ರಾಮಮಂದಿರಕ್ಕಾಗಿ 'ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್' ರಚನೆ; ಪ್ರಧಾನಿ ಮೋದಿ

ಅಯೋಧ್ಯೆಯಲ್ಲಿ ಭವ್ಯ ರಾಮ ದೇವಾಲಯ ನಿರ್ಮಾಣಕ್ಕೆ ಸರ್ಕಾರ ಯೋಜನೆಯನ್ನು ಸಿದ್ಧಪಡಿಸಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.

Last Updated : Feb 5, 2020, 12:27 PM IST
ರಾಮಮಂದಿರಕ್ಕಾಗಿ 'ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್' ರಚನೆ; ಪ್ರಧಾನಿ ಮೋದಿ title=

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ಟ್ರಸ್ಟ್ ರಚಿಸುವ ಪ್ರಸ್ತಾಪವನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ರಾಮ್ ಟೆಂಪಲ್ ಟ್ರಸ್ಟ್ ರಚನೆಗೆ ಸಂಪುಟ ಅನುಮೋದನೆ ನೀಡಿದೆ. ಅಯೋಧ್ಯೆಯಲ್ಲಿ ಭವ್ಯವಾದ ರಾಮ ದೇವಾಲಯ ನಿರ್ಮಾಣಕ್ಕೆ ಸರ್ಕಾರ ಯೋಜನೆಯನ್ನು ಸಿದ್ಧಪಡಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಲೋಕಸಭೆಯಲ್ಲಿ ಹೇಳಿದರು.

ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಆದೇಶದಂತೆ ಸಂಪುಟ ಸಭೆಯಲ್ಲಿ ಈ ದಿಕ್ಕಿನಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ ಪ್ರಧಾನಿ ನರೇಂದ್ರ ಮೋದಿ, ಅಯೋಧ್ಯೆಯಲ್ಲಿ ಭವ್ಯ ರಾಮ ದೇವಾಲಯ ನಿರ್ಮಾಣಕ್ಕೆ ಸರ್ಕಾರ ಯೋಜನೆಯನ್ನು ಸಿದ್ಧಪಡಿಸಿದೆ. ರಾಮ್ ಟೆಂಪಲ್ ಟ್ರಸ್ಟ್‌ಗೆ 'ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್' ಎಂದು ಹೆಸರಿಡಲಾಗಿದೆ. 5 ಎಕರೆ ಭೂಮಿಯನ್ನು ಸುನ್ನಿ ವಕ್ಫ್ ಮಂಡಳಿಗೆ ನೀಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು ತಿಳಿಸಿದರು.

ಭಗವಾನ್ ರಾಮನ ಜನ್ಮಸ್ಥಳದಲ್ಲಿ ಬೃಹತ್ ಮತ್ತು ಭವ್ಯವಾದ ರಾಮ್ ದೇವಾಲಯ ನಿರ್ಮಾಣಕ್ಕೆ ಶ್ರೀ ರಾಮ್ ಜನಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಗಮನಾರ್ಹವಾಗಿ ಪ್ರಧಾನಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಟ್ರಸ್ಟ್ ರಚಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇದಕ್ಕೂ ಮುನ್ನ ಮಂಗಳವಾರ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಪರ ಇಕ್ಬಾಲ್ ಅನ್ಸಾರಿ ಅವರು ಅಯೋಧ್ಯೆಯಲ್ಲಿ ರಾಮ್ ದೇವಾಲಯ ನಿರ್ಮಾಣಕ್ಕೆ ಆದಷ್ಟು ಬೇಗ ಟ್ರಸ್ಟ್ ನಿರ್ಮಿಸಬೇಕೆಂದು ಕೇಂದ್ರದ ನರೇಂದ್ರ ಮೋದಿ ಸರ್ಕಾರ ಬಯಸಿದೆ ಎಂದು ಹೇಳಿದರು. ಇದರೊಂದಿಗೆ ರಾಮ ದೇವಾಲಯದ ನಿರ್ಮಾಣವನ್ನು ಪ್ರಾರಂಭಿಸಬಹುದು. ಮಸೀದಿಗೆ ಸುಪ್ರೀಂ ಕೋರ್ಟ್ ನೀಡಿರುವ ಭೂಮಿಯನ್ನು ಆದಷ್ಟು ಬೇಗ ಗುರುತಿಸಬೇಕು ಎಂದು ಅವರು ಕೇಂದ್ರದ ನರೇಂದ್ರ ಮೋದಿ ಸರ್ಕಾರವನ್ನು ಒತ್ತಾಯಿಸಿದ್ದರು.

ಅಷ್ಟೇ ಅಲ್ಲ, ಅಯೋಧ್ಯೆಯ ಅಭಿವೃದ್ಧಿಗಾಗಿ ರಾಮ ದೇವಾಲಯದ ನಿರ್ಮಾಣವನ್ನು ಹಿಂದೂ ಸಮಾಜದ ಜನರು ಕೂಡಲೇ ಪ್ರಾರಂಭಿಸಬೇಕು ಎಂದು ಅವರು ಹೇಳಿದರು. ರಾಮನ ದೇವಾಲಯ ನಿರ್ಮಾಣಕ್ಕೆ ಟ್ರಸ್ಟ್ ರಚಿಸಲು ಸುಪ್ರೀಂಕೋರ್ಟ್ ಫೆಬ್ರವರಿ 9 ರವರೆಗೆ ಗಡುವು ನೀಡಿದೆ. ಸುಪ್ರೀಂ ಕೋರ್ಟ್ ತೀರ್ಪು ನೀಡಿ 3 ತಿಂಗಳುಗಳು ಸಮೀಪಿಸುತ್ತಿದೆ. ಆದರೂ ರಾಮಮಂದಿರ ನಿರ್ಮಾಣ ಪ್ರಾರಂಭವಾಗಿಲ್ಲ. ಭಗವಾನ್ ಶ್ರೀರಾಮ ಇನ್ನೂ ಎಷ್ಟು ದಿನಗಳ ಕಾಲ ಟೆಂಟ್ ನಲ್ಲಿ ಇರಬೇಕು ಎಂದು ಬಾಬ್ರಿ ಪಕ್ಷ ಇಕ್ಬಾಲ್ ಅನ್ಸಾರಿ ಕೇಂದ್ರದ ನರೇಂದ್ರ ಮೋದಿ ಸರ್ಕಾರವನ್ನು ಪ್ರಶ್ನಿಸಿದ್ದರು.

ಗಮನಾರ್ಹವಾಗಿ, ನವೆಂಬರ್ 9 ರಂದು ಸುಪ್ರೀಂ ಕೋರ್ಟ್ ಅಯೋಧ್ಯೆ ಪ್ರಕರಣದ ಬಗ್ಗೆ ತೀರ್ಪು ನೀಡುವಾಗ ರಾಮ ಮಂದಿರಕ್ಕಾಗಿ ಟ್ರಸ್ಟ್ ರಚಿಸುವಂತೆ ಸರ್ಕಾರಕ್ಕೆ ಆದೇಶಿಸಿದೆ. ಜೊತೆ ಟ್ರಸ್ಟ್ ರಚಿಸಲು ಫೆಬ್ರವರಿ 9 ರವರೆಗಿನ ಗಡುವನ್ನು ನ್ಯಾಯಾಲಯ ನಿಗದಿಪಡಿಸಿತ್ತು. ದೇವಾಲಯದ ನಿರ್ಮಾಣದ ಸಂಪೂರ್ಣ ರೂಪುರೇಷೆ ಸಿದ್ಧಪಡಿಸುವ ಮತ್ತು ಅದನ್ನು ಅನುಷ್ಠಾನಗೊಳಿಸುವ ಜವಾಬ್ದಾರಿಯನ್ನು ಟ್ರಸ್ಟ್ ನಿರ್ವಹಿಸಲಿದೆ ಎಂದು ನ್ಯಾಯಾಲಯ ನಿರ್ದೇಶಿಸಿತ್ತು.

Trending News