ಅಹಮದಾಬಾದ್: ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ಅವರು ಇನ್ನೂ 10 ದಿನಗಳಲ್ಲಿ ರಾಜಿನಾಮೆ ನೀಡಲಿದ್ದಾರೆ ಎಂಬ ಹೇಳಿಕೆಯೊಂದನ್ನು ಗುಜರಾತ್ ಪಾಟೀದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಈ ಹಿಂದಿನ ಮುಖ್ಯಮಂತ್ರಿ ಆನಂದಿ ಬೇನ್ ಪಟೇಲ್ ಅವರಿಗೆ ರಾಜೀನಾಮೆ ನೀಡಲು ಹೇಳಿದಂತೆ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ವಿಜಯ ರೂಪಾಣಿ ಅವರಿಗೆ ರಾಜೀನಾಮೆ ನೀಡಲು ಹೇಳಲಾಗಿದೆ" ಎಂದು ತಿಳಿಸಿದರು. 


ಮುಖ್ಯಮಂತ್ರಿಯಾಗಿ ವಿಜಯ್ ರೂಪಾಣಿ ಅವರಿಗೆ ರಾಜ್ಯ ಆಡಳಿತವನ್ನು ಸೂಕ್ತ ರೀತಿಯಲ್ಲಿ ನಿಭಾಯಿಸಲು ಆಗುತ್ತಿಲ್ಲ. ಇದಕಾಗಿ ಕ್ಯಾಬಿನೆಟ್ ಅವರಿಗೆ ರಾಜೀನಾಮೆ ನೀಡಲು ಹೇಳಿದೆ. ವಿಜಯ್ ರೂಪಾಣಿ ಅವರು ರಾಜಿನಾಮೆ ನೀಡಿದ ನಂತರ ಕ್ಷತ್ರಿಯ ಅಥವಾ ಪಾಟೀದಾರ್ ಸಮುದಾಯದವರು ಮುಂದಿನ ಮುಖ್ಯಮಂತ್ರಿ ಆಗುವ ನಿರೀಕ್ಷೆಯಲ್ಲಿದ್ದೇನೆ ಎಂದು ಹೇಳಿದ್ದಾರೆ. ಆದರೆ, ವಿಜಯ್ ರೂಪಾಣಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಿದೆ.