ನವದೆಹಲಿ:ಛತ್ತೀಸ್ ಗಡ್ ದಲ್ಲಿನ ಚುನಾವಣಾ ಫಲಿತಾಂಶ ಸಂತಸ ತಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜನತಾ ಕಾಂಗ್ರೆಸ್ ನ ಅಜಿತ್ ಜೋಗಿ ಸಂತಸ ವ್ಯಕ್ತಪಡಿಸಿದ್ದಾರೆ. 


COMMERCIAL BREAK
SCROLL TO CONTINUE READING

ಸುದ್ದಿಗಾರರೊಂದಿಗೆ ಮಾತನಾಡಿದ ಅಜೀತ್ ಜೋಗಿ ಛತ್ತೀಸ್ ಗಡ್ ದಲ್ಲಿನ ಫಲಿತಾಂಶ ಸಂತಸ ತಂದಿದೆ.ಜನರು ಬಿಜೆಪಿಗೆ ಪರ್ಯಾಯವಾಗಿರುವ ಪಕ್ಷವನ್ನು ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದರು. ಕಳೆದ 15 ವರ್ಷಗಳಿಂದ ಅಧಿಕಾರದಲ್ಲಿದ್ದ ರಮಣಸಿಂಗ್ ನೇತೃತ್ವದ ಬಿಜೆಪಿ ಸರ್ಕಾರ ಈ ಬಾರಿ ಆಡಳಿತ ವಿರೋಧಿ ಅಲೆಯನ್ನು ಎದುರಿಸಿತ್ತು ಈ ಹಿನ್ನಲೆಯಲ್ಲಿ ಈ ಚುನಾವಣೆಯಲ್ಲಿ ಬಿಜೆಪಿ ಭಾರಿ ಮುಖಭಂಗ ಅನುಭವಿಸಿದೆ.


ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದ ಅಜಿತ್ ಜೋಗಿ ತಮ್ಮದೇ ಆದ ಜನತಾ ಕಾಂಗ್ರೆಸ್ ಪಕ್ಷವನ್ನು ಹುಟ್ಟು ಹಾಕಿದ್ದರು.ಈಗ ಮೂರನೇ ಶಕ್ತಿಯಾಗಿ ತಮ್ಮ ಪಕ್ಷ ರಾಜ್ಯದಲ್ಲಿ ಬೆಳೆಯಲಿದೆ ಎಂದು ಅವರು ತಿಳಿಸಿದರು