿಯಿಂದ ಸ್ಪರ್ಧಿಸಲು ರಾಹುಲ್ ಮನಸು ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಪ್ರದೇಶವು ಕಾಂಗ್ರೆಸ್‌’ನ ಸಾಂಪ್ರದಾಯಿಕ ಭದ್ರಕೋಟೆಯಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಮುಂಬೈ ಇಂಡಿಯನ್ಸ್ ನಾಯಕತ್ವದಿಂದ ರೋಹಿತ್ ಶರ್ಮಾರನ್ನು ಕೆಳಗಿಳಿಸಿದ್ದು ಇದೇ ಕಾರಣಕ್ಕೆ!


ಮೋದಿ ಅಲೆಯಿಂದಾಗಿ ಅಮೇಥಿಯಲ್ಲಿ ಕಾಂಗ್ರೆಸ್‌’ನ ಸ್ಥಾನ ಕ್ಷೀಣಿಸುತ್ತಲೇ ಇತ್ತು. 1977ರಲ್ಲಿ ಸಂಜಯ್ ಗಾಂಧಿ ಇಲ್ಲಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಕಳೆದ ಬಾರಿ 2019ರ ಚುನಾವಣೆಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ಅವರು ರಾಹುಲ್ ಅವರನ್ನು ಸೋಲಿಸಿದ್ದರು. ಆ ಬಳಿಕ ಬಿಜೆಪಿ ಇಲ್ಲಿ ಬೇರು ಬಿಟ್ಟಿದೆ. ಹೀಗಿರುವಾಗ ರಾಹುಲ್ ಗಾಂಧಿ ಅಮೇಥಿಗೆ ಹೋಗುವ ರಿಸ್ಕ್ ತೆಗೆದುಕೊಳ್ಳುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.


ವಯನಾಡ್ ಸಮೀಕರಣ


ಎರಡನೆಯ ಆಯ್ಕೆ ವಯನಾಡ್. ಉತ್ತರಕ್ಕಿಂತ ದಕ್ಷಿಣದಲ್ಲಿ ಕಾಂಗ್ರೆಸ್ ಪ್ರಭಾವ ಹೆಚ್ಚಿದೆ. ಸಿಪಿಐ ರಾಹುಲ್ ಗಾಂಧಿಯವರ ವಯನಾಡ್ ಸ್ಥಾನದ ಮೇಲೆ ಕಣ್ಣಿಟ್ಟಿದೆ. ವಿರೋಧ ಪಕ್ಷದ I.N.D.I.A ಮೈತ್ರಿಕೂಟದ ಭಾಗವಾಗಿರುವ ಈ ಪಕ್ಷವು ಕೇರಳದ ಈ ಸ್ಥಾನದಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಯಸಿದೆ. ಸೀಟು ಹಂಚಿಕೆ ಬಗ್ಗೆ ಇನ್ನೂ ಮಾತುಕತೆ ನಡೆಯುತ್ತಿದೆ.


ರಾಜ್ಯದಲ್ಲಿ ಅಧಿಕಾರದಲ್ಲಿರುವ ಎಲ್‌’ಡಿಎಫ್‌’ನಲ್ಲಿ ಸಿಪಿಐ ಕೂಡ ಸೇರಿದೆ ಮತ್ತು ಅದು 2024 ರ ಚುನಾವಣೆಯಲ್ಲಿ ಸ್ಪರ್ಧಿಸಬಹುದಾದ ವಯನಾಡ್ ಸೇರಿದಂತೆ ನಾಲ್ಕು ಲೋಕಸಭಾ ಸ್ಥಾನಗಳ ಮೇಲೆ ತನ್ನ ದೃಷ್ಟಿಯನ್ನು ಹೊಂದಿದೆ. ಆದರೆ, ಹೈದರಾಬಾದ್‌’ನಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ನಂತರ, ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ, ವಯನಾಡ್ ಕ್ಷೇತ್ರವನ್ನು ತೊರೆಯುವ ಬಗ್ಗೆ ಕಾಂಗ್ರೆಸ್‌’ನೊಂದಿಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಹೇಳಿದ್ದಾರೆ.


2019ರ ಲೋಕಸಭಾ ಚುನಾವಣೆಯಲ್ಲಿ ವಯನಾಡ್ ಕ್ಷೇತ್ರದಿಂದ ರಾಹುಲ್ 4 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದರು. ಸಿಪಿಐ ಅಭ್ಯರ್ಥಿ ಎರಡನೇ ಸ್ಥಾನದಲ್ಲಿದ್ದರು. 2009 ಮತ್ತು 2014ರಲ್ಲಿಯೂ ಕಾಂಗ್ರೆಸ್‌ ಈ ಕ್ಷೇತ್ರವನ್ನು ವಶಪಡಿಸಿಕೊಂಡಿತ್ತು. ಪ್ರತಿ ಬಾರಿ ಸಿಪಿಐ ಹಿಂದೆ ಬಿದ್ದಿತ್ತು. ರಾಹುಲ್ ಬೇರೆ ಕ್ಷೇತ್ರದಿಂದ ಸ್ಪರ್ಧಿಸಿದರೆ ರಾಜಾ ಅವರ ಪತ್ನಿ ಅನ್ನಿಯನ್ನು ವಯನಾಡ್‌’ನಿಂದ ಪಕ್ಷದ ಅಭ್ಯರ್ಥಿಯನ್ನಾಗಿ ಮಾಡುವ ಸಾಧ್ಯತೆ ಇದೆ.


ಇದನ್ನೂ ಓದಿ: IND vs ENG: ಅಂತಿಮ ಟೆಸ್ಟ್ ಪಂದ್ಯಕ್ಕೆ ತಂಡ ಪ್ರಕಟ! ಕೊಹ್ಲಿ ಸೇರಿ ಮೂವರು ಪ್ರಮುಖ ಆಟಗಾರರೇ ಇಲ್ಲ!


ಸದ್ಯ ತ್ರಿಸದಸ್ಯ ಸಮಿತಿ ಕಾಂಗ್ರೆಸ್ ಜೊತೆ ಸೀಟು ಒಪ್ಪಂದದ ಬಗ್ಗೆ ಮಾತನಾಡುತ್ತಿದ್ದು, ಅದರಲ್ಲಿ ರಾಜಾ ಕೂಡ ಇದ್ದಾರೆ. ಸಿಪಿಐನ ಕೇರಳ ಘಟಕವು ಮೊದಲು ಕೇರಳ ಕಾಂಗ್ರೆಸ್‌’ನೊಂದಿಗೆ ಮಾತುಕತೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ. ಇದಾದ ಬಳಿಕ ಸಮಿತಿಯೊಂದು ದೆಹಲಿಗೆ ಬಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಇತರ ನಾಯಕರನ್ನು ಭೇಟಿ ಮಾಡಲಿದೆ. ರಾಹುಲ್ ಗಾಂಧಿ ವಯನಾಡು ಕ್ಷೇತ್ರವನ್ನು ತೊರೆಯುವ ಸಾಧ್ಯತೆಗಳ ಕುರಿತು ಇಲ್ಲಿ ಚರ್ಚೆ ನಡೆಯಲಿದೆ


 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.