ನವದೆಹಲಿ: ಕೇಂದ್ರ ಸರ್ಕಾರದ ವಾರ್ಷಿಕ ಹಣಕಾಸು ಯೋಜನೆಯ ಮಾರ್ಗಸೂಚಿಯನ್ನೇ ಪೂರ್ಣ ಪ್ರಮಾಣದ ಬಜೆಟ್ ಎಂದು ಕರೆಯಲಾಗುತ್ತದೆ​​. ಯಾವ ಮೂಲದಿಂದ ಆದಾಯ ಬರುತ್ತದೆ? ಅದನ್ನು ಯಾವ ಕ್ಷೇತ್ರಕ್ಕೆ ವಿನಿಯೋಗ ಮಾಡಬೇಕು? ಎಂಬುದರ ಬಗ್ಗೆ ವಿವರಣೆ ನೀಡಲಾಗುತ್ತದೆ. ಅಲ್ಲದೇ ಹೊಸ ತೆರಿಗೆ ಪ್ರಸ್ತಾಪ, ನೂತನ ಯೋಜನೆಗಳ ಘೋಷಿಸಲಾಗುತ್ತದೆ. ಅವಧಿ ಪೂರೈಸುವ ಮುನ್ನ ಯಾವುದೇ ಸರ್ಕಾರವಾಗಿರಲಿ ಮುಂದಿನ ನಾಲ್ಕು ತಿಂಗಳ ಖರ್ಚು-ವೆಚ್ಚಗಳನ್ನು ನಿಭಾಯಿಸಲು ಸಂಸತ್ತಿನ ಅನುಮೋದನೆ ಪಡೆಯಬೇಕಾಗುತ್ತದೆ. ಅದರಲ್ಲಿ ಯಾವುದೇ ಹೊಸ ತೆರಿಗೆ ಮತ್ತು ಹೊಸ ಘೋಷಣೆಗಳನ್ನು ಪ್ರಕಟಿಸಲು ಅವಕಾಶ ಇಲ್ಲ. ವೇತನ ಪಾವತಿ ಸೇರಿದಂತೆ ಯಾವುದೇ ಯೋಜನೆಗಳಿಗೆ ನೀಡಲಾಗುವ ವೆಚ್ಚದ ಪ್ರಮಾಣ ಮುಂದುವರಿಸಲು ಸಂಸತ್​​ ಅನುಮತಿ ಅಗತ್ಯವಾಗಿರುತ್ತದೆ. ಇದುವೇ ಕೇಂದ್ರದ ಮಧ್ಯಂತರ ಬಜೆಟ್​​ ಆಗಿರುತ್ತದೆ.


COMMERCIAL BREAK
SCROLL TO CONTINUE READING

ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಹಿನ್ನಡೆ ಅನುಭವಿಸಿರುವ ಬಿಜೆಪಿ, ಈಗ ಈ ಬಜೆಟ್ ನಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳ ಜನರನ್ನು ಕೇಂದ್ರಿಕೃತವಾಗಿಟ್ಟುಕೊಂಡು ತೆರಿಗೆ ಕಡಿತ ಹಾಗೂ ಕೃಷಿ ಪರಿಹಾರದಂತಹ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಮಧ್ಯಂತರ ಬಜೆಟ್ ನಲ್ಲಿ ಹೆಚ್ಚಿನ ಆಧ್ಯತೆ ನೀಡಬಹುದಾದ ಕೆಲವು ಪ್ರಮುಖ ವಲಯಗಳನ್ನು ಈ ಕೆಳಗೆ ಪಟ್ಟಿ ಮಾಡಲಾಗಿದೆ.


-ಕೃಷಿ ಪರಿಹಾರ ಪ್ಯಾಕೇಜ್ ಕನಿಷ್ಠ 1 ಟ್ರಿಲಿಯನ್ ರೂಪಾಯಿ ($ 14.04 ಬಿಲಿಯನ್)


-ಹಣಕಾಸಿನ ವರ್ಷದಲ್ಲಿ ಆಹಾರ ಸಬ್ಸಿಡಿಗಳಿಗೆ 1.8 ಟ್ರಿಲಿಯನ್ ರೂ ಮೀಸಲು


-ಆಹಾರ ಬೆಳೆಗಳಿಗೆ ವಿಮೆ ಪಾಲಿಸಿ


-ಹಣಕಾಸು ವರ್ಷ 2019-20 ರಲ್ಲಿ ರಾಜ್ಯದ ಆಸ್ತಿ ಮಾರಾಟದ ಗುರಿ $ 11 ಬಿಲಿಯನ್ ತಲುಪುವುದು.


-ಚಿನ್ನದ ಮೇಲಿನ ತೆರಿಗೆ ಕಡಿತಗೊಳಿಸುವುದು
-ಆರೋಗ್ಯಕ್ಕಾಗಿ ಶೇ 5 ರಷ್ಟು ಬಜೆಟ್ ಹಂಚಿಕೆಯನ್ನು ಏರಿಕೆ ಮಾಡುವುದು 


-ಕಾರ್ಪೋರೆಟ್ ತೆರಿಗೆ ದರವು ಶೇ 30 ರಿಂದ ಶೇ 25ಕ್ಕೆ ಕಡಿತಗೊಳಿಸಬಹುದು


-ಮಧ್ಯಮ ವರ್ಗ ಮತ್ತು ನಿರೀಕ್ಷಿತ ಸಣ್ಣ ಉದ್ಯಮಗಳಿಗೆ ಹೆಚ್ಚಿನ ತೆರಿಗೆ ವಿನಾಯಿತಿ


-50 ದಶಲಕ್ಷಕ್ಕಿಂತ ಕಡಿಮೆ ವಾರ್ಷಿಕ ಮಾರಾಟವನ್ನು ಹೊಂದಿರುವ ವ್ಯವಹಾರಗಳಿಗೆ ಸಾಲಗಳ ಮೇಲೆ ಶೇ. 2 ರಷ್ಟು ರಿಯಾಯಿತಿ


-ಸಾರ್ವಜನಿಕ ವಲಯದ ಸಾಮಾನ್ಯ ವಿಮಾದಾರರಿಗೆ 40 ಬಿಲಿಯನ್ ರೂಪಾಯಿ ಬಂಡವಾಳ ಹೂಡಿಕೆ


-ವಿದ್ಯುತ್ ವಾಹನಗಳು ಮತ್ತು ಬ್ಯಾಟರಿಗಳ ಮೇಲೆ ಸರಕು ಮತ್ತು ಸೇವೆಗಳ ತೆರಿಗೆ (ಜಿಎಸ್ಟಿ) ಕಡಿತಗೊಳಿಸುವುದು


-ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮ ಡಿಜಿಟಲ್ ಮೂಲಸೌಕರ್ಯ, ನವೋಧ್ಯಮಗಳನ್ನು ಹೆಚ್ಚಿಸಲು ಏಂಜಲ್ ತೆರಿಗೆ ನಿರ್ಮೂಲನೆ