ನವದೆಹಲಿ: ಭಾರತೀಯ ವಾಯುಪಡೆಯ ಮಾರ್ಷಲ್ ಅರ್ಜುನ್ ಸಿಂಗ್ ಅವರ ಅಂತ್ಯಕ್ರಿಯೆ ಮೆರವಣಿಗೆ ಇಂದು ರಾಷ್ಟ್ರೀಯ ರಾಜಧಾನಿಯಲ್ಲಿ ನಡೆಯಲಿದೆ.


COMMERCIAL BREAK
SCROLL TO CONTINUE READING

ರಕ್ಷಣಾ ಸಚಿವ ನಿರ್ಮಲಾ ಸೀತಾರಾಮನ್ ಅವರು ಏರ್ ಫೋರ್ಸ್ ಮಾರ್ಷಲ್ ಅರ್ಜುನ್ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿ ಗೌರವ ಸಲ್ಲಿಸಿದರು. 



 


ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾರ್ಷಲ್ ಅರ್ಜುನ್ ಸಿಂಗ್ ಶನಿವಾರ ತಮ್ಮ 98ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದರು. 


ಇವರ ಮರಣದ ಗೌರವಾರ್ತವಾಗಿ ಸೋಮವಾರ ದೆಹಲಿಯ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ರಾಷ್ಟ್ರ ಧ್ವಜವನ್ನು ಅರ್ಧಕ್ಕೆ ಹಾರಿಸುವ ಮೂಲಕ ಸಂತಾಪ ಸೂಚಿಸಲಾಗುವುದು ಮತ್ತು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರುವುದು ಎಂದು ಮೂಲಗಳು ತಿಳಿಸಿವೆ. 


ಮಾರ್ಷಲ್ ಅವರ ಅಂತಿಮ ಸಂಸ್ಕಾರವನ್ನು ರಾಜ್ಯದ ಸಕಲ ಸರ್ಕಾರಿ ಗೌರವಗಳೊಂದಿಗೆ ಮತ್ತು ಗನ್ ಸಲ್ಯೂಟ್ ನೊಂದಿಗೆ ನೆರವೇರಿಸಲಾಗುವುದು ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ತಿಳಿಸಿದರು.