ನವದೆಹಲಿ: ಪಾಟಿದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ಶೀಘ್ರದಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗುಜರಾತ್ ನ ಜಾಮ್ ನಗರದಿಂದ ಸ್ಪರ್ಧಿಸಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.


COMMERCIAL BREAK
SCROLL TO CONTINUE READING

ಗುಜರಾತ್ನಲ್ಲಿರುವ ಪಟಿದರ್ ಸಮುದಾಯದ ಮೀಸಲಾತಿಯ ಬೇಡಿಕೆಯ ಮೇಲೆ ಚಳವಳಿಯ ನೇತೃತ್ವ ವಹಿಸಿದ್ದ ಹಾರ್ದಿಕ್ ಪಟೇಲ್, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಉಪಸ್ಥಿತಿಯಲ್ಲಿ ಮಾರ್ಚ್ 12 ರಂದು ಸೇರ್ಪಡೆಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 


ಮಾಹಿತಿ ಪ್ರಕಾರ, ಅಹಮದಾಬಾದ್ನಲ್ಲಿ ನಡೆಯುವ ಕಾಂಗ್ರೆಸ್ ವರ್ಕಿಂಗ್ ಕಮಿಟಿಯ (ಸಿಡಬ್ಲ್ಯೂಸಿ) ಸಭೆಯಲ್ಲಿ ಪಟೇಲ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ. ಸಭೆಯ ನಂತರ ಪಕ್ಷದ ಉನ್ನತ ನಾಯಕರು ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಗುಜರಾತ್ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ರಾಜ್ಯವಾಗಿದ್ದು, ಕಳೆದ ವಿಧಾನಸಭಾ ಚುನಾವಣಾ ವೇಳೆ ಆಡಳಿತಾರೂಢ ಬಿಜೆಪಿಗೆ ಕಠಿಣ ಸ್ಪರ್ಧೆ ನೀಡಿದ್ದ ಕಾಂಗ್ರೆಸ್ ಗುಜರಾತ್ ಅನ್ನು ಕೇಂದ್ರೀಕರಿಸುತ್ತಿದೆ. 


ಜಾಮ್ನಗರ್ ಲೋಕಸಭಾ ಕ್ಷೇತ್ರವನ್ನು ಪ್ರಸ್ತುತ ಭಾರತೀಯ ಜನತಾ ಪಕ್ಷ (ಬಿಜೆಪಿ) ನ ಪೂನಂಬೆನ್ ಮಾಡಮ್ ಪ್ರತಿನಿಧಿಸುತ್ತಿದ್ದಾರೆ.