'ನೀರು ನಿಲ್ಲಿಸಿದರೆ, ನಾವು ನಿಮ್ಮ ಉಸಿರನ್ನು ನಿಲ್ಲಿಸುತ್ತೇವೆ' : ಪ್ರಧಾನಿಗೆ ಉಗ್ರ ಹಫೀಜ್ ಜೀವ ಬೆದರಿಕೆ, ವಿಡಿಯೋ ವೈರಲ್‌

Pahalgam attack Latest updates : ನೀವು ನೀರನ್ನು ಬಂದ್‌ ಮಾಡಿದರೆ, ನಾವು ನಿಮ್ಮ ಉಸಿರಾಟವನ್ನು ಬಂದ್‌ ಮಾಡುತ್ತೇವೆ. ಕಣಿವೆಗಳಲ್ಲಿ ರಕ್ತ ಹರಿಯಲಿದೆ ಎಂದು ಹಫೀಜ್ ಸಯೀದ್ ಬೆದರಿಕೆ ಹಾಕುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋವನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಿದೆ ಎಂದು ಹೇಳಲಾಗುತ್ತಿದೆ.

Written by - Krishna N K | Last Updated : Apr 25, 2025, 11:56 PM IST
    • ನೀವು ನೀರನ್ನು ಬಂದ್‌ ಮಾಡಿದರೆ, ನಾವು ನಿಮ್ಮ ಉಸಿರಾಟವನ್ನು ಬಂದ್‌ ಮಾಡುತ್ತೇವೆ.
    • ಹಫೀಜ್ ಸಯೀದ್ ಬೆದರಿಕೆ ಹಾಕುತ್ತಿರುವ ವಿಡಿಯೋ ವೈರಲ್ ಆಗಿದೆ.
    • ಪಾಕಿಸ್ತಾನದ ಗುಪ್ತಚರ ಸಂಸ್ಥೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಿದೆ
'ನೀರು ನಿಲ್ಲಿಸಿದರೆ, ನಾವು ನಿಮ್ಮ ಉಸಿರನ್ನು ನಿಲ್ಲಿಸುತ್ತೇವೆ' : ಪ್ರಧಾನಿಗೆ ಉಗ್ರ ಹಫೀಜ್ ಜೀವ ಬೆದರಿಕೆ, ವಿಡಿಯೋ ವೈರಲ್‌

Hafiz Saeed viral video : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ಭೀಕರ ಭಯೋತ್ಪಾದಕ ದಾಳಿ ನಡೆದಿದೆ. ಅದಾದ ನಂತರ ಭಾರತ ಪಾಕಿಸ್ತಾನದ ವಿರುದ್ಧ ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿತು. ಭಾರತವು ಸಿಂಧೂ ನದಿ ಒಪ್ಪಂದವನ್ನು ರದ್ದುಗೊಳಿಸಿದೆ. ಅಂದಿನಿಂದ ಉಭಯ ದೇಶಗಳ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. 

Add Zee News as a Preferred Source

ಆ ಹಿನ್ನೆಲೆಯಲ್ಲಿ, ಕುಖ್ಯಾತ ಭಯೋತ್ಪಾದಕ ಹಫೀಜ್ ಸಯೀದ್‌ನ ಹಳೆಯ ವಿಡಿಯೋವೊಂದು ವೈರಲ್ ಆಗಿದೆ. ಆ ವಿಡಿಯೋದಲ್ಲಿ ಹಫೀಜ್ ಸಯೀದ್ ಪ್ರಧಾನಿ ನರೇಂದ್ರ ಮೋದಿಗೆ ಬೆದರಿಕೆ ಹಾಕಿದ್ದಾನೆ. "ನೀವು ಪಾಕಿಸ್ತಾನದ ನೀರನ್ನು ನಿಲ್ಲಿಸಿದರೆ, ನಾವು ನಿಮ್ಮ ಉಸಿರಾಟವನ್ನು ನಿಲ್ಲಿಸುತ್ತೇವೆ. ಕಣಿವೆಗಳಲ್ಲಿ ರಕ್ತ ಹರಿಯುತ್ತದೆ" ಎಂದು ಹಫೀಜ್ ಸಯೀದ್ ಬೆದರಿಕೆ ಹಾಕುತ್ತಿರುವ ವಿಡಿಯೋ ಇದೆ .

ಇದನ್ನೂ ಓದಿ:ಪಾಕಿಸ್ತಾನಿ ಪ್ರಜೆಗಳ ಸಂಖ್ಯೆಯನ್ನು ಲೆಕ್ಕಹಾಕಿ, ಅವರನ್ನು ಅವರ ದೇಶಕ್ಕೆ ಕಳುಹಿಸಿ : ಅಮಿತ್ ಶಾ ಸೂಚನೆ

ಭಯೋತ್ಪಾದಕ ಹಫೀಜ್ ಸಯೀದ್‌ನ ಹಳೆಯ ವಿಡಿಯೋವನ್ನು ವೈರಲ್ ಮಾಡುವ ಮೂಲಕ ಪಾಕಿಸ್ತಾನ ಭಾರತಕ್ಕೆ ಬೆದರಿಕೆ ಹಾಕಲು ಪ್ರಯತ್ನಿಸುತ್ತಿದೆ. ಪಹಲ್ಗಾಮ್‌ ದಾಳಿ ಹಿನ್ನೆಲೆ, ಈ ವಿಡಿಯೋವನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಿದೆ ಎಂದು ಹೇಳಲಾಗುತ್ತಿದೆ.

ಪಹಲ್ಗಾಮ್ ದಾಳಿಯ ನಂತರ ಭಾರತ ಹಲವು ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ನವದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ನಲ್ಲಿರುವ ರಕ್ಷಣಾ, ಮಿಲಿಟರಿ, ನೌಕಾ ಮತ್ತು ವಾಯು ಸಲಹೆಗಾರರನ್ನು ಒಂದು ವಾರದೊಳಗೆ ಭಾರತ ತೊರೆಯುವಂತೆ ಭಾರತ ಆದೇಶಿಸಿದೆ. ಭಾರತವು ಇಸ್ಲಾಮಾಬಾದ್‌ನಲ್ಲಿರುವ ತನ್ನ ಹೈಕಮಿಷನ್‌ನಿಂದ ತನ್ನ ರಕ್ಷಣಾ, ನೌಕಾ ಮತ್ತು ವಾಯು ಸಲಹೆಗಾರರನ್ನು ವಾಪಸ್ ಕರೆಸಿಕೊಂಡಿದೆ. ಸಿಂಧೂ ನದಿ ನೀರು ಹಂಚಿಕೆ ಒಪ್ಪಂದವನ್ನೂ ರದ್ದುಗೊಳಿಸಲಾಗಿದೆ.

ಇದನ್ನೂ ಓದಿ:ಸಾವರ್ಕರ್ ಕುರಿತ ರಾಹುಲ್ ಗಾಂಧಿ ಹೇಳಿಕೆ : ಕೈ ನಾಯಕನಿಗೆ ಛೀಮಾರಿ ಹಾಕಿದ ನ್ಯಾಯಾಲಯ 

ಸಿಂಧೂ ನದಿ ನೀರು ಒಪ್ಪಂದದ ನಂತರ ಭಾರತ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಭಾರತವು ಅಟ್ಟಾರಿ ಗಡಿಯನ್ನು ಸಹ ಮುಚ್ಚಿದೆ. ಭಾರತದ ಕಠಿಣ ಕ್ರಮಗಳನ್ನು ಅನುಸರಿಸಿ, ಪಾಕಿಸ್ತಾನ ಶುಕ್ರವಾರ ಕೆಲವು ನಿರ್ಧಾರಗಳನ್ನು ತೆಗೆದುಕೊಂಡಿತು. ಪಾಕಿಸ್ತಾನವು ಭಾರತ ತನ್ನ ವಾಯುಪ್ರದೇಶವನ್ನು ಬಳಸುವುದನ್ನು ನಿಷೇಧಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

...Read More

Trending News