ನವದೆಹಲಿ: ಹಿಂದೂ ಸಮಾಜ ಪಕ್ಷದ ಮುಖಂಡ ಕಮಲೇಶ್ ತಿವಾರಿ ಅವರು ಶುಕ್ರವಾರದಂದು ಲಖನೌದಲ್ಲಿನ ತಮ್ಮ ಕಚೇರಿಯೊಳಗೆ ಅಪರಿಚಿತ ದುಷ್ಕರ್ಮಿಗಳ ಹಲ್ಲೆಯಿಂದಾಗಿ ಸಾವನ್ನಪ್ಪಿದ್ದಾರೆ.


COMMERCIAL BREAK
SCROLL TO CONTINUE READING

ದಾಳಿಯ ನಂತರ ತಿವಾರಿ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ನಂತರ ಅವರು ಸಾವನ್ನಪ್ಪಿದರು ಎಂದು ತಿಳಿದುಬಂದಿದೆ.ಇದೇ ವೇಳೆ ಅಲ್ಲಿ ಉಪಸ್ಥಿತನಿದ್ದ ಹಿಂದೂ ಸಮಾಜ ಪಕ್ಷದ ಮುಖಂಡನ ಮೇಲೆಯೂ ಹಲ್ಲೆ ನಡೆಸಲಾಗಿದೆ. ಇದಾದ  ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.


ಕಮಲೇಶ್ ತಿವಾರಿ ಹಿಂದೂ ಮಹಾಸಭೆಯ ಮಾಜಿ ಸದಸ್ಯರಾಗಿದ್ದರು. ಈ ಹಿಂದೆ ಅವರು ತಮ್ಮ ವಿವಾದಾತ್ಮಕ ಹೇಳಿಕೆಗಳಿಗಾಗಿ ಸುದ್ದಿ ಮಾಡಿದ್ದರು. ಈಗ ಪೋಲಿಸರು ಈ ಘಟನೆ ಸಂಬಂಧಿಸಿದಂತೆ ತನಿಖೆಯನ್ನು ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.