ಕರುಣಾನಿಧಿ ಅನಾರೋಗ್ಯ: ಇಂದು ಚೆನ್ನೈಗೆ ತೆರಳಲಿರುವ ಮಾಜಿ ಪ್ರಧಾನಿ ದೇವೇಗೌಡ

ತಮಿಳುನಾಡಿನ ಮಾಜಿ ಸಿಎಂ ಹಾಗೂ ಡಿಎಂಕೆ ಪಕ್ಷದ ಮುಖ್ಯಸ್ಥ ಕರುಣಾನಿಧಿ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Last Updated : Aug 3, 2018, 11:20 AM IST
ಕರುಣಾನಿಧಿ ಅನಾರೋಗ್ಯ: ಇಂದು ಚೆನ್ನೈಗೆ ತೆರಳಲಿರುವ ಮಾಜಿ ಪ್ರಧಾನಿ ದೇವೇಗೌಡ title=

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡಿನ ಮಾಜಿ ಸಿಎಂ ಹಾಗೂ ಡಿಎಂಕೆ ಪಕ್ಷದ ಮುಖ್ಯಸ್ಥ ಕರುಣಾನಿಧಿ ಅವರ ಆರೋಗ್ಯ ವಿಚಾರಿಸಲು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ. ದೇವೇಗೌಡ ಇಂದು ಚೆನ್ನೈಗೆ ತೆರಳಿದ್ದಾರೆ.

ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರಿಗೆ, ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿ ಸಾಥ್ ನೀಡಲಿದ್ದು, ಇಂದು ಸಂಜೆ 5 ಗಂಟೆಗೆ ಕರುಣಾನಿಧಿ ದಾಖಲಾಗಿರುವ ಚೆನ್ನೈನ ಕಾವೇರಿ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಲಿದ್ದಾರೆ.

ಮೂತ್ರನಾಳದ ಸೋಂಕಿನಿಂದ ಬಳಲುತ್ತಿರುವ ಕರುಣಾನಿಧಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಇನ್ನೂ ಕೆಲವು ದಿನಗಳು ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರೆಸುವ ಅಗತ್ಯವಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Trending News