Mumbai Rain: ಮುಂಬೈನಲ್ಲಿ ಭಾರಿ ಅವಾಂತರಕ್ಕೆ ಕಾರಣವಾದ ಮಳೆ, ವಿಲೆ ಪಾರ್ಲೆಯಲ್ಲಿ ಮೂರಂತಸ್ತಿನ ಕಟ್ಟಡ ಕುಸಿದು ಇಬ್ಬರ ದುರ್ಮರಣ

Mumbai Rain: ಮುಂಬೈನ ಹಲವೆಡೆ ಭಾರೀ ಮಳೆಯಾಗುತ್ತಿದೆ. ಶನಿವಾರ ಚರಂಡಿಯಲ್ಲಿ ಕೊಚ್ಚಿ ಹೋಗಿ ಇಬ್ಬರು ಮೃತಪಟ್ಟಿದ್ದರು. ಮತ್ತೊಂದೆಡೆ, ಭಾನುವಾರ ಎರಡು ಪ್ರದೇಶಗಳಲ್ಲಿ ಕಟ್ಟಡ ಕುಸಿದ ಘಟನೆಗಳು ಬೆಳಕಿಗೆ ಬಂದಿವೆ.  

Written by - Nitin Tabib | Last Updated : Jun 25, 2023, 06:35 PM IST
  • ಈ ಪ್ರದೇಶದಲ್ಲಿ ವಿದ್ಯುತ್ ಮತ್ತು ಗ್ಯಾಸ್ ಸರಬರಾಜು ಮಾಡುವ ಕಂಪನಿಗಳ ಸಿಬ್ಬಂದಿಯನ್ನೂ ಸ್ಥಳಕ್ಕೆ ಕರೆಸಲಾಗಿದೆ.
  • ಈ ಅಪಘಾತದ ಕುರಿತು ಮಹಾರಾಷ್ಟ್ರ ಸಚಿವ ಮಂಗಲ್ ಪ್ರಭಾತ್ ಲೋಧಾ ಅವರು ಸುದ್ದಿ ಸಂಸ್ಥೆ ANI ಗೆ ಘಾಟ್ಕೋಪರ್‌ನಲ್ಲಿ ಕಟ್ಟಡದ ಒಂದು ಭಾಗ ಕುಸಿದಿದೆ ಎಂದು ತಿಳಿಸಿದ್ದಾರೆ.
  • ನಾಲ್ವರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಇನ್ನೂ ಇಬ್ಬರು ಒಳಗೆ ಸಿಲುಕಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ.
Mumbai Rain: ಮುಂಬೈನಲ್ಲಿ ಭಾರಿ ಅವಾಂತರಕ್ಕೆ ಕಾರಣವಾದ ಮಳೆ, ವಿಲೆ ಪಾರ್ಲೆಯಲ್ಲಿ ಮೂರಂತಸ್ತಿನ ಕಟ್ಟಡ ಕುಸಿದು ಇಬ್ಬರ ದುರ್ಮರಣ title=

Mumbai Rain: ಭಾನುವಾರ ಮುಂಬೈ ಪಾಲಿಗೆ ಆಘಾತಕಾರಿ ದಿನ ಸಾಬೀತಾಗಿದೆ. ಮುಂಬೈನ ಘಾಟ್‌ಕೋಪರ್‌ನಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದಿದೆ. ಇದಾದ ಬಳಿಕ ವಿಲೇಪಾರ್ಲೆ ಪ್ರದೇಶದ ನಾನಾವತಿ ಆಸ್ಪತ್ರೆ ಬಳಿ ಮಧ್ಯಾಹ್ನ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದಲ್ಲಿ ಸಿಲುಕಿದ್ದ ಐವರನ್ನು ಹೊರತೆಗೆದು ಕೂಪರ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಪ್ರಿಸ್ಸಿಲ್ಲಾ ಮಿಸೌಯಿಟಾ (65 ವರ್ಷ) ಮತ್ತು ರಾಬಿ ಮಿಸೌಯಿಟಾ (70 ವರ್ಷ) ಎಂಬ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ಬಿಎಂಸಿ ತಿಳಿಸಿದೆ. ಗಾಯಗೊಂಡಿರುವ ಇತರರ ಸ್ಥಿತಿ ಸ್ಥಿರವಾಗಿದೆ. ಮುಂಬೈ ಅಗ್ನಿಶಾಮಕ ದಳ ಮತ್ತು ಮುಂಬೈ ಪೊಲೀಸರು ಸ್ಥಳದಲ್ಲಿದ್ದಾರೆ. ಮುಂಬೈನಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಇದಾದ ನಂತರ ಹಲವು ಪ್ರದೇಶಗಳು ಜಲಾವೃತ್ತಗೊಂಡಿವೆ.

ಘಾಟ್‌ಕೋಪರ್‌ನಲ್ಲಿಯೂ ಮೂರು ಅಂತಸ್ತಿನ ಕಟ್ಟಡ ಕುಸಿತ 
ಭಾನುವಾರ ಬೆಳಗ್ಗೆ ಘಾಟ್‌ಕೋಪರ್ ಪ್ರದೇಶದಲ್ಲಿ ಮೂರು ಅಂತಸ್ತಿನ ವಸತಿ ಕಟ್ಟಡದ ಒಂದು ಭಾಗ ಕುಸಿದಿತ್ತು. ಈ ವೇಳೆ ಮೂರನೇ ಮಹಡಿಯಿಂದ ನಾಲ್ವರನ್ನು ಹೊರ ತೆಗೆಯಲಾಯಿತು. ಕಟ್ಟಡದ ಮೊದಲ ಮಹಡಿಯಲ್ಲಿ ಇನ್ನೂ ಇಬ್ಬರು ಸಿಲುಕಿದ್ದು, ಅವರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ-AAP ಅನ್ನು ಬಿಜೆಪಿಯ ಬಿ ಟೀಮ್ ಎಂದು ಕರೆದ ವರಿಷ್ಠ ಕಾಂಗ್ರೆಸ್ ಮುಖಂಡ

ಮುಂಬೈನಲ್ಲಿ ಶನಿವಾರದಿಂದ ಮಳೆ ಮುಂದುವರಿದಿದೆ
ಮುಂಬೈ ಮತ್ತು ಅದರ ಉಪನಗರಗಳಲ್ಲಿ ಶನಿವಾರದಿಂದ ಭಾರೀ ಮಳೆಯಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಘಾಟ್‌ಕೋಪರ್‌ನ ರಾಜವಾಡಿ ಕಾಲೋನಿಯ ಚಿತ್ತರಂಜನ್ ನಗರದ ಕಟ್ಟಡದ ಒಂದು ಭಾಗವು ಬೆಳಗ್ಗೆ 9.30 ರ ಸುಮಾರಿಗೆ ಕುಸಿದಿದೆ. ಘಟನೆಯ ಮಾಹಿತಿ ಪಡೆದ ನಂತರ ಅಗ್ನಿಶಾಮಕ ಇಲಾಖೆ, ಮಹಾನಗರ ಪಾಲಿಕೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.

ಇದನ್ನೂ ಓದಿ-Opposition Meeting: 'ದೇಶಕ್ಕೆ ಗೌರವ ಸಿಗುತ್ತದೆ... ಪ್ರಧಾನಿ ಮೋದಿಗಲ್ಲ' ವಾಪಸ್ಸಾಗುತ್ತಲೇ ಹಿಂದೂ ಮುಸ್ಲಿಂ ಹೇಳುತ್ತಾರೆ ಎಂದ ಮೇಹಬೂಬಾ ಮುಫ್ತಿ

ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ
ಈ ಪ್ರದೇಶದಲ್ಲಿ ವಿದ್ಯುತ್ ಮತ್ತು ಗ್ಯಾಸ್ ಸರಬರಾಜು ಮಾಡುವ ಕಂಪನಿಗಳ ಸಿಬ್ಬಂದಿಯನ್ನೂ ಸ್ಥಳಕ್ಕೆ ಕರೆಸಲಾಗಿದೆ. ಈ ಅಪಘಾತದ ಕುರಿತು ಮಹಾರಾಷ್ಟ್ರ ಸಚಿವ ಮಂಗಲ್ ಪ್ರಭಾತ್ ಲೋಧಾ ಅವರು ಸುದ್ದಿ ಸಂಸ್ಥೆ ANI ಗೆ ಘಾಟ್ಕೋಪರ್‌ನಲ್ಲಿ ಕಟ್ಟಡದ ಒಂದು ಭಾಗ ಕುಸಿದಿದೆ ಎಂದು ತಿಳಿಸಿದ್ದಾರೆ. ನಾಲ್ವರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಇನ್ನೂ ಇಬ್ಬರು ಒಳಗೆ ಸಿಲುಕಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News