ಬಿಜೆಪಿ ಪುನಃ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಕರಡು ರಚನೆ- ಉತ್ತರಖಂಡ್ ಸಿಎಂ ಭರವಸೆ

ಉತ್ತರಾಖಂಡ ವಿಧಾನಸಭೆ ಚುನಾವಣೆಗೆ ಕೆಲವು ದಿನಗಳ ಮುಂಚಿತವಾಗಿ, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶನಿವಾರದಂದು ಬಿಜೆಪಿ ಅಧಿಕಾರಕ್ಕೆ ಬಂದರೆ, ಏಕರೂಪ ನಾಗರಿಕ ಸಂಹಿತೆಯ ಕರಡು ಸಿದ್ಧಪಡಿಸಲು ಸಮಿತಿಯನ್ನು ರಚಿಸುವುದಾಗಿ ಭರವಸೆ ನೀಡಿದ್ದಾರೆ.

Written by - Zee Kannada News Desk | Last Updated : Feb 12, 2022, 04:35 PM IST
  • ಉತ್ತರಾಖಂಡ ವಿಧಾನಸಭೆ ಚುನಾವಣೆಗೆ ಕೆಲವು ದಿನಗಳ ಮುಂಚಿತವಾಗಿ, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶನಿವಾರದಂದು ಬಿಜೆಪಿ ಅಧಿಕಾರಕ್ಕೆ ಬಂದರೆ, ಏಕರೂಪ ನಾಗರಿಕ ಸಂಹಿತೆಯ ಕರಡು ಸಿದ್ಧಪಡಿಸಲು ಸಮಿತಿಯನ್ನು ರಚಿಸುವುದಾಗಿ ಭರವಸೆ ನೀಡಿದ್ದಾರೆ.
ಬಿಜೆಪಿ ಪುನಃ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಕರಡು ರಚನೆ- ಉತ್ತರಖಂಡ್ ಸಿಎಂ ಭರವಸೆ  title=

ಹೊಸದಿಲ್ಲಿ: ಉತ್ತರಾಖಂಡ ವಿಧಾನಸಭೆ ಚುನಾವಣೆಗೆ ಕೆಲವು ದಿನಗಳ ಮುಂಚಿತವಾಗಿ, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶನಿವಾರದಂದು ಬಿಜೆಪಿ ಅಧಿಕಾರಕ್ಕೆ ಬಂದರೆ, ಏಕರೂಪ ನಾಗರಿಕ ಸಂಹಿತೆಯ ಕರಡು ಸಿದ್ಧಪಡಿಸಲು ಸಮಿತಿಯನ್ನು ರಚಿಸುವುದಾಗಿ ಭರವಸೆ ನೀಡಿದ್ದಾರೆ.

ಸಮಿತಿಯು ಕಾನೂನು ತಜ್ಞರು, ಬುದ್ಧಿಜೀವಿಗಳು ಮತ್ತು ಇತರ ಮಧ್ಯಸ್ಥಗಾರರನ್ನು ಒಳಗೊಂಡಿರುತ್ತದೆ ಎಂದು ಅವರು ಹೇಳಿದರು. ಮದುವೆ, ವಿಚ್ಛೇದನ, ಭೂ ಆಸ್ತಿ ಮತ್ತು ಉತ್ತರಾಧಿಕಾರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಸಮಿತಿಯು ವ್ಯವಹರಿಸಲಿದೆ ಎಂದು ಸಿಎಂ ವೀಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ-10 Rupee Coin: 10 ರೂಪಾಯಿಯ ಯಾವ ನಾಣ್ಯ ಮಾನ್ಯವಾಗಿದೆ? ಗೊಂದಲ ನಿವಾರಿಸಿದ ಸರ್ಕಾರ

"ಇದು ಭಾರತದ ಸಂವಿಧಾನ ಕರ್ತೃಗಳ ಕನಸುಗಳನ್ನು ನನಸಾಗಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಲಿದೆ ಮತ್ತು ಸಂವಿಧಾನದ ಆತ್ಮವನ್ನು ನನಸಾಗಿಸುತ್ತದೆ.ಇದು ಸಮಾಜದ ಎಲ್ಲಾ ನಾಗರಿಕರಿಗೆ ಅವರ ಧರ್ಮವನ್ನು ಲೆಕ್ಕಿಸದೆ ಸಮಾನ ಕಾನೂನಿನ ಪರಿಕಲ್ಪನೆಯನ್ನು ಪ್ರಸ್ತುತಪಡಿಸುವ ಭಾರತೀಯ ಸಂವಿಧಾನದ 44 ನೇ ವಿಧಿಯತ್ತ ಪರಿಣಾಮಕಾರಿ ಹೆಜ್ಜೆಯಾಗಿದೆ. ”ಎಂದು ಅವರು ಹೇಳಿದ್ದಾರೆ.

ಸಾಮಾನ್ಯ ನಾಗರಿಕ ಸಂಹಿತೆಯು "ಸಾಮಾಜಿಕ ಸೌಹಾರ್ದತೆ ಮತ್ತು ಲಿಂಗ ಸಮಾನತೆಯನ್ನು ಉತ್ತೇಜಿಸುತ್ತದೆ" ಎಂದು ಧಾಮಿ ಹೇಳಿದರು. ಸಾಮಾನ್ಯ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವ ಮೂಲಕ ದೇಶಕ್ಕೆ ಮಾದರಿಯಾಗಿರುವ ಗೋವಾದಿಂದ ಈ ನಿರ್ಧಾರಕ್ಕೆ ಉತ್ತರಖಂಡದ ಬಿಜೆಪಿ ಸರ್ಕಾರ ಸ್ಫೂರ್ತಿ ಪಡೆಯಲಿದೆ.ಸಾಮಾನ್ಯ ನಾಗರಿಕ ಸಂಹಿತೆಯು ಮಹಿಳಾ ಸಬಲೀಕರಣವನ್ನು ಬಲಪಡಿಸುವುದರ ಜೊತೆಗೆ ಸಾಮಾಜಿಕ ಸೌಹಾರ್ದತೆ ಮತ್ತು ಲಿಂಗ ಸಮಾನತೆಯನ್ನು ಉತ್ತೇಜಿಸುತ್ತದೆ ಎಂದು ಹೇಳಿದರು.

ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದದ ನಡುವೆ ಧಾಮಿ ಅವರ ಹೇಳಿಕೆ ಬಂದಿದೆ, ಕರ್ನಾಟಕ ಹೈಕೋರ್ಟ್ ಪ್ರಸ್ತುತ ಹಿಜಾಬ್ ನಿಷೇಧದ ಅರ್ಜಿಗಳ ವಿಚಾರಣೆ ನಡೆಸುತ್ತಿದೆ.ಶುಕ್ರವಾರದಂದು, ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ಅವರು ಏಕರೂಪ ನಾಗರಿಕ ಸಂಹಿತೆ "ಸಮಯದ ಅಗತ್ಯ" ಎಂದು ಹೇಳಿದ್ದರು, ಇದನ್ನು ಸಂಸತ್ತಿನಲ್ಲಿ ಮತ್ತು ಸಮಾಜದಲ್ಲಿ ಚರ್ಚಿಸಬೇಕು ಎಂದು ಹೇಳಿದರು.

ಇದನ್ನೂ ಓದಿ-#JamesTeaser: ದೊಡ್ಮನೆ ಅಭಿಮಾನಿಗಳಿಗೆ ಬಿಗ್ ಗಿಫ್ಟ್; ಬಹುನಿರೀಕ್ಷಿತ 'ಜೇಮ್ಸ್' ಚಿತ್ರದ ಟೀಸರ್ ರಿಲೀಸ್

ಏತನ್ಮಧ್ಯೆ, ಉತ್ತರಾಖಂಡ್ ಫೆಬ್ರವರಿ 14 ರಂದು 70 ವಿಧಾನಸಭೆಗಳನ್ನು ಆಯ್ಕೆ ಮಾಡಲಿದೆ. ಮತಗಳ ಎಣಿಕೆ ಮಾರ್ಚ್ 10 ರಂದು ನಡೆಯಲಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News