ರಾಮನಾಥಪುರಂ (ತಮಿಳುನಾಡು): ತಮಿಳುನಾಡಿನಾದ್ಯಂತ ಭಾರಿ ಮಳೆಯಾಗುತ್ತಿರುವ ಕಾರಣ ರಾಜ್ಯದ ಆರು ಜಿಲ್ಲೆಗಳ ಎಲ್ಲಾ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.


COMMERCIAL BREAK
SCROLL TO CONTINUE READING

ರಾಜ್ಯದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತಿರುನೆಲ್ವೇಲಿ, ಟುಟಿಕೊರಿನ್, ಥೇನಿ, ವಿರುಧುನಗರ, ವೆಲ್ಲೂರು ಮತ್ತು ರಾಮನಾಥಪುರಂನಲ್ಲಿನ ಎಲ್ಲಾ ಶಾಲೆಗಳು ಮತ್ತು ಕಾಲೇಜುಗಳಿಗೆ ರಾಜ್ಯ ಸರ್ಕಾರ ಇಂದು ರಜೆ ನೀಡಲಾಗಿದೆ. ಇದಲ್ಲದೆ, ಭಾರೀ ಮಳೆಯ ಹಿನ್ನೆಲೆಯಲ್ಲಿ ಮಧುರೈ ಜಿಲ್ಲೆಯ ಎಲ್ಲಾ ಶಾಲೆಗಳು ಸಹ ಇಂದು ಮುಚ್ಚಲ್ಪಡುತ್ತವೆ ಎನ್ನಲಾಗಿದೆ.


ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಮನಾಥಪುರಂ ಜಿಲ್ಲೆಯಲ್ಲಿ ಎಲ್ಲಾ ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಡುತ್ತವೆ ಎಂದು ರಾಮನಾಥಪುರಂ ಜಿಲ್ಲಾಧಿಕಾರಿ ವೀರರಗವರವ್ ತಿಳಿಸಿದ್ದಾರೆ.


ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ತಮಿಳುನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.


ತಮಿಳುನಾಡಿನಾದ್ಯಂತ ಹಲವು ಸ್ಥಳಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಸಂಸ್ಥೆ ಮುನ್ಸೂಚನೆ ನೀಡಿದೆ.