ಮುಂದಿನ 3 ದಿನಗಳವರೆಗೆ ವಾಯುವ್ಯ ಭಾರತದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

 Heavy rain : ಭಾರತೀಯ ಹವಾಮಾನ ಇಲಾಖೆ  ಮುಂದಿನ 3 ದಿನಗಳವರೆಗೆ (ಫೆಬ್ರವರಿ 25 ರವರೆಗೆ) ವಾಯುವ್ಯ ಭಾರತದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Written by - Zee Kannada News Desk | Last Updated : Feb 22, 2024, 10:32 AM IST
  • ಭಾರತೀಯ ಹವಾಮಾನ ಇಲಾಖೆ ಮುಂದಿನ 3 ದಿನಗಳವರೆಗೆ (ಫೆಬ್ರವರಿ 25 ರವರೆಗೆ) ವಾಯುವ್ಯ ಭಾರತದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ
  • ಇನ್ನು ಕರ್ನಾಟಕ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ತಾಪಮಾನ ತುಸು ಕಡಿಮೆಯಿರಲಿದ ಎಂದು ತಿಳಿಸಿದೆ
  • ಫೆಬ್ರವರಿ 22 ರಿಂದ ಫೆಬ್ರವರಿ 25 ರವರೆಗೆ 15 ಪ್ರದೇಶಗಳಲ್ಲಿ ಮಳೆ ಮುಂದುವರೆಯುತ್ತದೆ.
ಮುಂದಿನ 3 ದಿನಗಳವರೆಗೆ ವಾಯುವ್ಯ ಭಾರತದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ title=

Heavy rain likely in northwest India : ದೇಶದ ಬಹುತೇಕ ಭಾಗಗಳಲ್ಲಿ ಭಾರೀ ಬಿರಿಬಿಸಿಲಿನ ವಾತಾವರಣ ನಿರ್ಮಾಣವಾಗುತ್ತಿದೆ.ಅಲ್ಲದೆ ಇದರ ನಡುವೆಯೇ ಹಲವೆಡೆ ಮುಂದಿನ ಮೂರು ದಿನಗಳವರೆಗೆ ಅಂದರೆ 25ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ. ಈ ಕುರಿತು ಮಾಹಿತಿ ಇಲ್ಲಿದೆ 

ಫೆಬ್ರವರಿ 22 ರಿಂದ ಫೆಬ್ರವರಿ 25 ರವರೆಗೆ 15 ಪ್ರದೇಶಗಳಲ್ಲಿ ಮಳೆ ಮುಂದುವರೆಯುತ್ತದೆ ಮತ್ತು 5 ರಾಜ್ಯಗಳ ಹಲವು ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯ ಮುನ್ಸೂಚನೆ ನೀಡಿದೆ.  ಪ್ರಸ್ತುತ, ಮಳೆ ಮತ್ತು ಹಿಮಪಾತದ ಅವಧಿಯು ಮುಂದುವರೆಯಲಿದೆ.ನವದೆಹಲಿಯಲ್ಲಿ ಹವಾಮಾನದಲ್ಲಿ ಮಹತ್ವದ ಬದಲಾವಣೆ ಆಗಲಿದ್ದು, ಮೋಡ ಕವಿದ ವಾತಾವರಣ ನಿರ್ಮಾಣ ಆಗಲಿದೆ ಎಂದು ತಿಳಿಸಿದ್ದು, ಈ ವೇಳೆಯೇ ಸಾಧಾರಣ ಮಳೆಯಾಗುವ ಸಾಧ್ಯೆತೆಯಿದೆ ಅಂತಲೂ ತಿಳಿಸಿದೆ.

ಇದನ್ನು ಓದಿ : UAE ಕ್ರಿಕೆಟ್ ತಂಡಕ್ಕೆ ಕೋಚ್ ಆಗಿ ಟೀಂ ಇಂಡಿಯಾದ ದಿಗ್ಗಜ ನೇಮಕ

5 ರಾಜ್ಯಗಳ ಹಲವು ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯ ಮುನ್ಸೂಚನೆ ನೀಡಿದೆ. ಪ್ರಸ್ತುತ, ಮಳೆ ಮತ್ತು ಹಿಮಪಾತದ ಅವಧಿಯು ಮುಂದುವರೆಯಲಿದೆ. ಇನ್ನು ನವದೆಹಲಿಯಲ್ಲಿ ಹವಾಮಾನದಲ್ಲಿ ಮಹತ್ವದ ಬದಲಾವಣೆ ಆಗಲಿದ್ದು, ಮೋಡ ಕವಿದ ವಾತಾವರಣ ನಿರ್ಮಾಣ ಆಗಲಿದೆ ಎಂದು ತಿಳಿಸಿದ್ದು, ಈ ವೇಳೆಯೇ ಸಾಧಾರಣ ಮಳೆಯಾಗುವ ಸಾಧ್ಯೆತೆಯಿದೆ ಅಂತಲೂ ತಿಳಿಸಿದೆ.

ಫೆಬ್ರವರಿ 25ರ ವರೆಗೆ ಮುಂದುವರೆಯುತ್ತದೆ ಮತ್ತು ಜಾರ್ಖಂಡ್‌ನ ಹಲವು ಪ್ರದೇಶಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ. ಬಿಹಾರದ ಹಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದ್ದು,  ಪಶ್ಚಿಮ ಬಂಗಾಳದಲ್ಲೂ ಮೋಡ ಕವಿದ ವಾತಾವರಣ ಇರಲಿದೆ ಎಂದು ತಿಳಿಸಿದೆ. 

ಇದನ್ನು ಓದಿ :“ಟ್ರೋಫಿ ಗೆದ್ದರೆ 1 ಕೋಟಿ ನಗದು ಜೊತೆ ಬಿಎಂಡಬ್ಲ್ಯು ಕಾರು”- ಕ್ರಿಕೆಟಿಗರಿಗೆ ವಿಶೇಷ ಘೋಷಣೆ

ಇನ್ನು ದಕ್ಷಿಣದ ರಾಜ್ಯಗಳಲ್ಲಿ ಹವಾಮಾನವು ಸಾಮಾನ್ಯವಾಗಿರಲಿದೆ. ಆದರೆ ಕೇರಳದ ಕೆಲವೆಡೆ ಮಾತ್ರ ಸಾಧಾರಣ ಮಳೆ ಸುರಿಯುವ ನಿರೀಕ್ಷೆಯಿದೆ. ಇನ್ನು ಕರ್ನಾಟಕ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ತಾಪಮಾನ ತುಸು ಕಡಿಮೆಯಿರಲಿದ ಎಂದು ತಿಳಿಸಿದೆ. 

ಉತ್ತರ ಪಂಜಾಬ್, ಉತ್ತರ ಹರಿಯಾಣ, ಪಶ್ಚಿಮ ಉತ್ತರ ಪ್ರದೇಶ ಮತ್ತು ಬಿಹಾರದ ಭಾಗಗಳು, ಗಂಗಾ ಪಶ್ಚಿಮ ಬಂಗಾಳ, ಪೂರ್ವ ಉತ್ತರ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಸಿಕ್ಕಿಂ, ಜಾರ್ಖಂಡ್‌ನ ಕೆಲವು ಭಾಗಗಳು, ಈಶಾನ್ಯ ರಾಜಸ್ಥಾನ ಮತ್ತು ಉತ್ತರ ಮಧ್ಯಪ್ರದೇಶದಲ್ಲೂ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.

ಸ್ಕೈಮೆಟ್ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಪಶ್ಚಿಮ ಹಿಮಾಲಯ ಪ್ರದೇಶ ಮತ್ತು ಅರುಣಾಚಲ ಪ್ರದೇಶದ ಕೆಲವು ಸ್ಥಳಗಳಲ್ಲಿ ಭಾರೀ ಹಿಮಪಾತದೊಂದಿಗೆ ಸಾಧಾರಣ ಮಳೆಯಾಗಲಿದೆ. ಆದರೆ ಅರುಣಾಚಲ ಪ್ರದೇಶದಲ್ಲಿ ಫೆಬ್ರವರಿ 23ರವರೆಗೆ ಇದು ಮುಂದುವರೆಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

Trending News