ನವದೆಹಲಿ: ಪಂಚ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವು ಹೀನಾಯ ಸೋಲನ್ನು ಕಂಡಿರುವ ಬೆನ್ನಲ್ಲೇ ಈಗ ಪಕ್ಷದ ನಾಯಕ ರಾಹುಲ್ ಗಾಂಧಿ ಜನರ ತೀರ್ಪಿಗೆ ತಲೆಬಾಗಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತಾಗಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ (Rahul Gandhi ) "ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ. ಜನಾದೇಶವನ್ನು ಗೆದ್ದವರಿಗೆ ಶುಭಾಶಯಗಳು.ಎಲ್ಲಾ ಕಾಂಗ್ರೆಸ್ (Congress) ಕಾರ್ಯಕರ್ತರು ಮತ್ತು ಸ್ವಯಂಸೇವಕರಿಗೆ ಅವರ ಶ್ರಮ ಮತ್ತು ಸಮರ್ಪಣೆಗಾಗಿ ನನ್ನ ಕೃತಜ್ಞತೆಗಳು.ನಾವು ಇದರಿಂದ ಕಲಿಯುತ್ತೇವೆ ಮತ್ತು ಭಾರತದ ಜನರ ಹಿತಾಸಕ್ತಿಗಳಿಗಾಗಿ ಕೆಲಸ ಮಾಡುತ್ತಲೇ ಇರುತ್ತೇವೆ" ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.


Election Result 2022: ಬಿಜೆಪಿ ಪ್ರಧಾನ ಕಚೇರಿಯಲ್ಲಿ ವಿಜಯೋತ್ಸವ, ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತು


ಪಂಜಾಬ್ ನಲ್ಲಿ ಎರಡನೇ ಬಾರಿ ಅಧಿಕಾರದ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಗೆ ಭಾರಿ ಹಿನ್ನಡೆಯುಂಟಾಗಿದೆ.ಇತ್ತೀಚೆಗಷ್ಟೇ ಪಂಜಾಬ್ ಸಿಎಂ ಆಗಿದ್ದ ಚರಣ್​ಜಿತ್ ಸಿಂಗ್ ಚನ್ನಿ ಕೂಡ ಸೋಲು ಕಂಡಿದ್ದಾರೆ.ಅಮೃತಸರದಿಂದ ಸ್ಪರ್ಧಿಸಿದ್ದ ನವಜೋತ್ ಸಿಂಗ್ ಸಿಧು ಕೂಡ ಪರವಾಭವಗೊಂಡಿದ್ದು,‘ಕೈ’ಪಕ್ಷಕ್ಕೆ ದೊಡ್ಡ ಆಘಾತವುಂಟಾಗಿದೆ.


ಇದನ್ನೂ ಓದಿ : ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ-ಸಿಎಂ ಬೊಮ್ಮಾಯಿ ವಿಶ್ವಾಸ


ಇನ್ನೂ ಉತ್ತರಪ್ರದೇಶ ಮತ್ತು ಉತ್ತರಾಖಂಡದಲ್ಲಿ ಬಿಜೆಪಿ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ.ಗೋವಾ ಮತ್ತು ಮಣಿಪುರದಲ್ಲಿ ಅತಿಹೆಚ್ಚು ಸ್ಥಾನಗಳನ್ನು ಗೆದ್ದ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ ಇದೀಗ ಅಲ್ಲಿಯೂ ಸರ್ಕಾರ ರಚಿಸಲು ಕಸರತ್ತು ನಡೆಸುತ್ತಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.