ನವದೆಹಲಿ: ರಾಷ್ಟ್ರೀಯ ರಾಜಧಾನಿ ದೆಹಲಿಯಲ್ಲಿ ವರುಣನ ಅಬ್ಬರ ಮುಂದುವರೆದಿದೆ. ದೆಹಲಿ ಸೇರಿದಂತೆ NCRನ ಹಲವು ಪ್ರದೇಶಗಳಲ್ಲಿ ಮುಂಜಾನೆ ವರುಣನ ಸಿಂಚನ ಆರಂಭವಾಗಿದೆ. ಮುಂದಿನ ಎರಡು-ಮೂರು ದಿನಗಳಲ್ಲಿ ಹರಿಯಾಣ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 


COMMERCIAL BREAK
SCROLL TO CONTINUE READING

ಅಲ್ಲದೆ, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದೂ ಧಾರಾಕಾರ ಮಳೆ ಮುಂದುವರಿಯಲಿದ್ದು, ತಮಿಳುನಾಡು, ಕೇರಳಗಳಲ್ಲೂ ಭಾರೀ ಮಳೆಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.