ನೀವು ಕಾನೂನು ಪದವೀಧರರೇ ಹಾಗಿದ್ದಲ್ಲಿ ನಿಮಗೊಂದು ಸುವರ್ಣ ಅವಕಾಶ ಇಲ್ಲಿದೆ..!

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Last Updated : Jul 8, 2020, 10:42 PM IST
ನೀವು ಕಾನೂನು ಪದವೀಧರರೇ ಹಾಗಿದ್ದಲ್ಲಿ ನಿಮಗೊಂದು ಸುವರ್ಣ ಅವಕಾಶ ಇಲ್ಲಿದೆ..! title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ಹಿರಿಯ ವಕೀಲರ ಬಳಿ ತರಬೇತಿ ಅವಧಿಯಲ್ಲಿ ಶೀಷ್ಯವೇತನಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಆಯ್ಕೆಯಾಗಲು ಆನ್‌ಲೈನ್ ಮೂಲಕ ಅರ್ಜಿಯನ್ನು ಇದೇ ಜುಲೈ. 01 ರಿಂದ ನವಂಬರ್. 30 ರವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ಪರಿಶಿಷ್ಟ ಜಾತಿಯ ಕಾನೂನು ಪದವೀಧರರು ಇಲಾಖಾ ವೆಬ್‌ಸೈಟ್ www.sw.kar.nic.in ನಲ್ಲಿ ಅರ್ಜಿ ಸಲ್ಲಿಸಬೇಕು.

ಆನ್‌ಲೈನ್ ಮೂಲಕ ಸಲ್ಲಿಸಿದ ಅರ್ಜಿಯ ಸ್ವಿಕೃತಿ ಪ್ರತಿ ಹಾಗೂ ಸೂಕ್ತ ದಾಖಲಾತಿಗಳನ್ನು ಕಡ್ಡಾಯವಾಗಿ #ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ನವೆಂಬರ್. 30 ರೊಳಗಾಗಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ ಹಾಗೂ #ಆಯಾ ತಾಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಂಪರ್ಕಿಸಬಹುದು ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Trending News