ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 7 ದಿನ ಬಿಡದೆ ಸುರಿಯಲಿದೆ ಭಾರೀ ಮಳೆ: ಗುಡುಗು ಸಹಿತ ಗಾಳಿ ಬೀಸುವ ಮುನ್ಸೂಚನೆ

Rain Update 20-9-2023 in India: ಹವಾಮಾನ ಇಲಾಖೆ (IMD) ಪ್ರಕಾರ, ಮಂಗಳವಾರ ದೆಹಲಿ-NCR ಹವಾಮಾನ ಶುಷ್ಕವಾಗಿದ್ದು, ಇಂದೂ ಕೂಡ ಅದೇ ಹವಾಮಾನ ಮುಂದುವರೆಯುವ ನಿರೀಕ್ಷೆಯಿದೆ.

Written by - Bhavishya Shetty | Last Updated : Sep 20, 2023, 12:09 PM IST
    • ಸೆಪ್ಟೆಂಬರ್ 21 ಮತ್ತು 22 ರಂದು ದೆಹಲಿ-ಎನ್‌ಸಿಆರ್‌’ನಲ್ಲಿ ಮಳೆಯಾಗುವ ನಿರೀಕ್ಷೆಯಿದೆ
    • ಈ ಅವಧಿಯಲ್ಲಿ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌’ನಷ್ಟು ಕಡಿಮೆಯಾಗಬಹುದು
    • ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27ರವರೆಗೂ ಮಳೆಯಾಗಲಿದೆ
ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 7 ದಿನ ಬಿಡದೆ ಸುರಿಯಲಿದೆ ಭಾರೀ ಮಳೆ: ಗುಡುಗು ಸಹಿತ ಗಾಳಿ ಬೀಸುವ ಮುನ್ಸೂಚನೆ title=
Weather Update

Delhi NCR Weather Forecast: ಕಳೆದ 2 ದಿನಗಳಿಂದ ಮೋಡ ಕವಿದ ವಾತಾವರಣ ಮತ್ತು ಅನೇಕ ಸ್ಥಳಗಳಲ್ಲಿ ಮಧ್ಯಂತರ ಮಳೆಯಿಂದಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹವಾಮಾನವು ಆಹ್ಲಾದಕರವಾಗಿದೆ. ಮುಂದಿನ ಕೆಲವು ದಿನಗಳ ಕಾಲ ಇದೇ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಇನ್ನು ಇಲಾಖೆಯ ಪ್ರಕಾರ, ದೆಹಲಿ-ಎನ್‌ಸಿಆರ್‌ನಲ್ಲಿ ಸೆಪ್ಟೆಂಬರ್ 21 ರಂದು ಅಂದರೆ ಗುರುವಾರ ಮತ್ತೆ ಲಘು ಮಳೆಯಾಗುವ ಸಾಧ್ಯತೆ ಇದೆ.

ಹವಾಮಾನ ಇಲಾಖೆ (IMD) ಪ್ರಕಾರ, ಮಂಗಳವಾರ ದೆಹಲಿ-NCR ಹವಾಮಾನ ಶುಷ್ಕವಾಗಿದ್ದು, ಇಂದೂ ಕೂಡ ಅದೇ ಹವಾಮಾನ ಮುಂದುವರೆಯುವ ನಿರೀಕ್ಷೆಯಿದೆ.

ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆ; ಬಿಜೆಪಿ ಎಂದಿಗೂ ನಮಗೆ ಕ್ರೆಡಿಟ್ ನೀಡಿಲ್ಲ: ಮಲ್ಲಿಕಾರ್ಜುನ ಖರ್ಗೆ

ಹವಾಮಾನ ತಜ್ಞರ ಪ್ರಕಾರ, ಸೆಪ್ಟೆಂಬರ್ 21 ಮತ್ತು 22 ರಂದು ದೆಹಲಿ-ಎನ್‌ಸಿಆರ್‌’ನಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌’ನಷ್ಟು ಕಡಿಮೆಯಾಗಬಹುದು. ಆದರೆ, ಮರುದಿನದಿಂದ ಅಂದರೆ ಸೆಪ್ಟೆಂಬರ್ 23ರಿಂದ ಮತ್ತೆ ವಾತಾವರಣ ಶುಷ್ಕವಾಗಲಿದ್ದು, ಜನರು ತೀವ್ರ ಬಿಸಿಲಿನಿಂದ ಬಳಲುವ ಸಾಧ್ಯತೆ ಇದೆ.

ಈ ರಾಜ್ಯಗಳಲ್ಲಿ ಭಾರೀ ಮಳೆ:

ಮಧ್ಯಪ್ರದೇಶದಲ್ಲಿ ತಾಪಮಾನದಲ್ಲಿ ನಿರಂತರ ಏರಿಳಿತಗಳು ಕಂಡುಬರುತ್ತಿವೆ. ಸೆಪ್ಟೆಂಬರ್ 22-23 ರ ಸುಮಾರಿಗೆ ಭೋಪಾಲ್, ಗ್ವಾಲಿಯರ್, ಚಂಬಲ್, ರೇವಾ, ಇಂದೋರ್ ಮತ್ತು ಉಜ್ಜಯಿನಿಯಲ್ಲಿ ಭಾರೀ ಮಳೆಯಾಗುವ ಸೂಚನೆ ಇದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ಜೀವನ ನಿರ್ವಹಣೆಗಾಗಿ ಇಡ್ಲಿ ಮಾರಲು ಮುಂದಾದ ಚಂದ್ರಯಾನ-3 ಲಾಂಚ್‌ಪ್ಯಾಡ್ ನಿರ್ಮಾಣಕ್ಕೆ ನೇರವಾಗಿದ್ದ ತಂತ್ರಜ್ಞ

ಕರ್ನಾಟಕದಲ್ಲಿ ಹೀಗಿರಲಿದೆ ಹವಾಮಾನ:

ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News