ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾನೂನು ವಿರೋಧಿಸಿ ದೇಶಾದ್ಯಂತ ಇಂದು ಭಾರತ್ ಬಂದ್‌ಗೆ ಕರೆ ನೀಡಲಾಗಿದೆ. ನಾಲ್ಕು ಗಂಟೆಗಳ ಕಾಲ ನಡೆಯುವ ಈ ಬಂದ್‌ಗೆ ಒಟ್ಟು ಹದಿನೆಂಟು ರಾಜಕೀಯ ಪಕ್ಷಗಳು ಸೇರಿ ಅನೇಕ ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿವೆ.


COMMERCIAL BREAK
SCROLL TO CONTINUE READING

ಈ ಮಧ್ಯೆ ಇಂದು ಸಂಜೆ ಮಾತುಕತೆಗೆ ಬರುವಂತೆ ರೈತ ನಾಯಕರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit shah) ಸಂದೇಶ ರವಾನಿಸಿದ್ದು, ಸಮಸ್ಯೆ ಇತ್ಯರ್ಥವಾಗುವ ಲಕ್ಷಣಗಳು ಕಂಡುಬರುತ್ತಿವೆ.


ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಗೃಹಬಂಧನದಲ್ಲಿರಿಸಲಾಗಿದೆ- ಆಮ್ ಆದ್ಮಿ ಪಕ್ಷ ಆರೋಪ


ಹೀಗಿರುವಾಗಲೇ ರೈತ ನಾಯಕ ರಾಕೇಶ್ ಟಿಕೈಟ್ 'ನನಗೊಂದು ಕರೆ ಬಂದಿದ್ದು, ಇಂದು ಸಂಜೆ ಏಳು ಗಂಟೆಗೆ ಅಮಿತ್ ಶಾ ನಮ್ಮನ್ನು ಭೇಟಿಯಾಗಲು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.


Bharat Bandh: ರೈತರನ್ನು ಬೆಂಬಲಿಸಿ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ


ಡಿ.04 ರಂದು ಕೇಂದ್ರ ಸರ್ಕಾರ ಹಾಗೂ ರೈತ ಸಂಘಟನೆಗಳ ನಡುವೆ ಸಭೆ ನಡೆದಿತ್ತು. ಅಲ್ಲದೇ ನಾಳೆ ಕೂಡ ಎರಡೂ ಬಣಗಳ ನಡುವೆ ಮತ್ತೊಂದು ಸುತ್ತಿನ ಮಾತುಕತೆ ನಡೆಯುವುದಿದೆ.


ಭಾರತದ ಈ ಪ್ರಾಂತ್ಯದಲ್ಲಿ Petrol-Diesel ಇಲ್ಲದೆಯೇ ವಾಹನಗಳು ಓಡಾಡುತ್ತವಂತೆ... ಕಾರಣ ಇಲ್ಲಿದೆ


ಈ ಮಧ್ಯೆ ಅಮಿತ್ ಶಾ ಇಂದು(ಡಿ.08) ಸಂಜೆಯೇ ತುರ್ತು ಸಭೆ ಕರೆದಿದ್ದು, ಈ ಸಭೆಯಲ್ಲಿ ಭಾಗವಹಿಸುವುದಾಗಿ ರೈತ ಸಂಘಟನೆಗಳು ಘೋಷಿಸಿವೆ.