ಛತ್ತೀಸಗಢ : ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ,ಛತ್ತೀಸಗಢದ ಬಿಲಾಯ್ ಉಕ್ಕು ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.


COMMERCIAL BREAK
SCROLL TO CONTINUE READING

ಸುಮಾರು 13 ಸಾವಿರ ಎಕರೆಗೂ ಹೆಚ್ಚು ಪ್ರದೇಶದಲ್ಲಿ ವ್ಯಾಪಿಸಿರುವ ಕಾರ್ಖಾನೆಯ ವಿವಿಧ ವಿಭಾಗಗಳಿಗೆ ಈ ಸಂದರ್ಭದಲ್ಲಿ ಸಚಿವರು ಭೇಟಿ ನೀಡಿದ್ದಾರೆ.ಮುಖ್ಯವಾಗಿ ಎರಡು ಬೃಹತ್ ಕುಲುಮೆಗಳಿಗೆ ಸಚಿವರು ಭೇಟಿ ನೀಡಿ ಅದಿರು ಕರಗಿಸುವ,ಕರಗಿದ ಉಕ್ಕನ್ನು ಘನೀಕೃತಗೊಳಿಸುವ ಹಾಗೂ ಬಿಸಿ ಲೋಹವನ್ನು ಉಕ್ಕಾಗಿ ಪರಿವರ್ತನೆ ಮಾಡುವ ಪ್ರಕ್ರಿಯೆಯನ್ನು ವೀಕ್ಷಿಸಿದರು.


ಇದನ್ನೂ ಓದಿ : ತುಪ್ಪ ಬಳಸಿ ನಿರ್ಮಿಸಿದ ವಿಶ್ವದ ಏಕೈಕ ದೇವಾಲಯವನ್ನು ನೀವು ಎಂದಾದರೂ ನೋಡಿದ್ದಿರಾ?


ನಂತರ ರೈಲ್ವೆ ಮಿಲ್ ಗೆ ಭೇಟಿ ನೀಡಿದ ಸಚಿವ ಕುಮಾರಸ್ವಾಮಿ, ರೈಲಿನ ಹಳಿ ತಯಾರಾಗುವ ಪ್ರಕ್ರಿಯೆಯನ್ನು ವೀಕ್ಷಿಸಿದರು.ಅಲ್ಲದೆ, ಈ ಬಗ್ಗೆ ತಾಂತ್ರಿಕ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡರು.


ಇನ್ನು ಭಗವಾನ್ ವಿಶ್ವಕರ್ಮ ಜಯಂತಿ ಅಂಗವಾಗಿ ಕಾರ್ಖಾನೆಯ ಅನೇಕ ವಿಭಾಗಗಳಲ್ಲಿ ಕಾರ್ಮಿಕರು ವಿಶ್ವಕರ್ಮ ಪೂಜೆ ಹಮ್ಮಿಕೊಂಡಿದ್ದರು.ಈ ಸಂದರ್ಭದಲ್ಲಿ ಕಾರ್ಮಿಕರ ಜೊತೆಯಲ್ಲಿ ಪೂಜೆಯಲ್ಲಿ ಭಾಗಿಯಾದ ಸಚಿವರು,ಕಾರ್ಮಿಕರಿಗೆ ವಿಶ್ವಕರ್ಮ ಜಯಂತಿ ಶುಭಾಶಯ ಕೋರಿದರು.


ಇದನ್ನೂ ಓದಿ : ಪ್ರತಿಭಟನಾ ನಿರತ ವೈದ್ಯರ ಜೊತೆ ಸಂಧಾನ ಸಕ್ಸಸ್


ಅಧಿಕಾರಿಗಳ ಜತೆ ಸಭೆ, ಕಾರ್ಖಾನೆ ಬಗ್ಗೆ ಸಂತಸ:
ಉಕ್ಕು ಸ್ಥಾವರ ವೀಕ್ಷಣೆ ನಂತರ ಉನ್ನತ ಅಧಿಕಾರಿಗಳ ಜತೆ ಸಭೆ ನಡೆದ ಸಚಿವ ಕುಮಾರಸ್ವಾಮಿ,ಈ ಕಾರ್ಖಾನೆಯ ಕಾರ್ಯ ಚಟುವಟಿಕೆಗಳ ಬಗ್ಗೆ ನನಗೆ ತೃಪ್ತಿ ಇದೆ. ಆದರೂ ಉಕ್ಕು ಕ್ಷೇತ್ರದಲ್ಲಿ ಎದುರಾಗುತ್ತಿರುವ ಪೈಪೋಟಿಯನ್ನು ನಿರ್ಲಕ್ಷ್ಯ ಮಾಡುವಂತಿಲ್ಲ. ದೇಶದ ಬೊಕ್ಕಸಕ್ಕೆ ಕಾರ್ಖಾನೆ ದೊಡ್ಡ ಕೊಡುಗೆ ನೀಡುತ್ತಿದೆ.ಖಾಸಗಿ ಕ್ಷೇತ್ರವೂ ನಾಗಾಲೋಟದಲ್ಲಿ ಬೆಳೆಯುತ್ತಿದೆ.ಅದಕ್ಕೆ ತಕ್ಕ ಹಾಗೆ ಈ ಕಾರ್ಖಾನೆಯು ಕೆಲಸ ಮಾಡಬೇಕು. ಪ್ರತಿಯೊಬ್ಬರೂ ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.