ನವದೆಹಲಿ: ಪ್ರಸಕ್ತ ಲೋಕಸಭೆಯ ಕೊನೆಯ ಅಧಿವೇಶನದ ಕೊನೆಯ ದಿನವಾದ ಇಂದು ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುವ ಮೂಲಕ ಎಲ್ಲರನ್ನು ಒಂದು ಕ್ಷಣ ಅಚ್ಚರಿಗೊಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಮೊದಲು 16ನೇ ಲೋಕಸಭೆಯಲ್ಲಿ ಅಂತಿಮ  ಭಾಷಣ ಮಾಡಿದ ಮುಲಾಯಂ ಸಿಂಗ್ ಯಾದವ್‌, ನರೇಂದ್ರ ಮೋದಿ ಇನ್ನೊಮ್ಮೆ ಪ್ರಧಾನಿಯಾಗಲಿ ಎಂದು ಹಾರೈಸಿದರು. 


ಸದನದಲ್ಲಿ ಎಲ್ಲರ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಮುಲಾಯಂ ಸಿಂಗ್ ಯಾದವ್ " ನಾನು ಪ್ರಧಾನಿಯವರಿಗೆ ಧನ್ಯವಾದಗಳನ್ನು ಹೇಳಲು ಇಚ್ಚಿಸುತ್ತೇನೆ,ಅವರು ಎಲ್ಲರನ್ನು ಜೊತೆಯಾಗಿ ತೆಗೆದುಕೊಂಡು ಹೋಗುವ ಪ್ರಯತ್ನ ಮಾಡಿದ್ದಾರೆ.ಇಲ್ಲಿರುವ ಎಲ್ಲ ಸದಸ್ಯರು ಮತ್ತೊಮ್ಮೆ ಗೆದ್ದು ಬರಲಿ.ನೀವು(ಮೋದಿ) ಮತ್ತೊಮ್ಮೆ ಪ್ರಧಾನಮಂತ್ರಿಯಾಗಲಿ ಎಂದು ಹೇಳಿದರು.


ಇದೇ ವೇಳೆ ಯಾದವ್ ಅವರ ಹೇಳಿಕೆಯನ್ನು ಪ್ರಧಾನಿ ಮೋದಿ ಸ್ವಾಗತಿಸಿದರೆ ಪಕ್ಕದಲ್ಲೇ ಕುಳಿತಿದ್ದ ಸೋನಿಯಾ ಗಾಂಧಿ ಯಾವುದೇ ಪ್ರತಿಕ್ರಿಯೆ ನೀಡದೆ ಸುಮ್ಮನೇ ಕುಳಿತುಕೊಂಡಿದ್ದರು.