ಹರಿಯಾಣ ಕಾಂಗ್ರೆಸ್ ಆಂತರಿಕ ಕಲಹದಿಂದ ಎರಡು ಬಣಗಳಾಗಿದೆ: ಅನಿಲ್ ವಿಜ್

ಹರಿಯಾಣ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹದ ವರದಿಗಳ ನಡುವೆಯೇ ಕಾಂಗ್ರೆಸ್ ರಾಜ್ಯ ಘಟಕವು ಎರಡು ಬಣಗಳಾಗಿದೆ ಎಂದು ಬಿಜೆಪಿ ನಾಯಕ ಹಾಗೂ ಸಚಿವ ಅನಿಲ್ ವಿಜ್ ಹೇಳಿದ್ದಾರೆ.

Last Updated : Oct 3, 2019, 08:42 AM IST
ಹರಿಯಾಣ ಕಾಂಗ್ರೆಸ್ ಆಂತರಿಕ ಕಲಹದಿಂದ ಎರಡು ಬಣಗಳಾಗಿದೆ: ಅನಿಲ್ ವಿಜ್ title=

ಅಂಬಾಲಾ: ಹರಿಯಾಣ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹದ ವರದಿಗಳ ನಡುವೆಯೇ ಕಾಂಗ್ರೆಸ್ ರಾಜ್ಯ ಘಟಕವು ಎರಡು ಬಣಗಳಾಗಿದೆ ಎಂದು ಬಿಜೆಪಿ ನಾಯಕ ಹಾಗೂ ಸಚಿವ ಅನಿಲ್ ವಿಜ್ ಹೇಳಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಕಾಂಗ್ರೆಸ್ ಹರಿಯಾಣ ಘಟಕದ ಮಾಜಿ ಅಧ್ಯಕ್ಷ ಡಾ.ಅಶೋಕ್ ತನ್ವಾರ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿಜ್, "ಅವರೆಷ್ಟೇ ಪ್ರಯತ್ನ ಮಾಡಿದರೂ, ಈ ಗುಂಪುಗಳನ್ನು ಒಂದಾಗಿಸಲು ಸಾಧ್ಯವಿಲ್ಲ" ಎಂದಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಹರಿಯಾಣದಲ್ಲಿ ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ. ಆದರೂ ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡವರಿಗೆ ಟಿಕೆಟ್ ನೀಡುವ ಮೂಲಕ ಪಕ್ಷವು ತಮ್ಮನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿ ತನ್ವಾರ್ ಬುಧವಾರ ಜನಪಥ್ ಹೊರಗೆ ಪ್ರತಿಭಟನೆ ನಡೆಸಿದ್ದರು.

ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ ಅಕ್ಟೋಬರ್ 21 ರಂದು ನಡೆಯಲಿದ್ದು, ಮತ ಎಣಿಕೆ ಅಕ್ಟೋಬರ್ 24 ರಂದು ನಡೆಯಲಿದೆ.
 

Trending News