ಸುಷ್ಮಾ ಸ್ವರಾಜ್ ಅವರನ್ನು ನೋಡಿದೊಡನೆ ಎಲ್ಲರಲ್ಲೂ ತಾಯಿ ಮನೋಭಾವ ಮೂಡುತ್ತಿತ್ತು: ಹೆಚ್.ಡಿ. ದೇವೇಗೌಡ

ಸಹೋದರಿ ಸುಷ್ಮಾ ಸ್ವರಾಜ್ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ತೀವ್ರ ನೋವುಂಟಾಗಿದೆ: ಹೆಚ್.ಡಿ. ದೇವೇಗೌಡ  

Last Updated : Aug 7, 2019, 10:10 AM IST
ಸುಷ್ಮಾ ಸ್ವರಾಜ್ ಅವರನ್ನು ನೋಡಿದೊಡನೆ ಎಲ್ಲರಲ್ಲೂ ತಾಯಿ ಮನೋಭಾವ ಮೂಡುತ್ತಿತ್ತು: ಹೆಚ್.ಡಿ. ದೇವೇಗೌಡ title=

ಬೆಂಗಳೂರು: ಸುಷ್ಮಾ ಸ್ವರಾಜ್ ಅವರನ್ನು ನೋಡಿದೊಡನೆ ಎಲ್ಲರಲ್ಲೂ ತಾಯಿ ಮನೋಭಾವ ಮೂಡುತ್ತಿತ್ತು ಎಂದು ಸುಷ್ಮಾ ಸ್ವರಾಜ್ ಅವರ ನಿಧನಕ್ಕೆ ಸಂತಾಪ ಸೂಚಿಸುತ್ತಾ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರು ಕಂಬನಿ ಮಿಡಿದಿದ್ದಾರೆ.

ಸಹೋದರಿ ಸುಷ್ಮಾ ಸ್ವರಾಜ್ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ತೀವ್ರ ನೋವುಂಟಾಗಿದೆ. ಅವರನ್ನು ನೋಡಿದ ತಕ್ಷಣ ಎಲ್ಲರಲ್ಲೂ ತಾಯಿ ಮನೋಭಾವ ಮೂಡುತಿತ್ತು.

ಆಕೆ ಅತೀ ಚಿಕ್ಕ ವಯಸ್ಸಿನಲ್ಲೇ ಹರಿಯಾಣ ರಾಜ್ಯದಲ್ಲಿ ಸಂಪುಟ ದರ್ಜೆ ಸಚಿವೆ ಆಗಿ ಉತ್ತಮ ಕಾರ್ಯ ನಿರ್ವಹಿಸಸಿದ್ದರು. ಈ ದೇಶದ ಎರಡನೇ ಮಹಿಳಾ ವಿದೇಶಾಂಗ ಸಚಿವೆಯಾಗಿಯೂ ಉತ್ತಮ ಕಾರ್ಯ ನಿರ್ವಹಿಸಿದ್ದರು. ಸುಷ್ಮಾ ನಿಧನದಿಂದ ನಮ್ಮ ದೇಶ ಒಬ್ಬ ಧೈರ್ಯವಂತೆ ಹಾಗೂ ಮಾತೃ ಹೃದಯಿ ಹೆಣ್ಣು ಮಗಳನ್ನ ಕಳೆದು ಕೊಂಡಿದ್ದೀವಿ. 

ಸುಷ್ಮಾ ಸ್ವರಾಜ್ ನಿಧನದಿಂದ ರಾಷ್ಟ್ರಕ್ಕೆ ತುಂಬಲಾಗದ ನಷ್ಟ ಉಂಟಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬಕ್ಕೆ ಹಾಗು ಅವರ ಅಪಾರ ಅಭಿಮಾನಿಗಳಿಗೆ ದುಃಖ ಬರಿಸುವ ಶಕ್ತಿ ತುಂಬಲಿ ಎಂದು ದೇವೇಗೌಡರು ಪ್ರಾರ್ಥಿಸಿದ್ದಾರೆ.
 

Trending News