ಗುರುದಾಸ್‌ಪುರದಲ್ಲಿ ಪಟಾಕಿ ಕಾರ್ಖಾನೆ ಸ್ಫೋಟ; 23 ಸಾವು, ಇಂದು ಬಟಾಲಾಕ್ಕೆ ಸಿಎಂ ಅಮರಿಂದರ್ ಭೇಟಿ

ಗುರುದಾಸ್‌ಪುರ ಸ್ಫೋಟ: ಬಟಾಲಾದ ಪಟಾಕಿ ಕಾರ್ಖಾನೆಯಲ್ಲಿ ಬುಧವಾರ ಸ್ಫೋಟ ಸಂಭವಿಸಿದೆ. ಮೃತಪಟ್ಟವರ ಕುಟುಂಬಗಳಿಗೆ 2-2 ಲಕ್ಷ ರೂ.ಗಳ ಪರಿಹಾರ ಘೋಷಿಸಲಾಗಿದೆ.  

Last Updated : Sep 5, 2019, 09:29 AM IST
ಗುರುದಾಸ್‌ಪುರದಲ್ಲಿ ಪಟಾಕಿ ಕಾರ್ಖಾನೆ ಸ್ಫೋಟ; 23 ಸಾವು, ಇಂದು ಬಟಾಲಾಕ್ಕೆ ಸಿಎಂ ಅಮರಿಂದರ್ ಭೇಟಿ title=
Image Credits: IANS

ಗುರುದಾಸ್‌ಪುರ: ಪಂಜಾಬ್‌ನ ಗುರುದಾಸ್‌ಪುರದಲ್ಲಿ ಬುಧವಾರ ಸಂಜೆ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 23 ಕ್ಕೆ ತಲುಪಿದೆ. ಈ ಘಟನೆಯಲ್ಲಿ ಇತರ 27 ಜನರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಮತ್ತು ಗಾಯಗೊಂಡವರಿಗೆ ಪಂಜಾಬ್ ಸರ್ಕಾರ ಪರಿಹಾರವನ್ನು ಘೋಷಿಸಿದೆ.

ಮೃತಪಟ್ಟ ಪ್ರತಿಯೊಬ್ಬ ವ್ಯಕ್ತಿಯ ಕುಟುಂಬಕ್ಕೆ ಎರಡು ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡಲಾಗುವುದು ಎಂದು ಪಂಜಾಬ್ ಸರ್ಕಾರದ ಕ್ಯಾಬಿನೆಟ್ ಸಚಿವ ಸುಖ್ವಿಂದರ್ ರಾಂಧವಾ ಹೇಳಿದ್ದಾರೆ. ಅಲ್ಲದೆ, ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿಗಳ ಪರಿಹಾರವನ್ನು ಘೋಷಿಸಲಾಗಿದೆ. ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಇಂದು ಬೆಳಿಗ್ಗೆ ಬಟಾಲಾಕ್ಕೆ ತೆರಳಿ ಪರಿಸ್ಥಿತಿಯ ಬಗ್ಗೆ ಮಾಹಿತಿ ತೆಗೆದುಕೊಳ್ಳಲಿದ್ದಾರೆ.

ಪಟಾಕಿ ಕಾರ್ಖಾನೆಯಲ್ಲಿ ನಡೆದ ಸ್ಫೋಟದ ಬಗ್ಗೆ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದ್ದಾರೆ. ಅಲ್ಲದೆ, ಗಾಯಾಳುಗಳಿಗೆ ತಲಾ 25 ಸಾವಿರ ರೂಪಾಯಿ ಪರಿಹಾರವನ್ನು ಘೋಷಿಸಲಾಗಿದೆ. ಇದರೊಂದಿಗೆ ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವಂತೆ ಮುಖ್ಯಮಂತ್ರಿಗಳು ಪೊಲೀಸ್ ಮತ್ತು ಆಡಳಿತಕ್ಕೆ ಸೂಚನೆ ನೀಡಿದ್ದಾರೆ.

ಮಾಹಿತಿಯ ಪ್ರಕಾರ, ಸ್ಫೋಟದಿಂದಾಗಿ ಪಟಾಕಿ ಕಾರ್ಖಾನೆ ಸಂಪೂರ್ಣವಾಗಿ ನಾಶವಾಗಿದೆ. ಈ ಘಟನೆ ಇಡೀ ಪ್ರದೇಶದಲ್ಲಿ ಗೊಂದಲಕ್ಕೆ ಕಾರಣವಾಯಿತು. ಘಟನೆ ನಡೆದ ಕೂಡಲೇ ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳು ಪರಿಹಾರ ಕಾರ್ಯದಲ್ಲಿ ತೊಡಗಿದ್ದರು. ಕಾರ್ಖಾನೆಯ ಮಾಲೀಕರ ಕುಟುಂಬದ ಐವರು ಸದಸ್ಯರನ್ನು ಸಹ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಿದ್ದಾರೆ. ಜೆಸಿಬಿಯ ಸಹಾಯದಿಂದ ಘಟನಾ ಸ್ಥಳದಲ್ಲಿ ಅವಶೇಷಗಳಡಿ ಸಿಲುಕಿರುವವರನ್ನು ಹೊರ ತೆಗೆಯಲಾಗುತ್ತಿದೆ.

Trending News