Rain Alert: ರಾಜ್ಯದ 10 ಜಿಲ್ಲೆಗಳಲ್ಲಿ ಇಂದಿನಿಂದ ಸುರಿಯಲಿದೆ ಭಾರೀ ಮಳೆ: ಜಲಪ್ರಳಯದ ಸೂಚನೆ, ಗುಡುಗು-ಸಿಡಿಲಿನ ಎಚ್ಚರಿಕೆ

Rain Alert in Karnataka: ಕರ್ನಾಟಕಕ್ಕೆ ಸಂಬಂಧಿಸಿದಂತೆ, ರಾಜ್ಯದ ಒಳನಾಡಿನ ಪ್ರತ್ಯೇಕ ಭಾಗಗಳಲ್ಲಿ ಸಿಡಿಲು, ಗುಡುಗು ಸಹಿತ ಭಾರೀ ಮಳೆಯಾಗುವ ಭೀತಿ ಇದೆ. ರಾಜ್ಯದ ರಾಜಧಾನಿ ಚೆನ್ನೈ ಮತ್ತು ಬೆಂಗಳೂರಿನಲ್ಲಿ ಸ್ವಲ್ಪ ಮಳೆಯಾಗಲಿದೆ.

Written by - Bhavishya Shetty | Last Updated : Aug 29, 2023, 08:39 AM IST
    • ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳಲ್ಲಿ ಹಗಲಿನ ತಾಪಮಾನವು ಸಾಮಾನ್ಯಕ್ಕಿಂತ 3 C ಹೆಚ್ಚಾಗಿದೆ
    • ಕರ್ನಾಟಕದ ಒಳಭಾಗದ ಮೇಲೆ ವಾರಾಂತ್ಯದವರೆಗೆ ಎಲ್ಲೋ ಅಲರ್ಟ್ ಘೋಷಣೆ
    • ಕೋಲಾರ ಸೇರಿ 10 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
Rain Alert: ರಾಜ್ಯದ 10 ಜಿಲ್ಲೆಗಳಲ್ಲಿ ಇಂದಿನಿಂದ ಸುರಿಯಲಿದೆ ಭಾರೀ ಮಳೆ: ಜಲಪ್ರಳಯದ ಸೂಚನೆ, ಗುಡುಗು-ಸಿಡಿಲಿನ ಎಚ್ಚರಿಕೆ  title=
Karnataka Rain

Rain Alert in Karnataka 28-08-2023: ಈ ಋತುವಿನಲ್ಲಿ ತಮಿಳುನಾಡು ಮತ್ತು ಕರ್ನಾಟಕ ಎರಡೂ ರಾಜ್ಯಗಳು ಮಳೆಯ ಕೊರತೆಯನ್ನು ಎದುರಿಸುತ್ತಿದೆ. ಆದರೆ ಇಂದಿನಿಂದ ಮಳೆ ಬೀಳುವ ಸಾಧ್ಯತೆ ಇದೆ ಎಂದು ವರದಿಗಳು ಹೇಳುತ್ತಿವೆ.

ಮಾನ್ಸೂನ್ ದೇಶದ ಕೆಲ ಭಾಗಗಳಲ್ಲಿ ಕುಂಠಿತಗೊಂಡಿದೆ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳಲ್ಲಿ ಹಗಲಿನ ತಾಪಮಾನವು ಸಾಮಾನ್ಯಕ್ಕಿಂತ 3 ° C ಹೆಚ್ಚಾಗಿದೆ. ಆದರೆ ಇಂದು ಮಳೆ ಬೀಳುವ ಬಲವಾದ ಸಾಧ್ಯತೆ ಇದೆ.

ಇದನ್ನೂ ಓದಿ: ಸ್ಟಾರ್ ವೇಗದ ಬೌಲರ್ ಸೇರಿ 6 ಮಂದಿ ಕ್ರಿಕೆಟಿಗರು Asia Cup 2023ರಿಂದ ಔಟ್!

ಉತ್ತರ ತಮಿಳುನಾಡು ಮತ್ತು ಉತ್ತರ ಕೇರಳ ಕರಾವಳಿಯಲ್ಲಿ ಅಸ್ತಿತ್ವದಲ್ಲಿರುವ ಚಂಡಮಾರುತದ ಪರಿಚಲನೆಯೊಂದಿಗೆ ಈ ವ್ಯವಸ್ಥೆಯು ಕರ್ನಾಟಕ ಮತ್ತು ತಮಿಳುನಾಡಿಗೆ ಮಳೆ ಬರುವುದುಮ ಕೊಂಚ ತಡವಾಗುವ ಸಾಧ್ಯತೆಯಿದೆ.

ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಆಗಸ್ಟ್ 29, ಮಂಗಳವಾರದಂದು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌’ನಲ್ಲಿ ಪ್ರತ್ಯೇಕವಾದ ಭಾರೀ ಮಳೆಯೊಂದಿಗೆ (64.5 mm-115.5 mm) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕಕ್ಕೆ ಸಂಬಂಧಿಸಿದಂತೆ, ರಾಜ್ಯದ ಒಳನಾಡಿನ ಪ್ರತ್ಯೇಕ ಭಾಗಗಳಲ್ಲಿ ಸಿಡಿಲು, ಗುಡುಗು ಸಹಿತ ಭಾರೀ ಮಳೆಯಾಗುವ ಭೀತಿ ಇದೆ. ರಾಜ್ಯದ ರಾಜಧಾನಿ ಚೆನ್ನೈ ಮತ್ತು ಬೆಂಗಳೂರಿನಲ್ಲಿ ಸ್ವಲ್ಪ ಮಳೆಯಾಗಲಿದೆ.

ತಮಿಳುನಾಡು ಮತ್ತು ಕರ್ನಾಟಕದ ಒಳಭಾಗದ ಮೇಲೆ ವಾರಾಂತ್ಯದವರೆಗೆ ಎಲ್ಲೋ ಅಲರ್ಟ್ ಅನ್ನು ಐಎಂಡಿ ಹೊರಡಿಸಿದೆ,

ತಮಿಳುನಾಡಿನ ತಂಜಾವೂರು, ತಿರುವರೂರು, ನಾಗಪಟ್ಟಣಂ, ಮೈಲಾಡುತುರೈ, ಪುದುಕೊಟ್ಟೈ, ಅರಿಯಲೂರ್, ಪೆರಂಬಲೂರು, ಪುದುಕ್ಕೊಟ್ಟೈ, ಶಿವಗಂಗೈ, ತಿರುಚಿರಾಪಳ್ಳಿ, ದಿಂಡಿಗಲ್, ಥೇಣಿ ಮತ್ತು ಮಧುರೈ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವುದರಿಂದ ಹಳದಿ ಅಲರ್ಟ್ ನೀಡಲಾಗಿದೆ. ಕರ್ನಾಟಕದಲ್ಲಿ ಕೊಡಗು, ಮೈಸೂರು, ಚಿಕ್ಕಮಗಳೂರು, ಹಾಸನ, ತುಮಕೂರು, ರಾಮನಗರ, ಬೆಳಗಾವಿ, ಬಾಗಲಕೋಟೆ, ಬೀದರ್ ಮತ್ತು ಕೋಲಾರದಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ:ಶನಿಯ ಬಲಶಾಲಿ ಯೋಗದಿಂದ ಬದಲಾಗಲಿದೆ ಈ ರಾಶಿಯವರ ಭವಿಷ್ಯ! ಪ್ರತಿದಿನವೂ ದುಡ್ಡಿನ ಮಳೆ

ಆಗಸ್ಟ್ ತಿಂಗಳ ಮಳೆಯ ಅಂಕಿಅಂಶಗಳಿಗೆ ಸಂಬಂಧಿಸಿದಂತೆ, ದಕ್ಷಿಣದ ಎರಡೂ ರಾಜ್ಯಗಳು ಕಳಪೆಯಾಗಿವೆ. ಆಗಸ್ಟ್ 1 ಮತ್ತು 28 ರ ನಡುವೆ, ಕರ್ನಾಟಕವು ಕೇವಲ 52.1 ಮಿಮೀ ಮಳೆಯನ್ನು ದಾಖಲಿಸಿದ್ದು, 74% ನಷ್ಟು ಭಾರಿ ಕೊರತೆಯನ್ನು ದಾಖಲಿಸಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News