ಗಂಗಾ ಎಕ್ಸ್‌ಪ್ರೆಸ್‌ವೇ ಜಿಲ್ಲೆಗಳನ್ನು ಮಾತ್ರವಲ್ಲದೆ ಹೃದಯಗಳನ್ನೂ ಸಂಪರ್ಕಿಸುತ್ತದೆ: ಯೋಗಿ ಆದಿತ್ಯನಾಥ್

ಶಹಜಹಾನ್‌ಪುರದಲ್ಲಿ ಗಂಗಾ ಎಕ್ಸ್‌ಪ್ರೆಸ್‌ವೇ ಶಂಕುಸ್ಥಾಪನಾ ಸಮಾರಂಭದ ನಂತರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶನಿವಾರದಂದು ಎಕ್ಸ್‌ಪ್ರೆಸ್‌ವೇ ರಾಜ್ಯದ ಜಿಲ್ಲೆಗಳನ್ನು ಸಂಪರ್ಕಿಸುವುದಲ್ಲದೆ ಹೃದಯಗಳನ್ನು ಸಂಪರ್ಕಿಸುತ್ತದೆ ಎಂದು ಹೇಳಿದರು.

Written by - Zee Kannada News Desk | Last Updated : Dec 18, 2021, 06:22 PM IST
  • ಶಹಜಹಾನ್‌ಪುರದಲ್ಲಿ ಗಂಗಾ ಎಕ್ಸ್‌ಪ್ರೆಸ್‌ವೇ ಶಂಕುಸ್ಥಾಪನಾ ಸಮಾರಂಭದ ನಂತರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶನಿವಾರದಂದು ಎಕ್ಸ್‌ಪ್ರೆಸ್‌ವೇ ರಾಜ್ಯದ ಜಿಲ್ಲೆಗಳನ್ನು ಸಂಪರ್ಕಿಸುವುದಲ್ಲದೆ ಹೃದಯಗಳನ್ನು ಸಂಪರ್ಕಿಸುತ್ತದೆ ಎಂದು ಹೇಳಿದರು.
ಗಂಗಾ ಎಕ್ಸ್‌ಪ್ರೆಸ್‌ವೇ ಜಿಲ್ಲೆಗಳನ್ನು ಮಾತ್ರವಲ್ಲದೆ ಹೃದಯಗಳನ್ನೂ ಸಂಪರ್ಕಿಸುತ್ತದೆ: ಯೋಗಿ ಆದಿತ್ಯನಾಥ್ title=

ಶಹಜಹಾನ್‌ಪುರ: ಶಹಜಹಾನ್‌ಪುರದಲ್ಲಿ ಗಂಗಾ ಎಕ್ಸ್‌ಪ್ರೆಸ್‌ವೇ ಶಂಕುಸ್ಥಾಪನಾ ಸಮಾರಂಭದ ನಂತರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶನಿವಾರದಂದು ಎಕ್ಸ್‌ಪ್ರೆಸ್‌ವೇ ರಾಜ್ಯದ ಜಿಲ್ಲೆಗಳನ್ನು ಸಂಪರ್ಕಿಸುವುದಲ್ಲದೆ ಹೃದಯಗಳನ್ನು ಸಂಪರ್ಕಿಸುತ್ತದೆ ಎಂದು ಹೇಳಿದರು.

ಉತ್ತರ ಪ್ರದೇಶದಾದ್ಯಂತ ಸಂಪರ್ಕವನ್ನು ಸುಧಾರಿಸುವ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಹೆಚ್ಚಿಸುವ ಉದ್ದೇಶದಿಂದ, ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರದಂದು (ಡಿಸೆಂಬರ್ 18) ಶಹಜಹಾನ್‌ಪುರದಲ್ಲಿ ಗಂಗಾ ಎಕ್ಸ್‌ಪ್ರೆಸ್‌ವೇಗೆ ಶಂಕುಸ್ಥಾಪನೆ ಮಾಡಿದರು.ಉದ್ಘಾಟನಾ ಸಮಾರಂಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, 2014ರ ಮೊದಲು ದೇಶದಲ್ಲಿ ಘೋಷಣೆಗಳು ಕೇವಲ ಚುನಾವಣಾ ಭರವಸೆಗಳಿಗೆ ಸೀಮಿತವಾಗಿತ್ತು, ಆದರೆ 2014 ರ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ನಿರ್ಲಕ್ಷಿಸಲ್ಪಟ್ಟ ಎಲ್ಲಾ ಸಮಸ್ಯೆಗಳನ್ನು ನಿಭಾಯಿಸಿದರು ಎಂದು ಹೇಳಿದರು.

ಇದನ್ನೂ ಓದಿ: ಬೆಳಗಾವಿಯಲ್ಲಿ ಪುಂಡಾಟಿಕೆ ಖಂಡನೀಯ: ಪುಂಡರನ್ನು ಸದೆಬಡಿಯುತ್ತೇವೆ ಎಂದ ಸಿಎಂ ಬೊಮ್ಮಾಯಿ

"ಕೆಲವು ದಿನಗಳ ಹಿಂದೆಯಷ್ಟೇ ಪ್ರಧಾನಮಂತ್ರಿಯವರು ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯನ್ನು ಉದ್ಘಾಟಿಸಿದರು. ಇಂದು ಪೂರ್ವ ಉತ್ತರ ಪ್ರದೇಶವನ್ನು ಪಶ್ಚಿಮ ಮತ್ತು ಉತ್ತರದೊಂದಿಗೆ ಸಂಪರ್ಕಿಸುವ ಗಂಗಾ ಎಕ್ಸ್‌ಪ್ರೆಸ್‌ವೇಗೆ ಶಂಕುಸ್ಥಾಪನೆ ಮಾಡಲಾಗುತ್ತಿದೆ. ಪ್ರಧಾನಿ ಮೋದಿ  ಮಾ ಗಂಗೆ ಗೌರವ ಸಲ್ಲಿಸಿದರು. ಗಂಗಾ ಎಕ್ಸ್‌ಪ್ರೆಸ್‌ವೇ ಮಾತ್ರವಲ್ಲ. ರಾಜ್ಯದ ಹಲವು ಜಿಲ್ಲೆಗಳನ್ನು ಜೋಡಿಸುವುದರ ಜೊತೆಗೆ  ಆದರೆ ಹೃದಯಗಳನ್ನು ಕೂಡ ಜೋಡಿಸುತ್ತದೆ"ಎಂದು ಯೋಗಿ ಆದಿತ್ಯನಾಥ್ ಹೇಳಿದರು.

ಪ್ರಧಾನಮಂತ್ರಿಗಳ ಕಚೇರಿ (PMO) ಪ್ರಕಾರ, ಎಕ್ಸ್‌ಪ್ರೆಸ್‌ವೇಯ ಹಿಂದಿನ ಸ್ಫೂರ್ತಿಯು ದೇಶದಾದ್ಯಂತ ವೇಗದ ಗತಿಯ ಸಂಪರ್ಕವನ್ನು ಒದಗಿಸುವ ಪ್ರಧಾನಮಂತ್ರಿಯ ದೃಷ್ಟಿಕೋನವಾಗಿದೆ. 594 ಕಿಲೋಮೀಟರ್ ಉದ್ದದ ಆರು ಲೇನ್ ಎಕ್ಸ್‌ಪ್ರೆಸ್‌ವೇಯನ್ನು 36,200 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುವುದು.

ಮೀರತ್‌ನ ಬಿಜೌಲಿ ಗ್ರಾಮದ ಬಳಿ ಪ್ರಾರಂಭವಾಗುವ ಎಕ್ಸ್‌ಪ್ರೆಸ್‌ವೇ ಪ್ರಯಾಗ್‌ರಾಜ್‌ನ ಜುದಾಪುರ್ ದಂಡು ಗ್ರಾಮದವರೆಗೆ ವಿಸ್ತರಿಸಲಿದೆ. ಇದು ಮೀರತ್, ಹಾಪುರ್, ಬುಲಂದ್‌ಶಹರ್, ಅಮ್ರೋಹಾ, ಸಂಭಾಲ್, ಬುದೌನ್, ಶಹಜಾನ್‌ಪುರ, ಹರ್ದೋಯಿ, ಉನ್ನಾವೋ, ರಾಯ್ ಬರೇಲಿ, ಪ್ರತಾಪ್‌ಗಢ ಮತ್ತು ಪ್ರಯಾಗ್‌ರಾಜ್ ಮೂಲಕ ಹಾದುಹೋಗುತ್ತದೆ.

ಇದನ್ನೂ ಓದಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಮೇಲೆ ದಾಳಿ ಮಾಡಿರುವುದು ಕರ್ನಾಟಕದ ಮೇಲಿನ ದಾಳಿಗೆ ಸಮ-ಎಚ್ ಡಿ.ಕುಮಾರಸ್ವಾಮಿ

ಕಾಮಗಾರಿ ಪೂರ್ಣಗೊಂಡ ನಂತರ, ಇದು ಉತ್ತರ ಪ್ರದೇಶದ ಅತಿ ಉದ್ದದ ಎಕ್ಸ್‌ಪ್ರೆಸ್‌ವೇ ಆಗಲಿದ್ದು, ರಾಜ್ಯದ ಪಶ್ಚಿಮ ಮತ್ತು ಪೂರ್ವ ಪ್ರದೇಶಗಳನ್ನು ಸಂಪರ್ಕಿಸುತ್ತದೆ. ಶಹಜಹಾನ್‌ಪುರದ ಎಕ್ಸ್‌ಪ್ರೆಸ್‌ವೇನಲ್ಲಿ ತುರ್ತು ಟೇಕ್-ಆಫ್ ಮತ್ತು ಏರ್ ಫೋರ್ಸ್ ವಿಮಾನಗಳ ಲ್ಯಾಂಡಿಂಗ್‌ಗೆ ಸಹಾಯ ಮಾಡಲು 3.5-ಕಿಲೋಮೀಟರ್ ಉದ್ದದ ಏರ್ ಸ್ಟ್ರಿಪ್ ಅನ್ನು ಸಹ ನಿರ್ಮಿಸಲಾಗುವುದು.

ಎಕ್ಸ್ ಪ್ರೆಸ್ ವೇ ಉದ್ದಕ್ಕೂ ಕೈಗಾರಿಕಾ ಕಾರಿಡಾರ್ ನಿರ್ಮಿಸಲು ಉದ್ದೇಶಿಸಲಾಗಿದೆ.ಈ ಎಕ್ಸ್‌ಪ್ರೆಸ್‌ವೇಯು ಕೈಗಾರಿಕಾ ಅಭಿವೃದ್ಧಿ, ವ್ಯಾಪಾರ, ಕೃಷಿ, ಪ್ರವಾಸೋದ್ಯಮ ಇತ್ಯಾದಿಗಳನ್ನು ಒಳಗೊಂಡಂತೆ ಬಹು ವಲಯಗಳಿಗೆ ಪೂರಕತೆಯನ್ನು ನೀಡುತ್ತದೆ. ಇದು ಪ್ರದೇಶದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ದೊಡ್ಡ ಉತ್ತೇಜನವನ್ನು ನೀಡುತ್ತದೆ.

ಗಂಗಾ ಎಕ್ಸ್‌ಪ್ರೆಸ್‌ವೇ ಅನ್ನು ನವೆಂಬರ್ 26, 2020 ರಂದು ಅನುಮೋದಿಸಲಾಗಿದೆ. ಈ ಎಕ್ಸ್‌ಪ್ರೆಸ್‌ವೇ 2024 ರ ವೇಳೆಗೆ ಪೂರ್ಣಗೊಳ್ಳುತ್ತದೆ. 

ಇದನ್ನೂ ಓದಿ: ಬಿಸಿಎಂ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆ ಸೌಲಭ್ಯ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News