Kisan Andolan: ರೈತರ 13 ಬೇಡಿಕೆಗಳ ಪೈಕಿ 10 ಬೇಡಿಕೆಗಳಿಗೆ ಸರ್ಕಾರದ ಅಸ್ತು ! 3 ಬೇಡಿಕೆಗಳ ಬಗ್ಗೆ ಚರ್ಚಿಸುವ ಭರವಸೆ
Kisan Andolan Demands:ಮೂಲಗಳ ಪ್ರಕಾರ ರೈತರ 13 ಬೇಡಿಕೆಗಳ ಪೈಕಿ 10 ಬೇಡಿಕೆಗಳನ್ನು ಸರ್ಕಾರ ತಕ್ಷಣವೇ ಅಂಗೀಕರಿಸಿದೆ. ಈ ಬಗ್ಗೆ ರೈತ ಮುಖಂಡರೊಂದಿಗೆ ಎರಡು ಸುತ್ತಿನ ಮಾತುಕತೆ ನಡೆದಿದೆ.
Kisan Andolan Demands : ಎಂಎಸ್ಪಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪಂಜಾಬ್, ಹರಿಯಾಣ ಸೇರಿದಂತೆ ಹಲವು ರಾಜ್ಯಗಳ ರೈತರು ದೆಹಲಿಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಯ ಎಲ್ಲಾ ಗಡಿಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ರೈತರ ‘ದೆಹಲಿ ಚಲೋ’ ಜಾಥಾದ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಕೈ ಗೊಳ್ಳಲಾಗಿದ್ದು, ಸಂಚಾರ ನಿರ್ಬಂಧ ಹೇರಲಾಗಿದೆ. ರೈತರ 13 ಬೇಡಿಕೆಗಳ ಪೈಕಿ 10 ಬೇಡಿಕೆಗಳನ್ನು ಸರ್ಕಾರ ತಕ್ಷಣವೇ ಅಂಗೀಕರಿಸಿದೆ ಎನ್ನುವ ಮಾಹಿತಿಯಿದೆ.
3 ಬೇಡಿಕೆಗಳ ಕುರಿತು ಚರ್ಚಿಸುವುದಾಗಿ ಸರ್ಕಾರದ ಭರವಸೆ :
ಮೂಲಗಳ ಪ್ರಕಾರ ರೈತರ 13 ಬೇಡಿಕೆಗಳ ಪೈಕಿ 10 ಬೇಡಿಕೆಗಳನ್ನು ಸರ್ಕಾರ ತಕ್ಷಣವೇ ಅಂಗೀಕರಿಸಿದೆ. ಈ ಬಗ್ಗೆ ರೈತ ಮುಖಂಡರೊಂದಿಗೆ ಎರಡು ಸುತ್ತಿನ ಮಾತುಕತೆ ನಡೆದಿದೆ. ಇದರಲ್ಲಿ 13 ಬೇಡಿಕೆಗಳ ಪೈಕಿ 10 ಬೇಡಿಕೆಗಳನ್ನು ತಕ್ಷಣವೇ ಅಂಗೀಕರಿಸಿದ ಸರ್ಕಾರ, 3 ಬೇಡಿಕೆಗಳ ಬಗ್ಗೆ ಚರ್ಚಿಸುವುದಾಗಿ ಭರವಸೆ ನೀಡಿದೆ. ರೈತ ಮುಖಂಡರು ಮತ್ತು ಕೇಂದ್ರ ಸಚಿವರ ನಡುವೆ ಇತ್ತೀಚೆಗೆ ನಡೆದ ಸಭೆಯಲ್ಲಿ ಕನಿಷ್ಠ ಬೆಂಬಲ ಬೆಲೆ, ಖಾತರಿ ಕಾಯ್ದೆ ಮತ್ತು ಸಾಲ ಮನ್ನಾ ಕುರಿತು ಒಮ್ಮತಕ್ಕೆ ಬರಲಿಲ್ಲ.
ಇದನ್ನೂ ಓದಿ : Tamil Nadu Sri Lankan Navy: ಶ್ರೀಲಂಕಾ ನೌಕಾಪಡೆಯಿಂದ ಬಂಧಿಸಲ್ಪಟ್ಟ 18 ಭಾರತೀಯ ಮೀನುಗಾರರ ಬಿಡುಗಡೆ: ತವರಿಗೆ ವಾಪಾಸ್
ರೈತರು ಸರ್ಕಾರದ ಮುಂದಿಟ್ಟಿರುವ ಬೇಡಿಕೆ ಏನು? :
- ಎಲ್ಲಾ ಬೆಳೆಗಳ ಖರೀದಿಯನ್ನು ಎಂಎಸ್ಪಿಯಲ್ಲಿ ಖಾತರಿಪಡಿಸಲು ಕಾನೂನು ರೂಪಿಸಬೇಕು.
- ಡಾ.ಸ್ವಾಮಿನಾಥನ್ ಆಯೋಗದ ವರದಿ ಪ್ರಕಾರ ಬೆಲೆ ನಿಗದಿ ಮಾಡಬೇಕು.
- ರೈತರ ಮತ್ತು ರೈತ ಕಾರ್ಮಿಕರ ಸಾಲ ಮನ್ನಾ ಮಾಡಬೇಕು.
- 60 ವರ್ಷ ಮೇಲ್ಪಟ್ಟ ರೈತರಿಗೆ 10,000 ರೂಪಾಯಿ ಪಿಂಚಣಿ ನೀಡಬೇಕು.
- 2013ರ ಭೂಸ್ವಾಧೀನ ಕಾಯ್ದೆಯನ್ನು ಮರು ಜಾರಿಗೊಳಿಸಬೇಕು.
- ಲಖೀಂಪುರ ಖೇರಿ ಘಟನೆಯ ಅಪರಾಧಿಗಳಿಗೆ ಶಿಕ್ಷೆಯಾಗಬೇಕು.
- ಮುಕ್ತ ವ್ಯಾಪಾರ ಒಪ್ಪಂದಗಳನ್ನು ನಿಷೇಧಿಸಬೇಕು.
- ವಿದ್ಯುತ್ ತಿದ್ದುಪಡಿ ಮಸೂದೆ 2020 ರದ್ದುಗೊಳಿಸಬೇಕು.
- MNREGA ಅಡಿಯಲ್ಲಿ, ಪ್ರತಿ ವರ್ಷ 200 ದಿನಗಳ ಕೆಲಸ ಮತ್ತು ದಿನಕ್ಕೆ 700 ರೂ.ಕೂಲಿ
- ರೈತ ಚಳವಳಿಯಲ್ಲಿ ಮಡಿದ ರೈತರ ಕುಟುಂಬಗಳಿಗೆ ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡಬೇಕು.
- ನಕಲಿ ಬೀಜಗಳು, ಕೀಟನಾಶಕಗಳು ಮತ್ತು ರಸಗೊಬ್ಬರಗಳನ್ನು ಮಾರಾಟ ಮಾಡುವ ಕಂಪನಿಗಳ ವಿರುದ್ಧ ಕಠಿಣ ಕಾನೂನು ಮಾಡಬೇಕು.
- ಮೆಣಸಿನಕಾಯಿ, ಅರಿಶಿನ ಮತ್ತಿತರ ಸಾಂಬಾರ ಪದಾರ್ಥಗಳಿಗೆ ರಾಷ್ಟ್ರೀಯ ಆಯೋಗ ರಚಿಸಬೇಕು.
- ಸಂವಿಧಾನದ 5ನೇ ಶೆಡ್ಯೂಲ್ ಜಾರಿಗೆ ತರುವ ಮೂಲಕ ಆದಿವಾಸಿಗಳ ಭೂಮಿ ಲೂಟಿ ಮಾಡುವುದನ್ನು ನಿಲ್ಲಿಸಬೇಕು.
ಇದನ್ನೂ ಓದಿ : ಮುಸ್ಲಿಂ ರಾಷ್ಟ್ರ ಯುಎಇನಲ್ಲಿ ಮೊದಲ ಬಾರಿಗೆ ಹಿಂದೂ ದೇಗುಲ ಕಟ್ಟಿಸಿದ ವ್ಯಕ್ತಿ ಯಾರು ಗೊತ್ತಾ?
ಕಳೆದ ಬಾರಿ 378 ದಿನಗಳ ಕಾಲ ರೈತರ ಚಳವಳಿ ನಡೆದಿತ್ತು :
2020 ರ ಆರಂಭದಲ್ಲಿ, ರೈತರು ಮೂರು ಕೃಷಿ ಕಾನೂನುಗಳ ವಿರುದ್ಧ ಚಳವಳಿಯನ್ನು ಪ್ರಾರಂಭಿಸಿದ್ದರು. 17 ಸೆಪ್ಟೆಂಬರ್ 2020 ರಂದು, ರೈತರು ದೆಹಲಿಯ ಗಡಿಯಲ್ಲಿ ಚಳುವಳಿಯನ್ನು ಪ್ರಾರಂಭಿಸಿದರು. ನಂತರ ಚಳವಳಿಯು 378 ದಿನಗಳವರೆಗೆ ಮುಂದುವರೆಯಿತು. ಈ ಅವಧಿಯಲ್ಲಿ 700 ರೈತರು ಸಾವನ್ನಪ್ಪಿದ್ದಾರೆ ಎನ್ನಲಾಯಿತು. ಆದರೆ ಗುರುನಾನಕ್ ದೇವ್ ಪ್ರಕಾಶ್ ಪರ್ವ್ನಲ್ಲಿ, ಪಿಎಂ ನರೇಂದ್ರ ಮೋದಿ ಅವರು ಎಲ್ಲಾ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ಘೋಷಿಸಿದ್ದರು. ನಂತರ ರೈತರು ಡಿಸೆಂಬರ್ 11, 2021 ರಂದು ಆಂದೋಲನವನ್ನು ಕೊನೆಗೊಳಿಸುವುದಾಗಿ ಘೋಷಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.