'ಚಲನಚಿತ್ರಗಳ ಪೋಸ್ಟರ್‌ಗಳನ್ನು ಹಾಕಲು ನೀವು ರಾಜಕೀಯಕ್ಕೆ ಬಂದಿದ್ದೀರಾ?'

ನೀವು'ಚಲನಚಿತ್ರಗಳ ಪೋಸ್ಟರ್‌ಗಳನ್ನು ಹಾಕಲು ರಾಜಕೀಯಕ್ಕೆ ಬಂದಿದ್ದೀರಾ?' ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಬಿಜೆಪಿ ನಾಯಕರಿಗೆ ಪ್ರಶ್ನಿಸಿದ್ದಾರೆ.

Last Updated : Mar 25, 2022, 12:29 AM IST
  • ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ನೀಡಿದ್ದರಿಂದ ಬಿಜೆಪಿ ಅವರನ್ನು ದ್ವೇಷಿಸುತ್ತದೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
'ಚಲನಚಿತ್ರಗಳ ಪೋಸ್ಟರ್‌ಗಳನ್ನು ಹಾಕಲು ನೀವು ರಾಜಕೀಯಕ್ಕೆ ಬಂದಿದ್ದೀರಾ?' title=

ನವದೆಹಲಿ: ನೀವು'ಚಲನಚಿತ್ರಗಳ ಪೋಸ್ಟರ್‌ಗಳನ್ನು ಹಾಕಲು ರಾಜಕೀಯಕ್ಕೆ ಬಂದಿದ್ದೀರಾ?' ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಬಿಜೆಪಿ ನಾಯಕರಿಗೆ ಪ್ರಶ್ನಿಸಿದ್ದಾರೆ.

ದೆಹಲಿ ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಅವರು 'ಪ್ರಧಾನಿಯವರ ಕಚೇರಿಯಿಂದ ನೇರವಾಗಿ ಚುನಾವಣಾ ಆಯೋಗಕ್ಕೆ ಕರೆ ಮಾಡಿ ಪತ್ರ ಕಳುಹಿಸುವ ಮೂಲಕ ಎಂಸಿಡಿ ಚುನಾವಣೆಯನ್ನು ಮುಂದೂಡುತ್ತಿರುವುದು ಜಗತ್ತಿನಲ್ಲಿ ಎಲ್ಲಿಯೂ ನಡೆದಿಲ್ಲ.ಬಿಜೆಪಿಗೆ ಚುನಾವಣೆ ಬೇಕಾಗಿಲ್ಲ. ಎಂಸಿಡಿಯಲ್ಲಿ ಲೂಟಿ ಮಾಡುವ ಎಲ್ಲ ದಾಖಲೆಗಳನ್ನು ಬಿಜೆಪಿ ನಾಯಕರು ಮುರಿದಿದ್ದಾರೆ ಎಂದು ದೂರಿದರು.

ಇದನ್ನೂ ಓದಿ:  ಜಮೀರ್ ಅಹಮದ್ ನೀವು 'ನಮ್ಮ ಆರ್ ಎಸ್ ಎಸ್ 'ಎಂದು ಹೇಳಬೇಕು': ಸ್ಪೀಕರ್ ಕಾಗೇರಿ

ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ನೀಡಿದ್ದರಿಂದ ಬಿಜೆಪಿ ಅವರನ್ನು ದ್ವೇಷಿಸುತ್ತದೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಬಿಜೆಪಿಯವರು ಮಾಡುತ್ತಿರುವ ನಾಟಕವನ್ನು ದೇಶ ಸಹಿಸುವುದಿಲ್ಲ. ಅವರು ವಿಶ್ವದ ಅತಿದೊಡ್ಡ ಪಕ್ಷವೆಂದು ಅವರು ಹೇಳುತ್ತಾರೆ. ನಾವು ಚಿಕ್ಕವರು.ಆದರೂ, ಅವರು ಹೆದರಿದರು.ದೊಡ್ಡ ಪಕ್ಷವು ಚಿಕ್ಕ ಪಕ್ಷಕ್ಕೆ ಹೆದರಿದೆ.ಧೈರ್ಯವಿದ್ದರೆ ಚುನಾವಣೆಗೆ ಸ್ಪರ್ಧಿಸಿ ಎಂದು ಕೇಜ್ರಿವಾಲ್‌ ಸವಾಲು ಹಾಕಿದರು.

ಇದನ್ನೂ ಓದಿ:  'ರಾಷ್ಟ್ರೀಯ ಭದ್ರತೆ ನಿರ್ವಹಣೆಯಲ್ಲಿ ಕೇಂದ್ರದ ಸಹಾಯ ಅಗತ್ಯ'

ದಿ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ರಾಜ್ಯದಲ್ಲಿ ಟ್ಯಾಕ್ಸ್ ಫ್ರೀ ಮಾಡುವಂತೆ ಭಾರತೀಯ ಜನತಾ ಪಕ್ಷದ ಬೇಡಿಕೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

"ಅದನ್ನು ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಲು ಬಿಜೆಪಿಯು ಚಿತ್ರದ ನಿರ್ದೇಶಕ ಹಾಗೂ ನಿರ್ಮಾಪಕರಾದ ವಿವೇಕ್ ಅಗ್ನಿಹೋತ್ರಿ (Vivek Agnihotri ) ಅವರನ್ನು ಕೇಳಬೇಕು ಮತ್ತು ಆಗ ಪ್ರತಿಯೊಬ್ಬರೂ ಅದನ್ನು ಉಚಿತವಾಗಿ ನೋಡುತ್ತಾರೆ.

ಕೆಲವರು ಕಾಶ್ಮೀರಿ ಪಂಡಿತರ ಹೆಸರಿನಲ್ಲಿ ಕೋಟಿಗಟ್ಟಲೆ ಸಂಪಾದಿಸಿದ್ದಾರೆ ಮತ್ತು ನಿಮಗೆ ಕೇವಲ ಪೋಸ್ಟರ್‌ಗಳನ್ನು ಹಾಕುವ ಕೆಲಸವನ್ನು ನೀಡಲಾಗಿದೆ.ಎಂಟು ವರ್ಷಗಳ ಕಾಲ ಮೋದಿ ಅವರು ದೇಶವನ್ನು ಆಳಿದ ನಂತರವೂ ರಾಜಕೀಯ ಲಾಭಕ್ಕಾಗಿ ಚಿತ್ರದ ಸಹಾಯವನ್ನು ತೆಗೆದುಕೊಳ್ಳಬೇಕಾಗಿದೆ.

ಇದನ್ನೂ ಓದಿ:  ಮಾರ್ಚ್ 31 ರೊಳಗೆ ಪೂರ್ಣಗೊಳಿಸಿ ಈ ಕೆಲಸ - ಇಲ್ಲದಿದ್ದರೆ ತಪ್ಪಿದ್ದಲ್ಲ ಸಮಸ್ಯೆ

ಹಿಟ್ಲರ್ ಕೂಡ ತನ್ನ ಬೆಂಬಲಿಗರಿಗೆ ಕೆಲಸ ಕೊಟ್ಟ. ಅವರು (ಮೋದಿ) ನಿಮಗೆ ಏನು ಕೊಟ್ಟರು? ಕೇಜ್ರಿವಾಲ್ ನಿಮಗಾಗಿ ಕೆಲಸ ಮಾಡುತ್ತಾನೆ. ದೆಹಲಿಯಲ್ಲಿ 12 ಲಕ್ಷ ಜನರಿಗೆ ಉದ್ಯೋಗ ನೀಡಿದ್ದೇನೆ. ನಾನು ಶಾಲೆಗಳನ್ನು ಸರಿಪಡಿಸಿದ್ದೇನೆ ಮತ್ತು ನಿಮ್ಮ ಕುಟುಂಬದಲ್ಲಿ ಯಾರಾದರೂ ಅನಾರೋಗ್ಯದಿಂದ ಬಳಲುತ್ತಿದ್ದರೆ, ಕೇಜ್ರಿವಾಲ್ ನಿಮಗೆ ಔಷಧಿಗಳನ್ನು ನೀಡುತ್ತಾರೆ, ಮೋದಿ ಅಲ್ಲ. ಕಣ್ಣು ತೆರೆಯಿರಿ, ಬಿಜೆಪಿ ಬಿಡಿ.

ಇದಕ್ಕಾಗಿಯೇ ನೀವು ರಾಜಕೀಯಕ್ಕೆ ಬಂದಿದ್ದೀರಾ? ಚಲನಚಿತ್ರಗಳ ಪೋಸ್ಟರ್‌ಗಳನ್ನು ಹಾಕಲು? ನಿಮ್ಮ ಕೆಲಸದ ಬಗ್ಗೆ ನಿಮ್ಮ ಮಕ್ಕಳು ಕೇಳಿದಾಗ ನೀವು ಏನು ಹೇಳುತ್ತೀರಿ? ನಾನು ಚಲನಚಿತ್ರ ಪೋಸ್ಟರ್‌ಗಳನ್ನು ಹಾಕುತ್ತೇನೆ ಎಂದು ನೀವು ಅವರಿಗೆ ಹೇಳುತ್ತೀರಾ?" ಎಂದು ಅರವಿಂದ್ ಕೇಜ್ರಿವಾಲ್ ಪ್ರಶ್ನಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News