ನವದೆಹಲಿ: ರಸ್ತೆ ಅಪಘಾತದಲ್ಲಿ ಗಾಯಗೊಂಡವರ ಜೀವ ಉಳಿಸಲು ಪ್ರಧಾನಿ  ಮೋದಿ ಸರ್ಕಾರ ದೊಡ್ಡ ಉಪಕ್ರಮ(Good Samaritan scheme)ವನ್ನು ಕೈಗೊಂಡಿದೆ. ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು 1 ಗಂಟೆಯೊಳಗೆ ಆಸ್ಪತ್ರೆಗೆ ಕರೆದೊಯ್ಯುವ ವ್ಯಕ್ತಿಗೆ 5 ಸಾವಿರ ರೂ. ನಗದು ನೀಡುವುದಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹೇಳಿದೆ.  


COMMERCIAL BREAK
SCROLL TO CONTINUE READING

ಇದಕ್ಕಾಗಿ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರಧಾನ ಕಾರ್ಯದರ್ಶಿಗಳು ಮತ್ತು ಸಾರಿಗೆ ಕಾರ್ಯದರ್ಶಿಗಳಿಗೆ ಪತ್ರ ಬರೆದಿದೆ. ಈ ಪತ್ರದಲ್ಲಿ ಈ ಯೋಜನೆ ಅಕ್ಟೋಬರ್ 15, 2021 ರಿಂದ ಮಾರ್ಚ್ 31, 2026 ರವರೆಗೆ ಜಾರಿಯಲ್ಲಿರುತ್ತದೆ ಎಂದು ಸಚಿವಾಲಯ ಹೇಳಿದೆ.


ಇದನ್ನೂ ಓದಿ: Azadi Ka Amrit Mahotsav: 75 ಸಾವಿರ ಫಲಾನುಭವಿಗಳಿಗೆ ಮನೆ ಉಡುಗೊರೆ ನೀಡಿದ PM Narendra Modi


ಸಹಾಯಕರಿಗೆ ಬಹುಮಾನ ನೀಡುವ ಯೋಜನೆ


Indian Railways: ರೈಲಿನಲ್ಲಿ ಬರ್ತ್ ಖಾಲಿಯಾದರೆ ತಕ್ಷಣ ಬರುತ್ತೆ ಅಲರ್ಟ್, ಜೊತೆಗೆ ಸಿಗುತ್ತೆ ಕನ್ಫರ್ಮ್ ಟಿಕೆಟ್, ಹೇಗೆ ಗೊತ್ತಾ?


2025 ರ ವೇಳೆಗೆ ರಸ್ತೆ ಅಪಘಾತಗಳಿಂದ ಉಂಟಾಗುವ ಸಾವುಗಳನ್ನು ಶೇ.50ರಷ್ಟು ಕಡಿಮೆ ಮಾಡುವ ಗುರಿಯನ್ನು ಹೊಂದಲಾಗಿದೆ. ರಸ್ತೆ ಅಪಘಾತಗಳ ಸಾವಿನಿಂದ ಅಪಾಯಕಾರಿ ಸನ್ನಿವೇಶ ಸೃಷ್ಟಿಯಾಗುತ್ತಿದೆ. ರಸ್ತೆ ಅಪಘಾತಗಳ ವಿಷಯದಲ್ಲಿ ಭಾರತವು ಮೊದಲ ಸ್ಥಾನದಲ್ಲಿದ್ದು, ಅಮೆರಿಕ ಮತ್ತು ಚೀನಾಕ್ಕಿಂತಲೂ ಮುಂದಿದೆ ಎಂದು ಅವರು ಹೇಳಿದ್ದಾರೆ.  


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.