ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 6 ದಿನ ಭಾರೀ ವರ್ಷಧಾರೆ: ಸಿಡಿಲು ಸಹಿತ ಬಲವಾದ ಗಾಳಿ ಬೀಸುವ ಮುನ್ನೆಚ್ಚರಿಕೆ

Weather Update: ಈ ಮಧ್ಯೆ ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿಯ ಮೇಲೆ ಚಂಡಮಾರುತದ ಪರಿಚಲನೆಯು ರೂಪುಗೊಳ್ಳುತ್ತಿದೆ. ಇದರಿಂದಾಗಿ ಸೆಪ್ಟೆಂಬರ್ 12 ರಿಂದ ಒಡಿಶಾ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮಳೆ ಚಟುವಟಿಕೆಗಳು ಹೆಚ್ಚಾಗಲಿವೆ.

Written by - Bhavishya Shetty | Last Updated : Sep 10, 2023, 11:15 AM IST
    • ಕಳೆದ 2-3 ದಿನಗಳಿಂದ ದೇಶದಲ್ಲಿ ವರುಣನ ಸಿಂಚನವಾಗುತ್ತಿದೆ
    • ಸೆಪ್ಟೆಂಬರ್ 9 ರಿಂದ ಪ್ರಾರಂಭವಾದ ಮಳೆ ಸೆಪ್ಟೆಂಬರ್ 11 ರವರೆಗೆ ಮುಂದುವರಿಯುವ ನಿರೀಕ್ಷೆಯಿದೆ
    • ಮಧ್ಯ ಬಂಗಾಳ ಕೊಲ್ಲಿಯ ಮೇಲೆ ಚಂಡಮಾರುತದ ಪರಿಚಲನೆಯು ರೂಪುಗೊಳ್ಳುತ್ತಿದೆ
ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 6 ದಿನ ಭಾರೀ ವರ್ಷಧಾರೆ: ಸಿಡಿಲು ಸಹಿತ ಬಲವಾದ ಗಾಳಿ ಬೀಸುವ ಮುನ್ನೆಚ್ಚರಿಕೆ title=
Karnataka Rain

IMD Today Weather Update: ಕಳೆದ 2-3 ದಿನಗಳಿಂದ ದೇಶದಲ್ಲಿ ವರುಣನ ಸಿಂಚನವಾಗುತ್ತಿದೆ. ಕೆಲವೆಡೆ ತುಂತುರು ಮಳೆಯಾಗಿದ್ದು, ಇನ್ನೂ ಕೆಲವೆಡೆ ಧಾರಾಕಾರ ಮಳೆಯಾಗಿದೆ. ಹವಾಮಾನ ವಿಜ್ಞಾನ ಇಲಾಖೆ (ಐಎಂಡಿ) ಪ್ರಕಾರ ಇಂದು ಕೂಡ ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಗುಜರಾತ್‌’ನಲ್ಲಿ ಮಳೆಯಾಗಲಿದೆ. ಮಹಾರಾಷ್ಟ್ರ ಮತ್ತು ಈಶಾನ್ಯ ಭಾರತದಲ್ಲಿ ಸೆಪ್ಟೆಂಬರ್ 9 ರಿಂದ ಪ್ರಾರಂಭವಾದ ಮಳೆ ಸೆಪ್ಟೆಂಬರ್ 11 ರವರೆಗೆ ಮುಂದುವರಿಯುವ ನಿರೀಕ್ಷೆಯಿದೆ.

ಇದನ್ನೂ ಓದಿ: G-20 : ರಾಜ್‌ಘಾಟ್‌ನಲ್ಲಿ ಮಾಹಾತ್ಮಾ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ವಿಶ್ವ ನಾಯಕರು

ಈ ಮಧ್ಯೆ ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿಯ ಮೇಲೆ ಚಂಡಮಾರುತದ ಪರಿಚಲನೆಯು ರೂಪುಗೊಳ್ಳುತ್ತಿದೆ. ಇದರಿಂದಾಗಿ ಸೆಪ್ಟೆಂಬರ್ 12 ರಿಂದ ಒಡಿಶಾ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮಳೆ ಚಟುವಟಿಕೆಗಳು ಹೆಚ್ಚಾಗಲಿವೆ. ಇನ್ನು ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

IMD ಪ್ರಕಾರ, ಇಂದು ಅಂದರೆ ಸೆಪ್ಟೆಂಬರ್ 10 ರಂದು, ಕೊಂಕಣ ಗೋವಾ ಮತ್ತು ಮಧ್ಯ ಮಹಾರಾಷ್ಟ್ರದಲ್ಲಿ ಲಘುವಾಗಿ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ. ಸೆಪ್ಟೆಂಬರ್ 12 ರವರೆಗೆ ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶದಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ನಿರೀಕ್ಷೆ ಇದೆ. ಸೆಪ್ಟೆಂಬರ್ 12 ರಂದು ಅಸ್ಸಾಂ ಮತ್ತು ಮೇಘಾಲಯದ ವಿವಿಧ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಅತಿಯಾದ ಸ್ನಾಯು ಸೆಳೆತ ನಿಮ್ಮನ್ನು ಭಾದಿಸುತ್ತಿದೆಯೇ..? ಹಾಗಾದರೆ ಈ ಆಹಾರಗಳನ್ನು ತಪ್ಪದೇ ಸೇವಿಸಿ!!  

ಕರ್ನಾಟಕದ ಹವಾಮಾನ ವರದಿ:

ಇಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇನ್ನೊಂದೆಡೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News